Saturday, April 19, 2025

Latest Posts

ಮಹಿಳೆ ಸಾವು ಕೇಸ್: ನಟ ಅಲ್ಲು ಅರ್ಜುನ್‌ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

- Advertisement -

Movie News: ಪುಷ್ಪ-2 ಸಿನಿಮಾ ಪೇಡ್ ಪ್ರಿಮಿಯರ್ ಶೋ ವೇಳೆ ಕಾಲ್ತುಳಿತಕ್ಕೆ ಒಳಗಾಗಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಂಸಿದಂತೆ, ಅಲ್ಲು ಅರ್ಜುನ್ ಮತ್ತು ಇನ್ನಿತರರ ವಿರುದ್ಧ ದೂರು ದಾಖಲಾಗಿತ್ತು. ಹೀಗಾಗಿ ಇಂದು ಪೊಲೀಸರು ಅಲ್ಲು ಅರ್ಜುನ್‌ನನ್ನು ಬಂಧಿಸಿ, ವೈದ್ಯಕೀಯ ತಪಾಸಣೆ ನಡೆಸಿದ್ದಾರೆ.

ಬಳಿಕ ಕೋರ್ಟ್‌ಗೆ ಹಾಜರುಪಡಿಸಿದ್ದು, ಕೋರ್ಟ್ ಅಲ್ಲು ಸೇರಿ ಇನ್ನಿತರರಿಗೆ 14 ದಿನ ನ್ಯಾಯಾಂಗ ಬಂಧನದಲ್ಲಿ ಇರಿಸಲು ಆದೇಶಿಸಿದೆ. ಹೀಗಾಗಿ ಪುಷ್ಪ-2 ಸಿನಿಮಾ ಹಿಟ್ ಆದ ಖುಷಿಯಲ್ಲಿದ್ದ ಅಲ್ಲುಗೆ ಕೋರ್ಟ್ ಶಿಕ್ಷೆ ನೀಡಿ ಶಾಕ್ ಕೊಟ್ಟಿದೆ. ಇನ್ನು ಅಲ್ಲು ಅರ್ಜುನ್ ಪ್ರಕರಣ ರದ್ದು ಪಡಿಸಲು ತೆಲಂಗಾಣ ಕೋರ್ಟ್ ಮೆಟ್ಟಿಲೇರಿದ್ದಾರೆ. ಕೇಸ್ ರದ್ದು ಮಾಡುವಂತೆ ಕೋರ್ಡ್ ಸೂಚಿಸಿದರೆ, ಅಲ್ಲು ಅರ್ಜುನ್‌ಗೆ ಬಿಗ್ ರಿಲೀಫ್ ಸಿಗಲಿದೆ.

ಏನಿದು ಕೇಸ್..?

ಸಂಧ್ಯಾ ಚಿತ್ರಮಂದಿರದಲ್ಲಿ ಪ್ರಿಮಿಯರ್ ಶೋ ಇದ್ದ ಕಾರಣ, ಓರ್ವ ವ್ಯಕ್ತಿ ಆತನ ಇಬ್ಬರು ಮಕ್ಕಳು ಮತ್ತು ಪತ್ನಿಯ ಜೊತೆ ಚಿತ್ರಮಂದಿರಕ್ಕೆ ಸಿನಿಮಾ ನೋಡಲು ಬಂದಿದ್ದ. ಅಂದು ಅಲ್ಲಿ ಅಲ್ಲು ಅರ್ಜುನ್ ಬರುತ್ತಾರೆ, ಪುಷ್ಪ 2 ಸಿನಿಮಾ ಬಗ್ಗೆ ಮಾತನಾಡುತ್ತಾರೆ ಎಂದು ಹೇಳಲಾಗಿತ್ತು. ನೆಚ್ಚಿನ ನಟನೊಂದಿಗೆ ಆತನ ನಟನೆ ಸಿನಿಮಾವೂ ನೋಡಬಹುದು ಎಂಬ ಖುಷಿಯಲ್ಲಿ ಕುಟುಂಬ ಆ ದಿನ ಥಿಯೇಟರ್‌ಗೆ ಬಂದಿತ್ತು. ಆದರೆ ಅಲ್ಲಿ ನೆರೆದಿದ್ದ ಇತರ ಅಭಿಮಾನಿಗಳು ಅಲ್ಲು ಅರ್ಜುನ್ ಅವರನ್ನು ನೋಡಿ, ಹುಚ್ಚೆದ್ದು ಕುಣಿದಿದ್ದು, ಪೊಲೀಸರು ಅಭಿಮಾನಿಗಳನ್ನು ನಿಯಂತ್ರಿಸಲು ಶುರು ಮಾಡಿದ್ದರು.

ಆಗ ಕಾಲ್ತುಳಿತ ಉಂಟಾಗಿ, ಓರ್ವ ಮಹಿಳೆ ಸಾವನ್ನಪ್ಪಿದರೆ, ಆಕೆಯ ಪುತ್ರ ಸಾವು ಬದುಕಿನ ನಡುವೆ ಹೋರಾಡುವಷ್ಟು ತೀವ್ರವಾಗಿ ಅಸ್ವಸ್ಥಗೊಂಡಿದ್ದನು. ಈ ಬಗ್ಗೆ ಅಲ್ಲು ಕ್ಷಮೆ ಕೇಳಿ, ಕೇಸ್ ದಾಖಲಿಸಬೇಡಿ ಎಂದು ಮನವಿ ಮಾಡಿದ್ದರು. ಆದರೆ ಅಲ್ಲು ವಿರುದ್ಧ ಕೇಸ್ ದಾಖಲಾಗಿದ್ದು, ಅವರೇಕೆ ಚಿತ್ರ ಮಂದಿರಕ್ಕೆ ಬರಬೇಕಿತ್ತು..? ಅವರು ಬಂದಿದ್ದಕ್ಕೇ ಈ ಅವಘಡ ನಡೆಯಿತು ಎಂದು ಹೇಳಿ, ದೂರು ನೀಡಲಾಗಿತ್ತು. ಇದೀಗ ಅಲ್ಲು ಅರ್ಜುನ್ ಅವರನ್ನು ಚೀಕಟಪಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

- Advertisement -

Latest Posts

Don't Miss