ರಾಜ್ಯದಲ್ಲಿಂದು 308 ಮಂದಿಗೆ ಮಹಾಮಾರಿ ಕೊರೊನಾ ತಗುಲಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5760ಕ್ಕೆ ಏರಿಕೆಯಾಗಿದೆ.
ಇಂದು ಬೆಂಗಳೂರಿನಲ್ಲಿ ಕೊರೊನಾ ವೈರಸ್ ತಗುಲಿ ಮೂವರು ಮೃತಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 64ಕ್ಕೆ ಏರಿಕೆಯಾಗಿದೆ.
ಇಂದು ಕಲಬುರಗಿಯಲ್ಲಿ 99 ಮಂದಿಗೆ ಕೊರೊನಾ ವೈರಸ್ ತಗುಲಿದ್ದು, ಯಾದಗಿರಿಯಲ್ಲಿ 66 ಕೊರೊನಾ ಪಾಸಿಟಿವ್ ಕೇಸ್ ಕಂಡುಬಂದಿದೆ. ಬೆಂಗಳೂರಿನಲ್ಲಿ 18 ಮಂದಿಗೆ ಕೊರೊನಾ ತಗುಲಿದ್ದು, ಉಡುಪಿಯಲ್ಲಿ 45 ಜನಕ್ಕೆ ಮತ್ತು ಬೀದರ್ನಲ್ಲಿ 48 ಜನರಿಗೆ ಕೊರೊನಾ ತಗುಲಿದ್ದು, ರಾಜ್ಯದಲ್ಲಿ ಒಟ್ಟು 308 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ಧೃಡಪಟ್ಟಿದೆ.
5760 ಸೋಂಕಿತರ ಪೈಕಿ 2519 ಮಂದಿ ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 3175 ಮಂದಿ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 14 ರೋಗಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.