Sunday, September 8, 2024

Latest Posts

ಭಗವದ್ಗೀತೆಯ 18 ಅಧ್ಯಾಯಗಳು..!

- Advertisement -

Devotional:

ಈ ಅಧ್ಯಾಯ ಅರ್ಜುನನ ಪ್ರಶ್ನೆಯೊಂದಿಗೆ ಆರಂಭವಾಗುತ್ತದೆ. ಶ್ರೀ ಕೃಷ್ಣನು ಅರ್ಜುನನಿಗೆ ಉಪದೇಶ ಮಾಡಿದ, ಜೀವನದ ಸಾರವನ್ನು ವಿವರಿಸುತ್ತದೆ. ಭಗವದ್ಗೀತೆಯಲ್ಲಿರುವ 18 ಅಧ್ಯಾಯಗಳ ಸಾರಾಂಶವನ್ನು ತಿಳಿದುಕೊಳ್ಳೋಣ ಬನ್ನಿ .

ಸಾಮಾನ್ಯವಾಗಿ ಎಲ್ಲರಿಗೂ ಭಗವದ್ಗೀತೆಯಲ್ಲಿ ಎನಿದೆ ಶ್ರೀ ಕೃಷ್ಣ ಯಾವರೀತಿ ಉಪದೇಶ ಮಾಡಿದ್ದಾನೆ ಎಂದು ತಿಳಿದುಕೊಳ್ಳಲು ಆಸಕ್ತಿ ಇರುತ್ತದೆ ಆದರೆ, 700 ಶ್ಲೋಕಗಳಿರುವ ಪುಸ್ತಕವನ್ನು ಓದುವುದಕ್ಕೆ ಸಮಯವಿಲ್ಲದೆ ಓದಲು ಆಗುವುದಿಲ್ಲ ,ಮತ್ತೆ ಕೆಲವರು ಆಸಕ್ತಿ ಇಲ್ಲದೆ ಓದುವುದಿಲ್ಲ ಆದಕಾರಣ ಸರಳವಾಗಿ ಒಂದೊಂದು ಅಧ್ಯಾಯಗಳ ಸಾರವನ್ನೂ ತಿಳಿದು ಕೊಳ್ಳೋಣ .

ಅಧ್ಯಾಯ 1:
ಸಂನ್ಯಾಸದ ಮತ್ತು ತ್ಯಾಗದ ಅಂತರವೇನು? ಓ ಹೃಷೀಕೇಶ, ಇದರ ನಿಜವನ್ನು ಕೇಶಿನಿಸೂದನನಾದ ನೀನು ನನಗೆ ತಿಳಿಸು. ಕೃಷ್ಣ ಮೊದಲು ಸಂನ್ಯಾಸದ ಬಗ್ಗೆ ಹೇಳಿದ್ದ ಆನಂತರ ಹಿಂದಿನ ಅಧ್ಯಾಯದಲ್ಲಿ ಯಜ್ಞ, ದಾನ, ತಪಸ್ಸು ಎನ್ನುವ ಕರ್ಮಗಳನ್ನು ಹೇಳಿದ. ಇಲ್ಲಿ ನಮಗೆ ಸ್ವಲ್ಪ ಗೊಂದಲವಾಗುತ್ತದೆ. ಹಾಗಾಗಿ ಅರ್ಜುನ ಕೃಷ್ಣನಲ್ಲಿ ಕರ್ಮತ್ಯಾಗ ಮತ್ತು ಕರ್ಮಸಂನ್ಯಾಸ ಇವೆರಡರ ನಡುವಿನ ಅಂತರವೇನು ಎಂದು ಕೇಳುತ್ತಾನೆ. ತ್ಯಾಗ ಮತ್ತು ಸಂನ್ಯಾಸ ಎರಡು ಪದಗಳು ಮೇಲ್ನೋಟಕ್ಕೆ ಒಂದೇ ಅರ್ಥವನ್ನು ಕೊಟ್ಟಂತೆ ಕಂಡರೂ ಕೂಡ, ಅದು ಬೇರೆಬೇರೆ. ಸಂನ್ಯಾಸ ಮತ್ತು ತ್ಯಾಗದ ಮೂಲಭೂತ ಅರ್ಥವೇನು..? ಅವೆರಡನ್ನು ಪ್ರತ್ಯೇಕವಾಗಿ ಅರ್ಥೈಸುವುದು ಹೇಗೆ ಎನ್ನುವುದು ಅರ್ಜುನನ ಪ್ರಶ್ನೆ. ಇಲ್ಲಿ ಅರ್ಜುನ ಕೃಷ್ಣನನ್ನು ಮಹಾಬಾಹೋ, ಹೃಷೀಕೇಶ ಮತ್ತು ಕೇಶಿನಿಸೂದನ ಎನ್ನುವ ಮೂರು ದಿವ್ಯ ನಾಮಗಳಿಂದ ಸಂಬೋಧಿಸಿದ್ದಾನೆ. ಇದು ಆತನಲ್ಲಿರುವ ಗುರುಭಕ್ತಿಯನ್ನು ಸೂಚಿಸುತ್ತದೆ ಮತ್ತು ಕೃಷ್ಣ ಕೇವಲ ವಸುದೇವನ ಮಗನಲ್ಲ, ಅವನು ‘ಭಗವಂತ’ ಎಂದು ಅರ್ಥ ಮಾಡಿಕೊಂಡು ಈ ಪ್ರಶ್ನೆ ಕೇಳಿರುವುದು ಇಲ್ಲಿ ಸ್ಪಷ್ಟವಾಗಿ ತಿಳಿಯುತ್ತದೆ. ‘ಮಹಾಬಾಹು’ ಅಂದರೆ ಶತ್ರುಗಳನ್ನು ಎದುರಿಸುವ, ನೀಳವಾದ, ಗಟ್ಟಿಯಾದ ತೊಳುಗಳುಳ್ಳವ ಎನ್ನುವುದು ಮೇಲ್ನೋಟದ ಅರ್ಥ. ದುಷ್ಟನಿಗ್ರಹ ಮಾಡಿ ಶಿಷ್ಟ ರಕ್ಷಣೆ ಮಾಡುವ, ಎಲ್ಲರೊಳಗಿನ ಅಜ್ಞಾನವನ್ನು ನೀಗಿಸುವ, ಲೋಕರಕ್ಷಕ ತೋಳುಳ್ಳವ ಎನ್ನುವುದು ಈ ದಿವ್ಯ ನಾಮದ ಹಿಂದಿರುವ ಮೂಲ ಅರ್ಥ. ಇನ್ನು ‘ಹೃಷೀಕ’ ಎಂದರೆ ಇಂದ್ರಿಯಗಳು. ಪಿಂಡಾಂಡದೊಳಗಿದ್ದು ಸರ್ವ ಇಂದ್ರಿಯಗಳನ್ನು ನಿಯಂತ್ರಿಸುವ ಭಗವಂತ ಹೃಷೀಕೇಶ. ‘ಕೇಶಿ’ ಅಂದರೆ ಸೂರ್ಯಕಿರಣ ವಾಯುದೇವರು ಸೌರಮಂಡಲದಲ್ಲಿದ್ದು ತನ್ನ ಅಂತರಂಗದ ಭಕ್ತನಾದ ಪ್ರಾಣದೇವರಲ್ಲಿದ್ದು ನಮ್ಮ ಅಭೀಷ್ಟವನ್ನು ಪೂರೈಸುವ, ನಮಗೆ ಶಕ್ತಿತುಂಬುವ ಭಗವಂತ ‘ಕೇಶಿನಿಸೂದನ ಅವನು ಬ್ರಹ್ಮಾಂಡ ಮತ್ತು ಪಿಂಡಾಂಡದೊಳಗಿದ್ದು ಇಡೀ ವಿಶ್ವವನ್ನು ನಿಯಂತ್ರಿಸುವ ಮಹಾಶಕ್ತಿ.

ಅಧ್ಯಾಯ 2:
ಕರ್ಮಗಳನ್ನು ತೊರೆಯುವುದನ್ನು ಬಲ್ಲವರು ‘ಸಂನ್ಯಾಸ’ ಎನ್ನುತ್ತಾರೆ. ಎಲ್ಲ ಕರ್ಮಗಳ ಫಲವನ್ನಷ್ಟೆ ತೊರೆಯುವುದನ್ನು ತಿಳಿದವರು ‘ತ್ಯಾಗ’ ಎನ್ನುತ್ತಾರೆ. ಇಲ್ಲಿ ಹೇಳುವ ಸಂನ್ಯಾಸ ಗೃಹಸ್ಥರನ್ನೂ ಒಳಗೊಂಡು ಎಲ್ಲ ಸಾಧಕರಿಗೂ ಅನ್ವಯವಾಗುವ ಸಂನ್ಯಾಸ. ಸಂನ್ಯಾಸದಲ್ಲಿ ಎರಡು ವಿಧ. ಒಂದು ಕರ್ಮದ ಫಲವನ್ನು ಬಿಡುವುದು, ಇನ್ನೊಂದು ಬಯಕೆಗಳಿಂದ ಪ್ರೇರಿತವಾದ ಕರ್ಮವನ್ನೇ ತ್ಯಾಗ ಮಾಡುವುದು. ಇಲ್ಲಿ ತ್ಯಾಗ ಎಂದರೆ ಕರ್ಮವನ್ನು ತ್ಯಾಗ ಮಾಡುವುದಲ್ಲ, ಬದಲಿಗೆ ಯಾವ ಕರ್ಮವೇ ಇರಲಿ, ಅದನ್ನು ಮಾಡಿ-ಯಾವುದೇ ಫಲನ್ನು ಬಯಸದೇ ಇರುವುದು. ಆದ್ದರಿಂದ ಕರ್ಮತ್ಯಾಗ ಅಂದರೆ ವೇದಾಧ್ಯಯನ ಬಿಡುವುದು, ಸಂಧ್ಯಾವಂದನೆ ಬಿಡುವುದು, ವೃತಾನುಷ್ಠಾನ ಇತ್ಯಾದಿಯನ್ನು ಬಿಡುವುದು ಎಂದಲ್ಲ. ಬದಲಿಗೆ ಸತ್ಕರ್ಮವನ್ನು ಮಾಡಿ ಅದರ ಫಲವನ್ನು ಬಯಸದೇ ಇರುವುದು ಎಂದರ್ಥ. ಯಾವ ಕರ್ಮವೇ ಇರಲಿ ಅದನ್ನು ಭಗವದ್ ಪ್ರೀತ್ಯರ್ತ ಮಾಡು ಫಲ ಬಯಕೆಯಿಂದಲ್ಲ. ಇಲ್ಲಿ ಕವಯಃ ಮತ್ತು ವಿಚಕ್ಷಣಾಃ ಎನ್ನುವ ಎರಡು ವಿಶೇಷ ಪದಗಳನ್ನು ಬಳಸಲಾಗಿದೆ. ಶಬ್ದಾರ್ಥದ ಸಂಬಂಧವನ್ನು ತಿಳಿದವರು-ಕವಿಗಳು ಶಬ್ದಾರ್ಥವನ್ನು ತಿಳಿದು ಅದನ್ನು ಅನುಭವಿಸಿ ಆಚರಿಸುವವರು ವಿಚಕ್ಷಣರು. “ಕವಿಗಳು ಮತ್ತು ವಿಚಕ್ಷಣರು ಸಂನ್ಯಾಸ ಮತ್ತು ತ್ಯಾಗಕ್ಕೆ ಈ ವಿವರಣೆಯನ್ನು ಕೊಡುತ್ತಾರೆ” ಎಂದಿದ್ದಾನೆ ಕೃಷ್ಣ.

ಅಧ್ಯಾಯ 3:
ಕೃಷ್ಣ ಇಲ್ಲಿ ನಿಸ್ವಾರ್ಥ ಸೇವೆಯಾದ ಕರ್ಮಯೋಗದ ಕುರಿತು ಮಾತನಾಡುತ್ತಾನೆ. ಕರ್ಮಯೋಗಿಯು ಧರ್ಮದ ಆಧ್ಯಾತ್ಮಕ್ಕೆ ಬೆಲೆ ಕೊಟ್ಟು ತನ್ನೆಲ್ಲ ಕೆಲಸಗಳನ್ನು ದೇವರಿಗೆ ಸಮರ್ಪಿಸುತ್ತಾನೆ. ಫಲಿತಾಂಶದ ಬಗ್ಗೆ ಯೋಚಿಸದೆ ತನ್ನ ಪಾಡಿಗೆ ತಾನು ಶಾಂತಚಿತ್ತದಿಂದ ಕೆಲಸ ಮಾಡಿಕೊಂಡು ಹೋಗುತ್ತಾನೆ. ನಮ್ಮ ಆಸೆ, ಸಿಟ್ಟು, ಅತಿಯಾದ ಪ್ರೀತಿಯೇ ನಮ್ಮ ನಿಜವಾದ ಶತ್ರುಗಳು. ಇವು ನಮ್ಮನ್ನು ಸ್ವಾರ್ಥಿಗಳಾಗಿಸಿ ಶಾಂತಿಯನ್ನು ಕಸಿದುಕೊಳ್ಳುತ್ತದೆ ಎಂದು ತಿಳಿಸುತ್ತಾನೆ.

ಅಧ್ಯಾಯ 4:
ಭಗವಂತನು ಸಜ್ಜನರನ್ನು ಕಾಪಾಡಿ, ದುರ್ಜನರನ್ನು ನಾಶ ಮಾಡಲು, ಒಂದೊಂದು ಯುಗದಲ್ಲಿ ಭೂಮಿಯಲ್ಲಿ ಅವತರಿಸುತ್ತಾನೆ ಎಂದು ಕೃಷ್ಣ ಹೇಳುತ್ತಾನೆ ಅಷ್ಟೇ ಅಲ್ಲ, ಭಗವಂತನ ಈ ಜನ್ಮ ರಹಸ್ಯವನ್ನು ಅರಿತವರು ಮೋಕ್ಷ ಪ್ರದರು ಎಂದು ತಿಳಿಸುತ್ತಾನೆ. ತ್ಯಾಗದ ವಿಷಯದಲ್ಲಿ ನಿಶ್ಚಿತವಾದ ಅಭಿಪ್ರಾಯವನ್ನು ನಿನಗೆ ಹೇಳುತ್ತೇನೆ” ಎನ್ನುತ್ತಾನೆ ಕೃಷ್ಣ. ಹೇಗೆ ಯಜ್ಞ-ದಾನ-ತಪಸ್ಸು ಮೂರು ವಿಧವೋ ಹಾಗೇ ತ್ಯಾಗವೂ ಕೂಡ ಮೂರು ವಿಧ. ಅದನ್ನು ಕೃಷ್ಣ ಅರ್ಜುನನಿಗೆ ವಿವರಿಸುತ್ತಾನೆ. ಇಲ್ಲಿ ಕೃಷ್ಣ ಅರ್ಜುನನನ್ನು ಭರತಸತ್ತಮ ಮತ್ತು ಪುರುಷವ್ಯಾಘ್ರ ಎಂದು ಸಂಬೋಧಿಸಿದ್ದಾನೆ. ಭರತವಂಶದ ಅರಸರ ಮಾಲಿಕೆಯಲ್ಲಿ ಗಣ್ಯನಾದ್ದರಿಂದ ಅರ್ಜುನ ಭರತಸತ್ತಮ-ಇದು ಮೇಲ್ನೋಟದ ಅರ್ಥ. ಭಗವಂತನಲ್ಲಿ ಮತ್ತು ಜ್ಞಾನದಲ್ಲಿ ರತನಾದವ, ಭಕ್ತಿ ಉಳ್ಳವ ಭರತಸತ್ತಮ ಎನ್ನುವುದು ಈ ಸಂಬೋಧನೆಯ ಅಂತರಂಗದ ಅರ್ಥ. ಅದೇ ರೀತಿ ಪುರುಷವ್ಯಾಘ್ರ ಎಂದರೆ ಪುರುಷಶ್ರೇಷ್ಠ ಎಂದರ್ಥ. ಭಗವಂತನ ಕಡೆಗೆ ತಮ್ಮ ಮನಸ್ಸನ್ನು ಹರಿಯಗೊಟ್ಟವರು ಪುರುಷರು. ಅವರಲ್ಲಿ ಶ್ರೇಷ್ಠ-ಪುರುಷಶ್ರೇಷ್ಠ. ಅಂದರೆ ಜ್ಞಾನಿಗಳಲ್ಲಿ ಶ್ರೇಷ್ಠ ಎಂದರ್ಥ. ನಾವೂ ಕೂಡ ನಮ್ಮ ಜೀವನದಲ್ಲಿ ಭರತಸತ್ತಮರು, ಪುರುಷವ್ಯಾಘ್ರರು ಆಗಬೇಕು. ಆಗ ಭಗವಂತನ ಸಂದೇಶ ನಮಗೆ ತಲುಪುತ್ತದೆ.

ಅಧ್ಯಾಯ 5:
ಹೇಗೆ ಕರ್ತವ್ಯ ನಿಭಾಯಿಸುತ್ತಲೇ ಫಲದಾಸೆಯಿಲ್ಲದೆ ಸನ್ಯಾಸಿಯಂತಿರುವುದು ಎಂದು ಅರ್ಜುನ ಪ್ರಶ್ನಿಸುತ್ತಾನೆ. ಇದಕ್ಕೆ ಕೃಷ್ಣನು ನಿಜವಾದ ಕರ್ಮಯೋಗಿಯು ಫಲಿತಾಂಶದ ಬಗ್ಗೆ ಯೋಚಿಸದೆ ಫಲವನ್ನು ದೇವರಿಗೆ ಬಿಟ್ಟು ತಾನು ಕರ್ತವ್ಯ ನಿಭಾಯಿಸುತ್ತಾನೆ. ಈ ಮನಸ್ಥಿತಿಯಿಂದಾಗಿ ಆತ ಸ್ವಯಂ ನಿಯಂತ್ರಣ ಸಾಧಿಸಿ ಅಹಂಕಾರದಿಂದ ಹೊರಬರಬಲ್ಲ ಎಂದು ಹೇಳುತ್ತಾನೆ. ಯಾವಾಗಲೂ ಭಗವಂತನ ಆರಾಧನಾ ರೂಪವಾದ ಯಜ್ಞ, ದಾನ, ತಪವನ್ನು ಬಿಡಬಾರದು. ಅದನ್ನು ಮಾಡಲೇಬೇಕು. ಇದಕ್ಕಿಂತ ಮಂಗಳವಾದ ಸಂಗತಿ ಇನ್ನೊಂದಿಲ್ಲ. ಇವು ಮೂರು ಕೂಡ ನಮ್ಮ ಬದುಕನ್ನು ಪವಿತ್ರಗೊಳಿಸುವ ಕ್ರಿಯೆಗಳು. ಇದಕ್ಕಿಂತ ಹೆಚ್ಚು ಪವಿತ್ರವಾದ ಕ್ರಿಯೆ ಇನ್ನೊಂದು ಜಗತ್ತಿನಲ್ಲಿಲ್ಲ. ಇತರ ಎಲ್ಲ ಕ್ರಿಯೆಗಳೂ ಈ ಮೂರು ಕ್ರಿಯೆಯಲ್ಲಿ ಅಂತರ್ಭಾವವಾಗಿರುತ್ತವೆ. ಆದ್ದರಿಂದ ನಮ್ಮ ಜೀವನದ ಪ್ರತಿಯೊಂದು ಕ್ರಿಯೆ ಕೂಡ ಯಜ್ಞ-ದಾನ-ತಪವಾಗಬೇಕು.

ಅಧ್ಯಾಯ 6:
ಧ್ಯಾನದ ಕುರಿತು ಇಲ್ಲಿ ಕೃಷ್ಣ ಹೇಳುತ್ತಾನೆ. ಧ್ಯಾನವನ್ನು ಅಭ್ಯಾಸ ಮಾಡುವವನು ಏಕಾಂಗಿಯಾಗಿ, ದೇಹವನ್ನೂ ಮನಸ್ಸನ್ನೂ ಬಿಗಿಹಿಡಿದು, ಮನಸ್ಸನ್ನು ಪರಮಾತ್ಮನಲ್ಲಿ ಕೂಡಿಸಿಕೊಂಡಿರಬೇಕು. ಪ್ರಯತ್ನದಿಂದಲೇ ಇಂದ್ರಿಯಗಳನ್ನೂ, ಮನಸ್ಸನ್ನು ಗೆಲ್ಲಬೇಕು ಎನ್ನುತ್ತಾನೆ. ಅಹಂಕಾರದಿಂದ ಕರ್ಮ ಮಾಡಿದರೆ ಅದು ವ್ಯರ್ಥ –ಏಕೆಂದರೆ ಅಹಂಕಾರವಿದ್ದೆಡೆಗೆ ಭಗವಂತ ಬರಲಾರ. ಇನ್ನು ನಾವು ಫಲದ ಅಸೆಯಿಂದ ಕರ್ಮ ಮಾಡುವುದು. ಫಲದಾಸೆಯಿಂದ ಕರ್ಮ ಮಾಡಿ ಒಂದು ವೇಳೆ ನಾವು ಬಯಸಿದ ಫಲ ನೆರವೇರದಿದ್ದರೆ, ಆಗ ನಮಗೆ ಆ ಕರ್ಮದಲ್ಲಿ ಆಸಕ್ತಿ ದೂರವಾಗುತ್ತದೆ. ಕರ್ಮ ಮಾಡುವಾಗ ಅದರಲ್ಲಿ ಬರುವ ಮೂಲ ದೋಷ ‘ನಾನು ಮಾಡಿದೆ, ನನ್ನಿಂದಾಯಿತು’ ಎನ್ನುವ ಅಹಂಕಾರ. ಇದರ ಜೊತೆಗೆ ದೇವರ ಬಳಿ ನಮ್ಮ ಫಲಕಾಮನೆಯ ಪಟ್ಟಿ ಕೊಟ್ಟು ಫಲಾಪೇಕ್ಷೆಯಿಂದ ಕರ್ಮ ಮಾಡುವುದು. ಇವು ಕರ್ಮದಲ್ಲಿನ ಮಹಾದೋಷ. ಅಹಂಕಾರದಿಂದ ಕರ್ಮ ಮಾಡಿದರೆ ಅದು ವ್ಯರ್ಥ –ಏಕೆಂದರೆ ಅಹಂಕಾರವಿದ್ದೆಡೆಗೆ ಭಗವಂತ ಬರಲಾರ. ಇನ್ನು ನಾವು ಫಲದ ಅಸೆಯಿಂದ ಕರ್ಮ ಮಾಡುವುದು. ಫಲದಾಸೆಯಿಂದ ಕರ್ಮ ಮಾಡಿ ಒಂದು ವೇಳೆ ನಾವು ಬಯಸಿದ ಫಲ ನೆರವೇರದಿದ್ದರೆ, ಆಗ ನಮಗೆ ಆ ಕರ್ಮದಲ್ಲಿ ಆಸಕ್ತಿ ದೂರವಾಗುತ್ತದೆ. ದೇವರ ಬಗ್ಗೆ ವೈರತ್ವ ಉಂಟಾಗುತ್ತದೆ.

ಅಧ್ಯಾಯ 7:
ಧ್ಯಾನ ಮಾಡುತ್ತಿರುವುದರಿಂದ ನಿನಗೆ ನೀನು ಯಾರೆಂಬುದು ಅರಿವಾಗಬೇಕು. ಜ್ಞಾನಿಯು ನನ್ನಲ್ಲಿ ಲೀನನಾಗುತ್ತಾನೆ ಎಂಬ ತತ್ವ ಬೋಧಿಸುತ್ತಾನೆ.ಎಲ್ಲರೂ ಮಾಡುವಂತಿಲ್ಲ. ಉದಾಹರಣೆಗೆ ಯಜ್ಞ: ಯತಿಗಳು ಅಗ್ನಿಮುಖದಲ್ಲಿ ಆಹುತಿ ನೀಡುವಂತಿಲ್ಲ; ಬ್ರಹ್ಮಚಾರಿಗಳು ಪೂರ್ಣಪ್ರಮಾಣದ ಅಗ್ನಿಹೋತ್ರ ಮಾಡುವಂತಿಲ್ಲ. ಆದರೆ ಯತಿಗಳು ಜ್ಞಾನಯಜ್ಞ ಮಾಡಬಹುದು ಅದು ಅವರ ನಿಯತಕರ್ಮ. ಎಲ್ಲ ಕಾಲದಲ್ಲೂ ಎಲ್ಲರೂ ಮಾಡಬಹುದಾದ ಯಜ್ಞ ‘ನಾಮಯಜ್ಞ’. ಅಂದರೆ ಭಗವಂತನ ನಾಮ ಸ್ಮರಣೆ. ಇದು ಯಜ್ಞದಲ್ಲಿ ಎಲ್ಲರಿಗೂ ಅನ್ವಯಿಸುವ ನಿಯತಕರ್ಮ.ಇನ್ನು ದಾನ: ಬ್ರಹ್ಮಚಾರಿಗಳು ಕನ್ಯಾದಾನ ಮಾಡಲಾಗುವುದಿಲ್ಲ, ಅದನ್ನು ಗೃಹಸ್ಥ ಮಾಡಬೇಕು. ಗೃಹಸ್ಥನಿಗೆ ಕನ್ಯಾದಾನ ನಿಯತಕರ್ಮ. ಎಲ್ಲರೂ ಮಾಡಬಹುದಾದ ದಾನ-ಅಭಯದಾನ ಮತ್ತು ಜ್ಞಾನದಾನ. ಮೂರನೆಯದು ತಪಸ್ಸು: ಕೆಲವು ತಪಸ್ಸನ್ನು ಎಲ್ಲರೂ ಮಾಡಲಾಗುವುದಿಲ್ಲ. ಅದಕ್ಕೆ ವೇದಧೀಕ್ಷೆ ಬೇಕಾಗಬಹುದು

ಅಧ್ಯಾಯ 8:
ದೇವರ ಧ್ಯಾನದಲ್ಲಿ ಪ್ರಾಮಾಣಿಕವಾಗಿ ತೊಡಗಿರುವವನಿಗೆ ದೇವರು ಸಿಕ್ಕೇ ಸಿಗುತ್ತಾನೆ. ಪ್ರಯತ್ನ ಬಿಡಕೂಡದು ಎಂದು ಹೇಳುತ್ತಾನೆ.ನಮಗೆ ನಮ್ಮ ನಿಯತಕರ್ಮ ಮಾಡಬೇಕು ಎನ್ನುವುದು ಗೊತ್ತಿದ್ದೂ, ಮನಸ್ಸಿಗೆ ದೇಹಕ್ಕೆ ನೋವಾಗುತ್ತದೆ ಎನ್ನುವ ಕಾರಣಕ್ಕಾಗಿ ಕರ್ಮವನ್ನು ಮಾಡದೆ ಬಿಡುವುದು ರಾಜಸ ತ್ಯಾಗ ಎನಿಸುತ್ತದೆ. ಉದಾಹರಣೆಗೆ ಯಾವುದೋ ದೂರದರ್ಶನದ ದಾರಾವಾಹಿಯನ್ನು ನೋಡಬೇಕು ಎನ್ನುವ ಮನಸ್ಸಿನ ಉತ್ಕಟ ಬಯಕೆಯಿಂದ ಕರ್ಮವನ್ನು ಕೈಬಿಡುವುದು, ಚಳಿಯಾಗುತ್ತದೆ ಎಂದು ಸಂಧ್ಯಾವಂದನೆ ಮಾಡದೇ ಇರುವುದು, ಇತ್ಯಾದಿ ರಾಜಸ ತ್ಯಾಗ. ಇಂಥಹ ರಾಜಸ ತ್ಯಾಗ ಮಾಡಿದರೆ ನಿಜವಾದ ತ್ಯಾಗದ ಫಲ ಸಿಗದು.

ಅಧ್ಯಾಯ 9:
ಈ ಜಗತ್ತೆಲ್ಲಾ ಕಣ್ಣಿಗೆ ಕಾಣದ ನನ್ನಿಂದ ತುಂಬಿರುವುದು. ಈ ಎಲ್ಲಾ ವಸ್ತುಗಳೂ ನನ್ನಲ್ಲಿ ಇರುವುವು, ಆದರೆ ನಾನು ಅವುಗಳಲ್ಲಿ ಇಲ್ಲ.ಯಾವ ಜನರು, ತಮ್ಮ ಆತ್ಮವೆಂದು ನನ್ನನ್ನು ಧ್ಯಾನ ಮಾಡುತ್ತಾರೋ, ನಾನು ಅವರ ಯೋಗಕ್ಷೇಮ ಹೊರೆ ಹೊರುತ್ತೇನೆ ಎನ್ನುತ್ತಾನೆ. ಒಟ್ಟಿನಲ್ಲಿ ಹೇಳಬೇಕೆಂದರೆ: ಫಲಾಪೇಕ್ಷೆ ಇಲ್ಲದೆ ಅಹಂಕಾರ ತೊರೆದು ನಿಯತಕರ್ಮವನ್ನು ಮಾಡುವುದು ಸಾತ್ತ್ವಿಕ ತ್ಯಾಗ; ಸೋಮಾರಿತನದಿಂದ ಕಷ್ಟವಾಗುತ್ತದೆ ಎಂದು ನಿಯತಕರ್ಮವನ್ನು ಬಿಡುವುದು ರಾಜಸ ತ್ಯಾಗ ಮತ್ತು ತಪ್ಪು ತಿಳುವಳಿಕೆಯಿಂದ, ‘ಎಲ್ಲವೂ ಮೂಢನಂಬಿಕೆ’ ಎಂದು ನಿಯತಕರ್ಮವನ್ನು ಮಾಡದೇ ಬಿಡುವುದು ತಾಮಸ ತ್ಯಾಗ.

ಅಧ್ಯಾಯ 10:
ಭೂಮಿಯ ಪ್ರತಿಯೊಂದು ಚರಾಚರಗಳಲ್ಲೂ ನಾನಿದ್ದೇನೆ. ನಿನ್ನ ಸುತ್ತಲ ಬದುಕು ಸಂಪೂರ್ಣ ಪವಾಡಗಳಿಂದಲೇ ತುಂಬಿದೆ. ಅವುಗಳನ್ನು ಕಂಡು ಖುಷಿಪಡು. ಜಗತ್ತಿನಲ್ಲಿ ದೇವರಿರುವುದಲ್ಲ, ದೇವರೊಳಗೆ ಸಂಪೂರ್ಣ ಜಗತ್ತಿದೆ. ನಿನ್ನ ಕರ್ಮಕ್ಕೆ ತಕ್ಕ ಫಲವನ್ನು ನಾನು ನೀಡಿಯೇ ತೀರುತ್ತೇನೆ. ನಾವು ಮಾಡಿದ ಹಿಂದಿನ ಯಾವುದೋ ಒಂದು ಕರ್ಮದಿಂದ ಇಂದು ಕೆಟ್ಟ ಪರಿಣಾಮ ಆಗುತ್ತಿದ್ದರೆ, ಅಥವಾ ಹಿಂದೆ ಮಾಡಿದ ಇನ್ಯಾವುದೋ ಕರ್ಮದಿಂದ ಒಳ್ಳೆಯದು ಆಗುತ್ತಿದ್ದರೆ, ಸಾತ್ವಿಕ ತ್ಯಾಗಿ ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಆತ ಒಳ್ಳೆಯದಾಯಿತು ಎಂದು ಹಾರಾಡುವುದಿಲ್ಲ, ಕೆಟ್ಟದ್ದಾಯಿತು ಎಂದು ಕುಸಿಯುವುದಿಲ್ಲ. ಈತ ದುಃಖಕಾರವಾದ ಕರ್ಮವನ್ನು ದ್ವೇಷಿಸುವುದೂ ಇಲ್ಲ. ಔಷಧಿ ಹೇಗೆ ಕಹಿ ಇರುತ್ತದೋ ಹಾಗೇ ಸತ್ಕರ್ಮ ಕಿಂಚಿತ್ ದುಃಖಕರವಾದಾಗ ಅದರ ಬಗ್ಗೆ ಆತ ಚಿಂತೆ ಮಾಡುವುದಿಲ್ಲ. ಸಾತ್ವಿಕ ತ್ಯಾಗಿಯ ಮನಸ್ಸು ಸತ್ತ್ವಗುಣದಲ್ಲಿ ತುಂಬಿರುತ್ತದೆ. ಅವನಿಗೆ ತಾಮಸ-ರಾಜಸ ಚಿಂತೆಗಳೇ ಬರುವುದಿಲ್ಲ. ಬಲಜ್ಞಾನಗಳಿಂದ ಪರಿಪೂರ್ಣನಾದ ಭಗವಂತನಲ್ಲಿ ಎಲ್ಲವನ್ನು ಅರ್ಪಿಸಿ ಆತ ಕರ್ಮ ಮಾಡುತ್ತಿರುತ್ತಾನೆ. ಇದರಿಂದ ಆತನ ಮನಸ್ಸು ಪೂರ್ಣವಾಗಿ ಭಗವಂತನಲ್ಲಿ ಸಮಾವಿಷ್ಟವಾಗಿರುತ್ತದೆ.

ಅಧ್ಯಾಯ 11:
ಈಶ್ವರತ್ವದ ರೂಪವನ್ನು ನೋಡುವ ಆಸೆಯನ್ನು ಅರ್ಜುನ ವ್ಯಕ್ತಪಡಿಸುತ್ತಾನೆ. ಇದರಿಂದ ಕೃಷ್ಣನು ತನ್ನ ಆದಿಅಂತ್ಯವಿಲ್ಲದ ಪ್ರಕಾಶಮಾನವಾದ ವಿಶ್ವರೂಪ ದರ್ಶನ ಮಾಡಿಸುತ್ತಾನೆ. ಇದನ್ನು ನೋಡಿ ಅರ್ಜುನ ಬೆರಗಾಗಿ ಶರಣಾಗುತ್ತಾನೆ. ಸತ್ಯವನ್ನು ಅರಿಯದಿದ್ದುದಕ್ಕೆ ಕ್ಷಮೆ ಯಾಚಿಸುತ್ತಾನೆ. ಮನುಷ್ಯನಾಗಿ ಹುಟ್ಟಿದ ಮೇಲೆ, ಹುಟ್ಟಿನಿಂದ ಸಾಯುವ ತನಕ ನಾವು ಕರ್ಮ ಮಾಡಲೇ ಬೇಕು. ಕರ್ಮವನ್ನೇ ಬಿಟ್ಟು ಬದುಕಲು ಸಾಧ್ಯವಿಲ್ಲ. ನಾವು ತೊರೆಯಬೇಕಾದದ್ದು ಕರ್ಮವನ್ನಲ್ಲ-ಕರ್ಮಫಲವನ್ನು. ಈ ರೀತಿ ಕರ್ಮ ಮಾಡಿಕೊಂಡು ಕರ್ಮಫಲ ತೊರೆದವನು ಕರ್ಮತ್ಯಾಗಿ ಎನಿಸುತ್ತಾನೆ.

ಅಧ್ಯಾಯ 12:
ಯಾರು ಭಗವಂತನಲ್ಲಿ ಹೆಚ್ಚು ಪ್ರೀತಿಯನ್ನಿಟ್ಟು ವಿಶ್ವರೂಪವನ್ನು ಧ್ಯಾನಿಸುತ್ತಾ ಉಪಾಸನೆ ಮಾಡುವರೋ ಅವರು ಹೆಚ್ಚಿನ ಯೋಗಿಗಳು. ವಿವೇಕ ವೈರಾಗ್ಯಗಳಿಂದ ಅದನ್ನು ಅಭ್ಯಾ ಸಮಾಡಬೇಕು. ಅದು ಕಷ್ಟವಾದರೆ, ಭಗವಂತನ ಪ್ರೀತ್ಯರ್ಥವಾಗಿ ಕರ್ಮಗಳನ್ನು ಮಾಡು. ಅದೂ ಕಷ್ಟವಾದರೆ. ಕರ್ಮಗಳ ಫಲಗಳ ಬಯಕೆಗಳನ್ನೆಲ್ಲಾ ಬಿಡು ಎನ್ನುತ್ತಾನೆ.ಕರ್ಮ ಮಾಡುವುದರಿಂದ ಸುಖವಾಗಬಹುದು; ದುಃಖವಾಗಬಹುದು; ಅಥವಾ ಸುಖ-ದುಃಖದ ಬೆರಕೆಯ ಫಲ ಸಿಗಬಹುದು. ಕರ್ಮಫಲ ತ್ಯಾಗ ಮಾಡದೆ ಕರ್ಮ ಮಾಡುವವರಿಗೆ ಇದು ಸತ್ತ ಮೇಲೆ ಸಲ್ಲುತ್ತದೆ. ಇವರು ಕರ್ಮ ಮತ್ತು ಕರ್ಮ ಫಲದ ಸುಳಿಯಲ್ಲಿ ಸಿಲುಕಿ ಮತ್ತೆ ಸಂಸಾರ ಬಂಧದಲ್ಲಿ ಸಿಲುಕುತ್ತಾರೆ. ಆದರೆ ಕರ್ಮ ಫಲದ ಅಪೇಕ್ಷೆ ಇಲ್ಲದವರಿಗೆ ಇದು ಎಂದೂ ಸೋಕುವುದಿಲ್ಲ. ಅವರಿಗೆ ಏನು ಬಂದರೂ ಅದು ಭಗವಂತನ ಪ್ರಸಾದ. ಅದರಲ್ಲಿ ಬೇಕಾದ್ದು, ಬೇಡವಾದದ್ದು ಎನ್ನುವ ಭೇದವಿಲ್ಲ. ಇದು ಮೋಕ್ಷ ಮಾರ್ಗ. ಉದಾಹರಣೆಗೆ ರಾಜ್ಯದ, ಅಧಿಕಾರದ ಆಸೆಯಿಂದ, ಭಗವಂತನನ್ನು ಮರೆತು ಯುದ್ಧವನ್ನು ಮಾಡುವವ- ಯುದ್ಧದಲ್ಲಿ ನಡೆಯುವ ಪ್ರಾಣಹಾನಿಗೆ ಕಾರಣನಾಗುತ್ತಾನೆ. ಆತ ಈ ಪಾಪದ ಹೊರೆಯನ್ನು ಸತ್ತ ನಂತರ ಪಡೆಯಬೇಕಾಗುತ್ತದೆ. ಆದರೆ ಕರ್ತವ್ಯ ಕಾರಣಕ್ಕಾಗಿ ಯಾವುದೇ ಸ್ವಾರ್ಥವಿಲ್ಲದೆ ಎಲ್ಲವನ್ನು ಭಗವಂತನಿಗೆ ಅರ್ಪಿಸಿ ಯುದ್ಧ ಮಾಡುವವನಿಗೆ ಯಾವ ಪಾಪದ ಲೇಪವೂ ಅಂಟುವುದಿಲ್ಲ.

ಅಧ್ಯಾಯ 13:
ಈ ಬ್ರಹ್ಮಾಂಡವೇ ಒಂದು ಮಾಯೆ. ಇವೆಲ್ಲದರ ಸೃಷ್ಟಿಕರ್ತ ಬ್ರಹ್ಮನಾಗಿದ್ದು,ಅವನು ಪ್ರತಿಯೊಂದು ಅಣುರೇಣತೃಣಕಾಷ್ಟಗಳಲ್ಲೂ ನೆಲೆಸಿದ್ದಾನೆ. ನಿನ್ನೊಳಗೂ ಆತ ಇರುವುದನ್ನು ಅರ್ಥ ಮಾಡಿಕೊಂಡು ಮಾಯೆಯಿಂದ ಕಳಚಿಕೊಂಡು ಭಕ್ತಿಯಿಂದ ಜೀವಿಸು ಎಂದು ಕೃಷ್ಣ ವಿವರಿಸುತ್ತಾನೆ. ನಮ್ಮಲ್ಲಿ ಅನೇಕರಿಗೆ ಒಂದು ಪ್ರಶ್ನೆ ಇದೆ. ನಾವು ಮಾಡಿದ ಕೆಲಸವನ್ನು ‘ನಾನು ಮಾಡಿದೆ’ ಅನ್ನುವುದರಲ್ಲಿ ತಪ್ಪೇನು’ ಎಂದು. ಈ ಪ್ರಶ್ನೆಗೆ ನಾವು ಉತ್ತರ ಕಂಡುಕೊಳ್ಳಬೇಕಾದರೆ, ಒಂದು ಕ್ರಿಯೆ ನಡೆಯಬೇಕಾದರೆ ಆ ಕ್ರಿಯೆಯ ಹಿಂದೆ ಇರುವ ಐದು ಕಾರಣಗಳನ್ನು ತಿಳಿದುಕೊಳ್ಳಬೇಕು. ವೈದಿಕ ಸಾಂಖ್ಯ ಶಾಸ್ತ್ರದಲ್ಲಿ, ಜ್ಞಾನದ ಸಿದ್ಧಾಂತದಲ್ಲಿ ಹೇಳಲಾದ ಈ ಐದು ಕಾರಣಗಳನ್ನು ಕೃಷ್ಣ ಅರ್ಜುನನಿಗೆ ವಿವರಿಸುತ್ತಾನೆ. ಇಲ್ಲಿ ಕೃಷ್ಣ ಅರ್ಜುನನನ್ನು ಮಹಾಬಾಹೋ ಎಂದು ಸಂಬೋಧಿಸಿದ್ದಾನೆ. ‘ಮಹಾ-ಬ’ ಅಂದರೆ ಮಹತ್ತಾದ ಬಯಕೆಗಳು. ಅದನ್ನು ತ್ಯಾಗ ಮಾಡಿದವ-ಮಹಾಬಾಹು. ನಾವೆಲ್ಲರೂ ನಮ್ಮ ಜೀವನದಲ್ಲಿ ಕರ್ಮಫಲತ್ಯಾಗ ಮಾಡಿ, ಕೇವಲ ಭಗವದರ್ಪಣಾ ಭಾವದಿಂದ ಕರ್ಮ ಮಾಡುವುದನ್ನು ಕಲಿತುಕೊಂಡು-ಮಹಾಬಾಹುಗಳಾಗಬೇಕು ಎನ್ನುವುದು ಈ ಸಂಬೋಧನೆ ಹಿಂದಿರುವ ಧ್ವನಿ.

ಅಧ್ಯಾಯ 14:
ಎಲ್ಲರಲ್ಲೂ ಮೂರು ಗುಣಗಳಿರುತ್ತವೆ. ಸಾತ್ವಿಕ ಗುಣವು ಬೆಳಕಿನ, ಸುಖದ, ವಿಚಾರದ ರೂಪ, ರಜೋಗುಣವು ಪ್ರೀತಿ, ಬಯಕೆ ಅಹಂಕಾರದ ಕ್ರಿಯಾಶೀಲ ರೂಪ, ತಮವು ಅಜ್ಞಾನ, ತಪ್ಪು ತಿಳುವಳಿಕೆ, ಆಲಸ್ಯದ ರೂಪ. ಇವುಗಳಲ್ಲಿ ಶಕ್ತವಾದ ಗುಣ ಆತ್ಮವನ್ನು ಕಟ್ಟಿಹಾಕುತ್ತದೆ. ಎಲ್ಲರಲ್ಲಿಯೂ ಇಷ್ಟೂ ಗುಣಗಳಿದ್ದರೂ ಒಂದು ಗುಣ ಮೇಲುಗೈ ಸಾಧಿಸುವುದು. ಸಾತ್ವಿಕ ಗುಣದವನು ಮೋಕ್ಷ, ರಾಜಸಿಕ ಗುಣದವನು ಪುನರ್ಜನ್ಮ ಹಾಗೂ ತಾಮಸಿಕ ಗುಣದವನು ಕೆಳಮಟ್ಟದ ಜನ್ಮವೆತ್ತುತ್ತಾನೆ ಎಂದು ಕೃಷ್ಣ ಹೇಳುತ್ತಾನೆ. ಒಬ್ಬ ಅತ್ಯುತ್ತಮ ಮಾತುಗಾರ. ಆತ ಅಷ್ಟೊಂದು ಸ್ವಾರಸ್ಯವಾಗಿ, ವಿಷಯಗರ್ಭಿತವಾಗಿ ಮಾತನಾಡುತ್ತಾನೆ. ಆತ ಹೀಗೆ ಮಾತನಾಡಬೇಕಾದರೆ ಆತ ಮೂಗನಾಗಿರಬಾರದು, ಬಾಯಿ ಇದ್ದರೆ ಸಾಲದು-ಬಾಯಿಯಲ್ಲಿ ಶಬ್ದ ಬರಬೇಕು. ಕೇವಲ ಶಬ್ದವಲ್ಲ-ಯಾವ ಮಾತನಾಡಬೇಕೋ ಅದಕ್ಕನುಗುಣವಾದ ಶಬ್ದ ಬರಬೇಕು. ಆ ಶಬ್ದ ಬರಬೇಕಾದರೆ ಮಾತಿಗೆ ಒಂದು ಭಾವ ಬೇಕು. ಭಾವ ಅನ್ನುವುದು ಮನಸ್ಸಿನಲ್ಲಿ ಹೊಳೆಯಬೇಕು, ಹೊಳೆದ ಭಾವಕ್ಕೆ ತಕ್ಕಂತೆ ಶಬ್ದ ಬರಬೇಕು, ಆ ಶಬ್ದ ಬಾಯಿಯಲ್ಲಿ ಸ್ಫುಟವಾಗಿ ಹೊರ ಹೊಮ್ಮಬೇಕು. ಭಾವನೆಯಿಂದ ಶಬ್ದದ ಹುಟ್ಟಿಗೆ ಆಕಾಶ-ಗಾಳಿ ಮಾಧ್ಯಮ. ಈ ಎಲ್ಲ ಕ್ರಿಯೆ ಸುಸೂತ್ರವಾಗಿ ನಡೆದರೆ ಮಾತ್ರ ಆತ ಚನ್ನಾಗಿ ಮಾತನಾಡಬಲ್ಲ. ಮನಸ್ಸಿನಲ್ಲಿ ಭಾವ ಮತ್ತು ಶಬ್ದವನ್ನು ಹೊಳೆಸುವವನು ಯಾರು? ಒಂದು ವೇಳೆ ಹೇಳಬೇಕು ಅನ್ನುವ ವಿಷಯಕ್ಕೆ ಅನುಗುಣವಾದ ಶಬ್ದ ಹೊಳೆಯದೆ ಇದ್ದರೆ? ನಮ್ಮ ಮೆದುಳಿನಲ್ಲಿ ಯಾವುದೋ ಒಂದು ಗುಂಡಿ ಆ ಕ್ಷಣದಲ್ಲಿ ಕೆಲಸ ಮಾಡದೆ ಇದ್ದರೆ? ಹುಟ್ಟುವಾಗಲೇ ಮೂಗನಾಗಿ ಹುಟ್ಟಿದ್ದರೆ? ಜ್ಞಾನ ಪರಂಪರೆಯೇ ಇಲ್ಲದ ಮನೆತನದಲ್ಲಿ ಹುಟ್ಟಿದ್ದರೆ? ಇಲ್ಲಿ ನಮ್ಮ ಕೈವಾಡ ಏನಿದೆ? ಇದು ತಿಳಿದಾಗ ‘ನಾನು ಮಾಡಿದೆ’ ಎನ್ನುವ ಅಹಂಕಾರ ಬಾರದು. ಈ ಅರಿವಿದ್ದಾಗ ಎಲ್ಲರೊಡನೆ ಎಲ್ಲರಂತೆ ಇದ್ದು ಅಂಟಿಸಿಕೊಳ್ಳದೆ ಇರಲು ಸಾಧ್ಯ.

ಅಧ್ಯಾಯ 15:
ಈ ಪ್ರಾಪಂಚಿಕ ಜೀವನದಲ್ಲಿ ನಾವು ಹೇಗೆ ಸಾವು ಹಾಗೂ ಪುನರ್ಜನ್ಮಗಳ ಮಧ್ಯೆ ಸಿಲುಕಿದ್ದೇವೆ ಎಂಬುದನ್ನು ಕೃಷ್ಣ ಅರ್ಜುನನಿಗೆ ಅರ್ಥ ಮಾಡಿಸುತ್ತಾನೆ. ಆತ ಸಂಸಾರವನ್ನು ತಲೆಕೆಳಗಾದ ಅರಳಿ ಮರಕ್ಕೆ ಹೋಲಿಸಿ ಮಾತನಾಡುತ್ತಾನೆ. ಪಾಪ ಪುಣ್ಯಗಳ ಕರ್ಮಗಳನ್ನು ಅಂಟಿಸುವ ಒಳ ಬೇರುಗಳು ಮೇಲಕ್ಕೂ ಕೆಳಕ್ಕೂ ಹರಡಿಕೊಂಡಿದೆ. ಸುಖದ ಬಯಕೆಗಳೆ ಅದರ ಚಿಗುರುಗಳು. ಇದು ಆದಿ ಅಂತ್ಯವಿಲ್ಲದ್ದು. ಇದನ್ನು ವೈರಾಗ್ಯವೆಂಬ ಶಸ್ತ್ರದಿಂದ ಕತ್ತರಿಸಬೇಕು. ದೈವಿಕತ್ವಕ್ಕೆ ಬೆಲೆ ಕೊಟ್ಟಾಗ ಇದು ಸಾಧ್ಯ ಎಂದು ಕೃಷ್ಣ ಮನ ಮುಟ್ಟುವಂತೆ ಹೇಳುತ್ತಾನೆ. ಮೈ-ಮಾತು-ಮನಗಳಿಂದ ಮನುಷ್ಯ ಯಾವ ಕೆಲಸ ಕೈಗೊಂಡರೂ –ಅದು ಒಪ್ಪಿರಲಿ, ತಪ್ಪಿರಲಿ-ಇವು ಐದು ಅದಕ್ಕೆ ಕಾರಣಗಳು.
ಮೈ-ಮಾತು-ಮನಗಳಿಂದ ನಾವು ಯಾವ ಕ್ರಿಯೆ ಮಾಡಿದರೂ ಅದರ ಹಿಂದೆ ಮೇಲೆ ಹೇಳಿದ ಐದು ಕಾರಣಗಳಿರುತ್ತವೆ. ಆ ಕ್ರಿಯೆ ಒಳ್ಳೆಯದಿರಬಹುದು ಅಥವಾ ಕೆಟ್ಟದ್ದಿರಬಹುದು. ಕ್ರಿಯೆ ಮಾತ್ರ ಈ ಐದು ಕಾರಣಗಳಿಂದಲೇ ನಡೆಯುವುದು.

ಅಧ್ಯಾಯ 16 :
ಸಿಟ್ಟು, ಕ್ರೂರತೆ, ಅಜ್ಞಾನ, ಅಪ್ರಾಮಾಣಿಕತೆ, ಅತಿಯಾಸೆ, ಅನೈತಿಕತೆ, ಅಹಂಕಾರ ಮುಂತಾದವು ವ್ಯಕ್ತಿಯನ್ನು ಆಧ್ಯಾತ್ಮಿಕವಾಗಿ ನಾಶ ಮಾಡುತ್ತವೆ. ಆದರೆ ಮಾನವೀಯತೆ, ಸತ್ಯ, ಅಹಿಂಸೆ, ತಾಳ್ಮೆ, ಇಂದ್ರಿಯಗಳ ನಿಯಂತ್ರಣ ಮುಂತಾದ ಸದ್ಗುಣಗಳು ಜ್ಞಾನಕ್ಕೆ ಕಾರಣವಾಗಿ ಸ್ವತಂತ್ರರನ್ನಾಗಿಸುತ್ತದೆ. ಈ ರೀತಿ ಐದು ಕಾರಣಗಳು ನಮ್ಮ ಕ್ರಿಯೆಯಲ್ಲಿ ಪಾತ್ರಧಾರಿಗಳಾಗಿರುವಾಗ, ಅದನ್ನು ಅರಿಯದೆ, “ನಾನು ಮಾಡಿದೆ” ಎಂದು ಅಹಂಕಾರ ಪಟ್ಟುಕೊಳ್ಳುವುದು ಅರ್ಥಶೂನ್ಯ. ಈ ರೀತಿ ತಿಳಿದುಕೊಳ್ಳುವವರು ಬುದ್ಧಿಗೇಡಿಗಳು. ಇಂಥಹ ಮತಿಗೇಡಿಗಳು ಏನನ್ನೂ ತಿಳಿದಿಲ್ಲ.

ಅಧ್ಯಾಯ 17:
ಇಲ್ಲಿ ಕೃಷ್ಣ ಓಂ ತತ್ ಸತ್ ಮಂತ್ರದ ಮಹತ್ವ ಹೇಳುತ್ತಾನೆ. ಇದರ ಅರ್ಥ ಮೇರು ಸತ್ಯ ಎಂದು. ಓಂನಾಮದಿಂದಲೇ ಸತ್ಕಾರ್ಯ ಆರಂಭಿಸಬೇಕು. ಯಜ್ಞ, ದಾನ ಹಾಗೂ ತಪಸ್ಸು ಸತ್ಕಾರ್ಯಗಳು ಎಂದು ವಿವರಿಸುತ್ತಾನೆ. ನಿರ್ಲಿಪ್ತ ಮನಸ್ಸಿನಿಂದ ಯುದ್ಧ ಭೂಮಿಯಲ್ಲಿ ಅನೇಕ ಜನರನ್ನು ಕೊಲ್ಲುವ ಪ್ರಸಂಗ ಬಂದರೂ ಕೂಡ-ಆ ಕೊಂದ ಪಾಪ ಕೊಂದವನನ್ನು ಸೋಕುವುದಿಲ್ಲ” ಎನ್ನುತ್ತಾನೆ ಕೃಷ್ಣ. ಆದರೆ ಇಲ್ಲಿ ಬಹಳ ಮುಖ್ಯ ವಿಚಾರ ಎಂದರ-ಮಾನಸಿಕವಾಗಿ ಒಂದು ಕ್ಷಣವೂ ನಮಗೆ ಭಗವಂತನ ಮೇಲೆ ಅಪನಂಬಿಕೆ ಬರಕೂಡದು; ಸಂಪೂರ್ಣ ಅರ್ಪಣಾ ಭಾವದಲ್ಲಿ, ನಿಶ್ಚಿತಾಭಿಪ್ರಾಯದಲ್ಲಿ(Conviction) ನಮ್ಮ ಪಾಲಿಗೆ ಒದಗಿ ಬಂದಿರುವ ಕರ್ಮವನ್ನು ಫಲಾಪೇಕ್ಷೆ ಇಲ್ಲದೆ ಮಾಡಬೇಕು. ಭಗವಂತನ ಕೈಯಲ್ಲಿ ನಾನು ಒಂದು ಸಾಧನ(Instrument)ಎನ್ನುವ ಎಚ್ಚರದಿಂದ ಎಲ್ಲವನ್ನು ಭಗವಂತನ ಚರಣಗಳಿಗೆ ಅರ್ಪಿಸಿ ಕರ್ಮವನ್ನು ಮಾಡಿದಾಗ ಕರ್ಮದ ಸೆರೆ ನಮ್ಮನ್ನು ಸೋಕುವುದಿಲ್ಲ. ಜೀವನಿಗೆ ಕರ್ಮದ ಫಲ ತಟ್ಟುವುದೇ ಅವನು ‘ನಾನು ಮಾಡಿದೆ’ ಎಂದು ತಿಳಿದುಕೊಳ್ಳುವುದರಿಂದ.
ಇಲ್ಲಿ ನಮಗೆ ಒಂದು ಪ್ರಶ್ನೆ ಮೂಡಬಹುದು.

ಅಧ್ಯಾಯ 18:
ಫಲದ ಬಯಕೆಯಿಂದ ಮಾಡುವ ಕರ್ಮಗಳನ್ನು ಬಿಡುವುದು ಸಂನ್ಯಾಸ, ಆ ಎಲ್ಲಾ ಕರ್ಮಗಳನ್ನು ಮಾಡಿ ಫಲವನ್ನ ಬಯಸದೇ ಇರುವುದು ತ್ಯಾಗ ಎಂದು ಹೇಳುವ ಕೃಷ್ಣನು, ಕರ್ಮಯೋಗಿಯಾಗಿ ಬದುಕಬೇಕು. ನಿಮ್ಮ ಕೆಲಸವೇ ನಿಮ್ಮನ್ನು ಆತ್ಮದೊಂದಿಗೆ ಜೋಡಿಸುತ್ತದೆ. ಪರಮಾತ್ಮನೊಂದಿಗೆ ಐಕ್ಯವಾಗಲು ದಾರಿ ತೋರುತ್ತದೆ ಎಂದು ವಿವರಿಸುತ್ತಾನೆ.ಜೀವನಿಗೆ ಕರ್ಮ ಮಾಡಬೇಕು ಎನ್ನುವ ಪ್ರೇರಣೆ ಮಾಡುವವ-ಭಗವಂತ. ಅದಕ್ಕನುಗುಣವಾಗಿಯೇ ಜೀವ ಕರ್ಮ ಮಾಡುತ್ತಾನೆ. ಯಾವ ಜೀವ ಏನು ಆಗಬೇಕು ಎನ್ನುವುದು ಆ ಜೀವದ ಸ್ವರೂಪಕ್ಕೆ ಸಂಬಂಧಪಟ್ಟ ವಿಚಾರ. ಆದರೆ ಸ್ವಯಂ ಜೀವನಿಗೆ ಅದನ್ನು ಅಭಿವ್ಯಕ್ತಗೊಳಿಸುವ ಶಕ್ತಿ ಇಲ್ಲ. ಭಗವಂತ ಆ ಜೀವ ಸ್ವರೂಪದ ಯೋಗ್ಯತೆಗನುಗುಣವಾಗಿ ಆತನಲ್ಲಿ ಪ್ರೇರಣೆ ಮಾಡುತ್ತಾನೆ. ಭಗವಂತನ ಪ್ರೇರಣೆಯಿಂದ ಜೀವಯೋಗ್ಯತೆ ವ್ಯಕ್ತವಾಗುತ್ತದೆ ಮತ್ತು ಅದಕ್ಕನುಗುಣವಾಗಿ ಜೀವ ಕರ್ಮದಲ್ಲಿ ತೊಡಗುತ್ತಾನೆ. ಇಲ್ಲಿ ಎಲ್ಲವೂ ಮೂಲತಃ ಭಗವದ್ ಸ್ವರೂಪ. ಭಗವಂತನ ಜ್ಞಾನ-ಭಗವದ್ ಸ್ವರೂಪ, ಭಗವಂತನ ಕ್ರಿಯೆ-ಭಗವದ್ ಸ್ವರೂಪ, ಭಗವಂತನ ಪ್ರೇರಣೆ-ಭಗವದ್ ಸ್ವರೂಪ. ಭಗವಂತನ ಸ್ವರೂಪ ನೇರ ನಮ್ಮ ಮೇಲೆ ಕೆಲಸ ಮಾಡುತ್ತಿರುತ್ತದೆ. ಅವನೇ ಜ್ಞಾನ, ಅವನೇ ಜ್ಞೇಯ, ಅವನೇ ಜ್ಞಾತೃ. ಆದ್ದರಿಂದ ಅವನ ಪ್ರೇರಣೆ-ಜ್ಞಾನಸ್ವರೂಪ; ಅವನ ಪ್ರೇರಣೆ- ಜ್ಞಾತೃಸ್ವರೂಪ; ಅವನ ಪ್ರೇರಣೆ-ಜ್ಞೇಯ. ಹೀಗೆ ಜ್ಞಾನಸ್ವರೂಪನಾದ ಭಗವಂತನ ಪ್ರೇರಣೆಯಿಂದ ಜೀವ ಕರ್ಮ ಮಾಡುತ್ತಾನೆ ಮತ್ತು ಎಲ್ಲವೂ ಅವನ ಅಧೀನವಾಗಿ ನಡೆಯುತ್ತದೆ.

ಸಾಲಿಗ್ರಾಮದ ವಿಶಿಷ್ಟತೆ ಏನು ಇದನ್ನು ಹೇಗೆ ಪೂಜಿಸಬೇಕು..?

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವೈವಾಹಿಕ ಜೀವನ ಸಂತೋಷವಾಗಿರಲು ಹೀಗೆ ಮಾಡಿ …!

ಮಹಾವಿಷ್ಣುವಿನ ಪರಶುರಾಮನ ಅವತಾರ..!

 

- Advertisement -

Latest Posts

Don't Miss