ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಇಡೀ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,798 ಮತ್ತು ಕರ್ನಾಟಕದಲ್ಲಿ 1,533 ಇದೆ. ಹೀಗಾಗಿ ಸೋಂಕಿತರ ಸಂಖ್ಯೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಲಾಕ್ಡೌನ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ.

ಮಂಗಳವಾರದಿಂದ ಒಂದು ವಾರಗಳ ಕಾಲ ಬೆಂಗಳೂರನ್ನ ಲಾಕ್ಡೌನ್ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ನಿರ್ಧಿರಿಸಿದ್ದು, ಈ ಬಗ್ಗೆ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಟ್ವಿಟರ್ನಲ್ಲಿ ಬರೆದುಕೊಂಡಿರುವ ಸಿಎಂ, ಇತ್ತೀಚಿಗೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸೋಂಕು ನಿಯಂತ್ರಣದ ದೃಷ್ಟಿಯಿಂದ, ತಜ್ಞರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು, ಬರುವ ಮಂಗಳವಾರ, ಜುಲೈ 14ರ ರಾತ್ರಿ 8:00 ರಿಂದ 7 ದಿನಗಳ ವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದಿದ್ದಾರೆ.
ಈ ಅವಧಿಯಲ್ಲಿ ಅಗತ್ಯ ಸೇವೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯಲಿದ್ದು, ವಿವರವಾದ ಮಾರ್ಗಸೂಚಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗುವುದು.
ಈಗಾಗಲೇ ನಿಗದಿಯಾಗಿರುವಂತೆ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ನಡೆಸಲಾಗುವುದು. ಲಾಕ್ ಡೌನ್ ಸಂದರ್ಭದಲ್ಲಿ ಜನರು ಯಾವುದೇ ಆತಂಕಕ್ಕೆ ಒಳಗಾಗದೇ ಸಹಕರಿಸಲು ಕೋರಿದೆ ಎಂದಿದ್ದಾರೆ.


