Sandalwood News: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಆ್ಯಂಡ್ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಎ1 ಆರೋಪಿಯಾಗಿ ಪವಿತ್ರಾ ಗೌಡರನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಆದರೆ ಇದರ ಬೆನ್ನಲ್ಲೇ ಕೊಲೆ ಕೇಸ್ನಿಂದ ಬಚಾವ್ ಮಾಡಲು ಕಾಂಗ್ರೆಸ್ ಸರ್ಕಾರದ ಪ್ರಭಾವಿ ಸಚಿವರೊಬ್ಬರು ಪೊಲೀಸ್ ತನಿಖಾಧಿಕಾರಿಗೆ 128 ಬಾರಿ ಕರೆ ಮಾಡಿರುವುದು ಬೆಳಕಿಗೆ ಬಂದಿದೆ.
ಇಡೀ ರಾಜ್ಯಾದ್ಯಂತ ತೀವ್ರವಾಗಿ ಚರ್ಚೆಯಾಗುತ್ತಿರುವ ದರ್ಶನ್ ಕೊಲೆ ಕೇಸಿನಲ್ಲಿ ಪೊಲೀಸರು ಬಂಧಿಸಿದ ಪ್ರಕರಣವನ್ನು ಮುಚ್ಚಿಹಾಕಲು ಸ್ವತಃ ರಾಜ್ಯ ಸರ್ಕಾರದ ಪ್ರಭಾವಿ ಸಚಿವರೇ ಮುಂದಾಗಿದ್ದಾರೆ. ನಟ ದರ್ಶನ್, ಆತನ 2ನೇ ಪತ್ನಿ ಪವಿತ್ರಾಗೌಡ ಹಾಗೂ 15 ಜನ ಸಹಚರರು ಸೇರಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ್ದಾರೆ. ಈ ಕೃತ್ಯ ಅತ್ಯಂತ ಅಮಾನವೀಯವಾಗಿದ್ದು, ಇದನ್ನು ರಾಜ್ಯಾದ್ಯಂತ ಎಲ್ಲರೂ ಖಂಡಿಸುತ್ತಿದ್ದಾರೆ.
ದರ್ಶನ್ ಬಚಾವ್ ಮಾಡಲು ಪ್ರಭಾವಿ ರಾಜಕಾರಣಿಗಳ ಶತಪ್ರಯತ್ನ ಮಾಡುತ್ತಿದ್ದಾರೆ. ದರ್ಶನ್ ರಕ್ಷಿಸಲು ಪೊಲೀಸರ ಮೇಲೆ ರಾಜಕಾರಣಿಗಳ ಒತ್ತಡ ಹಾಕುತ್ತಿದ್ದಾರೆ. ಇಬ್ಬರು ಕಾಂಗ್ರೆಸ್ ಸಚಿವರು, ಒಬ್ಬ ಬಿಜೆಪಿ ರಾಜಕಾರಣಿಯನ್ನು ಭೇಟಿಯಾಗಿರುವ ನಟ ದರ್ಶನ್ ಪರ ಬೆಂಬಲಿಗರು, ಕೂಡಲೇ ದರ್ಶನ್ನನ್ನು ಹೊರಗೆ ಕರೆತರುವಂತೆ ಹಾಗೂ ಮರ್ಡರ್ ಕೆಸ್ನಿಂದ ಮುಕ್ತಗೊಳಿಸುವಂತೆ ಒತ್ತಡ ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಒಬ್ಬ ಸಚಿವ ಸೇರಿದಂತೆ ಮೂವರು ರಾಜಕಾರಣಿಗಳಿಂದ ಪೊಲೀಸರ ಮೇಲೆ ಶತ ಪ್ರಯತ್ನ ಮಾಡಲಾಗುತ್ತಿದೆ. ತನಿಖೆಯಲ್ಲಿರುವ ಅಧಿಕಾರಿಗಳ ಮೇಲೂ ರಾಜಕಾರಣಿಗಳ ಒತ್ತಡ ಹಾಕಲಾಗುತ್ತಿದ್ದು, ಪೊಲೀಸರು ಮಾತ್ರ ಪೊಲೀಸರ ಕರೆ ಸ್ವೀಕರಿಸದೇ ತನಿಖೆಯನ್ನು ಮುಂದುವರೆಸುತ್ತಿದ್ದಾರೆ.
ತನಿಖಾ ಪೊಲೀಸ್ ಅಧಿಕಾರಿಗೆ 128 ಬಾರಿ ಕರೆ ಮಾಡಿದರೂ ಸ್ವೀಕರಿಸದ ಹಿನ್ನೆಲೆಯಲ್ಲಿ ಇದೇ ಕೇಸಿನ ಮತ್ತೊಬ್ಬ ಅಧಿಕಾರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಆಗ ನಾನು ರಾತ್ರಿ ವೇಳೆ ನಟ ದರ್ಶನ್ ಭೇಟಿ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಪ್ರಭಾವಿ ರಾಜಕಾರಣಿ ಹೇಳಿದ್ದಾರೆ. ನಿನ್ನೆವರೆಗೂ ದರ್ಶನ್ ಬಚಾವ್ ಮಾಡಲು ಇನ್ನಿಲ್ಲದ ಪ್ರಯತ್ನ ಮಾಡಿದ ರಾಜಕಾರಣಿ, ಈಗ ದರ್ಶನ್ ಭೇಟಿಯಾಗಲು ಅವಕಾಶ ಕೊಡಿ, ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.
ಈ ಎಲ್ಲಾ ಬೆಳವಣಿಗೆಯ ಬೆನ್ನಲ್ಲೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ. ಕೇಸ್ ಪ್ರಾರಂಭದಿಂದ ಕಾಮಾಕ್ಷಿಪಾಳ್ಯದ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ ಅವರು ತನಿಖಾಧಿಕಾರಿ ಆಗಿದ್ದರು. ಆದರೆ ಗಿರೀಶ್ ನಾಯ್ಕ್ ಅವರ ಬದಲಿಗೆ ಇಂದಿನಿಂದ ಎಸಿಪಿ ಚಂದನ್ ತನಿಖಾಧಿಕಾರಿಯಾಗಿ ನೇಮಕವಾಗಿದ್ದಾರೆ. ಇನ್ಮುಂದೆ ಎಸಿಪಿ ಚಂದನ್ ಅವರ ಸೂಚನೆಯಲ್ಲೇ ರೇಣುಕಾಸ್ವಾಮಿ ಕೊಲೆ ಕೇಸ್ ಮುಂದೆ ಸಾಗಲಿದೆ.