ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ, ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದಂತ ಬಿಜೆಪಿಯ ನಾಲ್ವರು, ಕಾಂಗ್ರೆಸ್ ನ ಇಬ್ಬರು ಹಾಗೂ ಜೆಡಿಎಸ್ ನ ಒಬ್ಬರು ಸದಸ್ಯರು, ಇಂದು ವಿಧಾನಸೌಧದಲ್ಲಿ ಪ್ರಮಾವಚನವನ್ನು ಸ್ವೀಕರಿಸಿದರು.
ಬಿಜೆಪಿಯಿಂದ ಆಯ್ಕೆಯಾಗಿದ್ದಂತ ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್, ಹೇಮಲತಾ ಹಾಗೂ ಲಕ್ಷ್ಮಣ್ ಸವದಿಯವರು ಪ್ರಮಾಣ ವಚನ ಸ್ವೀಕರಿಸಿದರು. ಇನ್ನೂ ಕಾಂಗ್ರೆಸ್ ನಿಂದ ಆಯ್ಕೆಯಾಗಿದ್ದಂತ ನಾಗರಾಜ್ ಯಾದವ್, ಅಬ್ದುಲ್ ಜಬ್ಬಾರ್ ಪ್ರಮಾಣವಚನ ಸ್ವೀಕರಿಸಿದ್ರೇ, ಜೆಡಿಎಸ್ ನಿಂದ ಆಯ್ಕೆಯಾಗಿದ್ದಂತ ಟಿ.ಎ ಶರವಣ ಕೂಡ ಪ್ರಮಾಣ ವಚನ ಸ್ವೀಕರಿಸಿದರು.




