Sunday, September 8, 2024

Latest Posts

ನಗರದಲ್ಲಿ 82ಲಕ್ಷ ರೂ. ಅಕ್ರಮ ಹಣ ಪತ್ತೆ…

- Advertisement -

www.karnatakatv.net :ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಕಾವು ಪಡೆದುಕೊಳ್ಳುತ್ತಿದೆ. ಇದರ ಮಧ್ಯೆ ಅಕ್ರಮವಾಗಿ ಸಾಗಿಸಲಾಗ್ತಿದ್ದ ಹಣವನ್ನ ಪೊಲೀಸರು ವಶಪಡಿಸಿಕೊಂಡಿದ್ದು, ಮತದಾರರನ್ನು ಸೆಳೆಯಲು ಪ್ರಮುಖ ಪಕ್ಷಗಳು ಹಣ ಹಂಚಿಕೆ ಮಾಡುತ್ತಿವೆಯಾ ಅನ್ನೋ ಅನುಮಾನಕ್ಕೆ ಪುಷ್ಟಿ ಸಿಕ್ಕಂತಾಗಿದೆ.
ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಆಕ್ಸಫರ್ಡ್ ಕಾಲೇಜಿನ ಬಳಿ ನಿನ್ನೆ ರಾತ್ರಿ ಪೊಲೀಸರು ಕಾರಿನಲ್ಲಿ ಸಾಗಿಸಲಾಗ್ತಿದ್ದ 82ಲಕ್ಷದ 75 ಸಾವಿರ ರೂಪಾಯಿ ಹಣವನ್ನ ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಆಧರಿಸಿದ ಕೇಶ್ವಾಪುರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಹಣ ಜಪ್ತಿ ಮಾಡಿದ್ದಾರೆ. ಇನ್ನು ಸ್ವಿಫ್ಟ್ ಕಾರಿನಲ್ಲಿ ಸಿಕ್ಕ ಹಣವನ್ನ ಬಾಗಲಕೋಟೆಯಿಂದ ಹುಬ್ಬಳ್ಳಿ ನಗರಕ್ಕೆ ತರಲಾಗ್ತಿತ್ತು ಅಂತ ಪೊಲೀಸರು ಪತ್ತೆ ಹಚ್ಚಿದ್ದಾರೆ. ಅಲ್ಲದೆ ಕಾರು ಚಾಲಕ ಗೋಕುಲ ರಾಮ ರಬಾರಿ ಎಂಬಾತನನ್ನ ವಶಕ್ಕೆ ಪಡೆದಿರೋ ಪೊಲೀಸರು ಆತನ ವಿಚಾರಣೆ ನಡೆಸ್ತಿದ್ದಾರೆ. ಈತ ಮೂಲತಃ ರಾಜಸ್ಥಾನದವನಾಗಿದ್ದು, ಈತನಿಗೆ ಇಷ್ಟು ದೊಡ್ಡ ಮೊತ್ತದ ಹಣವನ್ನು ಯಾರು ಯಾತಕ್ಕಾಗಿ ಕೊಟ್ಟಿದ್ದಾರೆ ಅನ್ನೋ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.
ಹುಬ್ಬಳ್ಳಿ- ಧಾರವಾಡ ನಗರ ಪಾಲಿಕೆ ಚುನಾವಣೆ ಸಂದರ್ಭದಲ್ಲೇ ಭಾರೀ ಪ್ರಮಾಮದ ಹಣ ಪತ್ತೆಯಾಗಿರುವುದು ಹಲವು ಅನುಮಾನಗಳಿಗರ ಎಡೆಮಾಡಿಕೊಟ್ಟಿದೆ.

ಕರ್ನಾಟಕ ಟಿವಿ -ಹುಬ್ಬಳ್ಳಿ

- Advertisement -

Latest Posts

Don't Miss