National Political News: ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ್ರೆ, ಹಜ್ ಯಾತ್ರೆಗೆ 1 ಲಕ್ಷ ರೂಪಾಯಿ ನೆರವು ನೀಡಲಾಗುತ್ತದೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಅಲ್ಲದೇ ಆಂಧ್ರಪ್ರದೇಶದಲ್ಲೂ ಟಿಡಿಪಿ, ಜನಸೇನಾ ಪಕ್ಷ ಮತ್ತು ಬಿಜೆಪಿ ಅಧಿಕಾರಕ್ಕೆ ಬಂದರೆ, ಹಜ್ ಯಾತ್ರಿಕರಿಗೆ 1 ಲಕ್ಷ ರೂಪಾಯಿ ನೀಡಲಾಗುತ್ತದೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ. ನೆಲ್ಲೂರಿನಲ್ಲಿ ನಡೆದ ಮುಸ್ಲಿಂ ಸಮಾಾವೇಶದಲ್ಲಿ ಮಾತನಾಡಿದ ನಾಯ್ಡು, ಹೈದರಾಬಾದ್ನಲ್ಲಿರುವ ಮುಸ್ಲಿಂಮರು ಉಳಿದ ಕ್ಷೇತ್ರದಲ್ಲಿರುವ ಮುಸ್ಲಿಂರಿಗಿಂತ ಮುಂದಿದ್ದಾರೆ. ಇಲ್ಲಿ ಉರ್ದು ವಿಶ್ವವಿದ್ಯಾಲಯ ಮತ್ತು ಹಜ್ ಸಹ ನಿರ್ಮಿಸಿದ್ದೇನೆ. ಮುಂದಿನ ದಿನಗಳಲ್ಲಿ ಕೇಂದ್ರದಲ್ಲಿ ಎನ್ಡಿಎ ಸರ್ಕಾಾರ ಮತ್ತು ಆಂಧ್ರದಲ್ಲಿ ಟಿಡಿಪಿ, ಜನಸೇನಾ ಮತ್ತು ಬಿಜೆಪಿ ಅಧಿಕಾರಕ್ಕೆ ಬಂದ್ರೆ, ಹಜ್ ಯಾಾತ್ರೆಗೆ 1 ಲಕ್ಷ ನೆರವು ನೀಡುತ್ತಾರೆಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಅಲ್ಲದೇ, ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಒಂದೇ ಒಂದು ಮಸೀದಿ ನಿರ್ಮಿಸುವ ಕೆಲಸ ಮಾಡಲಿಲ್ಲ. ಅಲ್ಲದೇ ನಾವು ಅಧಿಕಾರಕ್ಕೆ ಬಂದರೆ, ಅಸ್ತಿತ್ವದಲ್ಲಿರುವ ಎಲ್ಲ ಯೋಜನೆಗಳು ಮುಂದುವರಿಯುತ್ತದೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ನೇಹಾಗೆ ಆದಂತಹ ಘಟನೆ ಇನ್ನೊಬ್ಬರಿಗೆ ಆಗಬಾರದು ಅನ್ನೋದು ನಮ್ಮ ಬೇಡಿಕೆ: ಮುರುಗೇಶ್ ನಿರಾಣಿ