Political News: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ “ಪ್ರಜಾಧ್ವನಿ-2” ಜನಸಮಾವೇಶದಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ಪರ ಸಿಎಂ ಸಿದ್ದರಾಮಯ್ಯ ಮತಯಾಾಚನೆ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿcಅವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ. ಕೊಟ್ಟ ಮಾತು ಈಡೇರಿಸದ ಬಿಜೆಪಿಗೆ ಮತ್ತು ಅವರ ಜೊತೆ ಸೇರಿರುವ ಜೆಡಿಎಸ್ ಗೆ ನಿಮ್ಮ ಮತ ಕೇಳುವ ನೈತಿಕತೆ ಇಲ್ಲ. ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ದ ದೇವೇಗೌಡರು ಈಗ ಅದೇ ಮೋದಿಯವರನ್ನು ಅಪ್ಪಿಕೊಂಡಿದ್ದಾರೆ. ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ ಆಗುತ್ತದೆ ಎನ್ನುವುದು ದೇವೇಗೌಡರ ಭ್ರಮೆ. ಐದು ವರ್ಷವೂ ನಮ್ಮ ಸರ್ಕಾರ ಸುಭದ್ರವಾಗಿದ್ದು ಮತ್ತೆ ನಾವೇ ಗೆದ್ದು ಬರ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ವ್ಯಾಪಕ ಭ್ರಷ್ಟಾಚಾರ ಎಸಗಿ ಸೋತು ಮನೆ ಸೇರಿರುವ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ನರೇಂದ್ರ ಮೋದಿ ಅವರು ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ನಡೆಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ. ಲೋಕಸಭಾ ಚುನಾವಣೆಯಲ್ಲೂ ಅದೇ ಗತಿ ಆಗುತ್ತದೆ. ಭಾರತೀಯರಿಗೆ ಭ್ರಮೆ ಹುಟ್ಟಿಸಿ ವಂಚಿಸಿದ ಮೋದಿಯವರನ್ನು ಈ ಬಾರಿ ದೇಶ ತಿರಸ್ಕರಿಸಲಿದೆ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ INDIA ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ಹೊಸ ಗ್ಯಾರಂಟಿಗಳು ಜಾರಿಯಾಗಲಿವೆ. ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ಪ್ರತೀ ತಿಂಗಳು 5 ರಿಂದ 6 ಸಾವಿರ ರೂಪಾಯಿ ಉಳಿತಾಯ ಆಗುತ್ತಿದೆ. ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಇಂಥಾ 25 ಹೊಸ ಗ್ಯಾರಂಟಿಗಳು ಜಾರಿಗೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ನಾಡಿನ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಲಿದೆ. ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸುತ್ತೇವೆ. ಸ್ವಾಮಿನಾಥನ್ ವರದಿಯನ್ನು ಜಾರಿ ಮಾಡಿ ರೈತರ ಕೈ ಹಿಡಿಯುತ್ತೇವೆ. ಬಿಜೆಪಿ ಸರ್ಕಾರ ಶ್ರೀಮಂತರ 16 ಸಾವಿರ ಕೋಟಿಗೂ ಅಧಿಕ ಮೊತ್ತದ ಸಾಲ ಮನ್ನಾ ಮಾಡಿದೆ. ಆದರೆ ನಾವು ಇಡೀ ದೇಶದ ರೈತರ ಸಾಲ ಮನ್ನಾ ಮಾಡುತ್ತೇವೆ. ಇದೇ ಮಾದರಿಯ 25 ಗ್ಯಾರಂಟಿಗಳು ಜಾರಿಯಾಗಲಿವೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ನಾಡಿನ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಲಿದೆ.
ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸುತ್ತೇವೆ.
ಸ್ವಾಮಿನಾಥನ್ ವರದಿಯನ್ನು ಜಾರಿ ಮಾಡಿ ರೈತರ ಕೈ ಹಿಡಿಯುತ್ತೇವೆ.@BJP4India ಸರ್ಕಾರ ಶ್ರೀಮಂತರ 16 ಸಾವಿರ ಕೋಟಿಗೂ ಅಧಿಕ ಮೊತ್ತದ ಸಾಲ ಮನ್ನಾ ಮಾಡಿದೆ. ಆದರೆ… pic.twitter.com/3kQV7bthxZ— Siddaramaiah (@siddaramaiah) April 18, 2024
ಕೋವಿಡ್ ಸಂದರ್ಭದಲ್ಲಿ ವ್ಯಾಪಕ ಭ್ರಷ್ಟಾಚಾರ ಎಸಗಿ ಸೋತು ಮನೆ ಸೇರಿರುವ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ @narendramodi ಅವರು ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ನಡೆಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ @BJP4Karnataka ಹೀನಾಯವಾಗಿ ಸೋತಿದೆ. ಲೋಕಸಭಾ ಚುನಾವಣೆಯಲ್ಲೂ ಅದೇ ಗತಿ ಆಗುತ್ತದೆ.… pic.twitter.com/4SgPbI7aw6
— Siddaramaiah (@siddaramaiah) April 18, 2024
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ "ಪ್ರಜಾಧ್ವನಿ-2" ಜನಸಮಾವೇಶದಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಅಭ್ಯರ್ಥಿ @RakshaRamaiah ಅವರನ್ನು ಗರಿಷ್ಠ ಅಂತರದಿಂದ ಗೆಲ್ಲಿಸಿಕೊಡುವಂತೆ ಕರೆನೀಡಿದೆ.
ಪ್ರಧಾನಿ @narendramodi ಅವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ… pic.twitter.com/SuMD0sPz60
— Siddaramaiah (@siddaramaiah) April 18, 2024
ಮತದಾರರಿಗೆ ಹಂಚಲು ತಂದಿದ್ದ 18 ಕೋಟಿ ರೂಪಾಯಿ ವಶಕ್ಕೆ ಪಡೆದ ಚುನಾವಣಾಧಿಕಾರಿಗಳು
ಅವರು ಬಂದಿದ್ದು ಗೊತ್ತಾಗಲ್ಲ, ಹೋಗಿದ್ದು ಗೊತ್ತಾಗಲ್ಲ: ರಾಹುಲ್ ರಾಜ್ಯ ಪ್ರವಾಸದ ಬಗ್ಗೆ ಪ್ರಜ್ವಲ್ ಮಾತು