www.karnatakatv.net : ಧಾರವಾಡ: ಸುದೀರ್ಘ ಕಾಲದ ಬಳಿಕ ಇದೀಗ ರಾಜ್ಯಾದ್ಯಂತ ಮತ್ತೆ ಶಾಲೆಗಳು ಪುನರಾರಂಭಗೊಂಡಿವೆ. ಕೊವಿಡ್ ಮೂರನೇ ಅಲೆಯ ಭೀತಿಯ ನಡುವೆಯೂ 9 ರಿಂದ 12ನೇ ತರಗತಿಯವರೆಗೆ ಮಾತ್ರ ಅವಕಾಶ ಕಲ್ಪಿಸಿರುವ ಸರ್ಕಾರ ಕಟ್ಟು ನಿಟ್ಟಿನ ಸುರಕ್ಷತಾ ಮಾರ್ಗಸೂಚಿಗಳನ್ನು ವಿಧಿಸಿದೆ.
ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ನವನಗರದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮಾಸ್ಕ್ ವಿತರಿಸಿ, ಹೂವು ನೀಡಿ ಸ್ವಾಗತಿಸಿದ್ರು. ಈವೇಳೆ ಮಾತನಾಡಿದ ಅವರು, ಶಾಲೆಗಳ,ತರಗತಿಗಳ ಪುನರಾರಂಭ ಸಂತೋಷದಾಯಕ. ಆದರೆ ವಿದ್ಯಾರ್ಥಿಗಳು ಕೋವಿಡ್ ನಿಯಮಾವಳಿಗಳನ್ನು ಚಾಚುತಪ್ಪದೇ ಪಾಲಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಸುಮಾರು 18 ತಿಂಗಳ ನಂತರ ಶಾಲೆ, ಕಾಲೇಜುಗಳು ಪುನರಾರಂಭವಾಗುತ್ತಿವೆ. ವಿದ್ಯಾರ್ಥಿಗಳು ಶುಚಿತ್ವ ಮತ್ತು ಆರೋಗ್ಯ ಸುರಕ್ಷತೆಯ ಕ್ರಮಗಳೊಂದಿಗೆ ಕಲಿಕೆಗೆ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕರೆ ನೀಡಿದರು.
ಜಿಲ್ಲೆಯ 108 ಸರ್ಕಾರಿ ,146 ಅನುದಾನಿತ ಹಾಗೂ 162 ಅನುದಾನರಹಿತ ಸೇರಿ ಒಟ್ಟು 416 ಪ್ರೌಢಶಾಲೆಗಳ 9 ನೇ ತರಗತಿಯ 30,805 ಹಾಗೂ 10 ನೇ ತರಗತಿಯ 33,148 ವಿದ್ಯಾರ್ಥಿಗಳ ಸಂಖ್ಯಾಬಲದ ಶಾಲೆಗಳು. 27 ಸರ್ಕಾರಿ,39 ಅನುದಾನಿತ ಹಾಗೂ 110 ಅನುದಾನರಹಿತ ಸೇರಿ 176 ಪದವಿಪೂರ್ವ ಕಾಲೇಜುಗಳು ಪುನರಾರಂಭವಾಗಿವೆ.
ಕರ್ನಾಟಕ ಟಿವಿ ಹುಬ್ಬಳ್ಳಿ