Kolar News: ಕೋಲಾರ: ಎಟಿಎಂ ಮಷಿನ್ ಅನ್ನು ಗ್ಯಾಸ್ ಕಟರ್ನಿಂದ ಕಟ್ ಮಾಡಿ, 15 ಲಕ್ಷ ರೂಪಾಯಿ ಹಣ ಕಳ್ಳತನ ಮಾಡಿದ ಘಟನೆ ನಡೆದಿದೆ. ಕೋಲಾರ ಬಂಗಾರಪೇಟೆ ಮುಖ್ಯರಸ್ತೆಯ ಹಂಚಾಳ ಗೇಟ್ ಬಳಿ ಕೆನೆರಾ ಬ್ಯಾಂಕ್ ಎಟಿಎಂನಲ್ಲಿ ಈ ದರೋಡೆ ನಡೆದಿದೆ.
ಸ್ಥಳಕ್ಕೆ ಕೆಜಿಎಫ್ ಡಿವೈಎಸ್ಪಿ ರಮೇಶ್, ಹಾಗೂ ಪಿಐ ಸಂಜೀವರಾಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಟ್ಟಡದಲ್ಲಿ ಸಿಸಿ ಟಿವಿ ಹಾಕದ ಕಾರಣ ಮಾಲೀಕರಿಗೆ ಪಬ್ಲಿಕ್ ಸೇಫ್ಟಿ ಆಕ್ಟ್ ಅಡಿ ನೋಟಿಸ್ ನೀಡುವಂತೆ ಸೂಚನೆ ನೀಡಲಾಗಿದೆ.
ಈ ಕಟ್ಟಡ ಡೆಕ್ಕನ್ ಹೈಡ್ರಾಲೈಕ್ಸ್ ರವರಿಗೆ ಸೇರಿದ ವಾಣಿಜ್ಯ ಮಳಿಗೆಯಾಗಿದ್ದು, ಬೆರಳಚ್ಚು ತಂಡ ಹಾಗೂ ಡಾಗ್ ಸ್ಕ್ವಾಡ್ ತಂಡ ಶೋಧ ನಡೆಸಿ, ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಕಾಂತರಾಜು ವರದಿ ಜಾರಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ: ಸಚಿವ ತಂಗಡಗಿ
ಕಿಡಿಗೇಡಿಗಳಿಂದ ಹೋಲ್ಸೇಲ್ ಅಂಗಡಿಗೆ ಬೆಂಕಿ: ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ
ಡೈರೆಕ್ಟರ್ ಕ್ಯಾಪ್ ತೊಟ್ಟ ಚುಟು ಚುಟು ಕೋರಿಯೋಗ್ರಫರ್..ಹೀರೋ ಆದ ಭೂಷಣ್ ಮಾಸ್ಟರ್ ಈಗ ಡೈರೆಕ್ಟರ್…