Thursday, June 19, 2025

Latest Posts

ಫೋಟೋ-ಶೋಗಳಿಗಾಗಿ ಅಲ್ಲ. ಜನರ ಜೀವವನ್ನು ರಕ್ಷಿಸಲು ನಿಮ್ಮನ್ನು ನೇಮಿಸಲಾಗಿದೆ: ನಿಖಿಲ್ ಆಕ್ರೋಶ

- Advertisement -

Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಜನ ಮೃತರಾಗಿದ್ದಾರೆ. ಆದರೂ ಕೂಡ ರಾಜ್ಯ ಕಾಂಗ್ರೆಸ್ ಸರ್ಕಾರದ ತನ್ನ ತಪ್ಪನ್ನು ಒಪ್ಪಿಕ“ಳ್ಳುವುದನ್ನು ಬಿಟ್ಟು, ಸಮಝಾಯಿಷಿ ನೀಡುತ್ತಿದೆ ಎಂದು ಜೆಡಿಎಸ್ ರಾಜ್ಯ ಯುವ ನಾಯಕ ನಿಖಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರ್‌ಸಿಬಿಯ ಗೆಲುವಿಗಾಗಿ ಎರಡು ಕಾರ್ಯಕ್ರಮಗಳು ಆಯೋಜನೆ ಮಾಡಲಾಗಿತ್ತು, ಒಂದು ವಿಐಪಿಗಳಿಗಾಗಿ ವಿಧಾನಸೌಧದಲ್ಲಿ, ಇನ್ನೊಂದು ಜನಸಾಮಾನ್ಯರಿಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದ ಸಿಂಹಾಸನವನ್ನು ಆರಿಸಿಕೊಂಡರೆ ಹೊರತು ಜನಸಾಮಾನ್ಯರನಲ್ಲ. 11 ಅಭಿಮಾನಿಗಳು ಕಾಲ್ತುಳಿತದಲ್ಲಿ ಸಾವನ್ನಪ್ಪಿದಾಗ, ಸಚಿವರ ಕುಟುಂಬಗಳು ಸೆಲ್ಫಿ ತೆಗೆದುಕೊಳ್ಳುವದರಲ್ಲಿ ನಿರತರಾಗಿದ್ದರು ಎಂದು ನಿಖಿಲ್ ಖಾರವಾಗಿ ನುಡಿದಿದ್ದಾರೆ.

ಆದರೂ ಕೂಡ! ಮುಖ್ಯಮಂತ್ರಿಗಳ ಪ್ರತಿಕ್ರಿಯೆ? “ಅದು ನಮ್ಮ ಕಾರ್ಯಕ್ರಮವಾಗಿರಲಿಲ್ಲ.” ಕ್ರೀಡಾಂಗಣವು ವಿಧಾನಸೌಧದಿಂದ ಕೂಗಳತೆಯ ದೂರದಲ್ಲಿದೆ. ಅದು ಪಾಕಿಸ್ತಾನವಲ್ಲ. ಇದು ನಿಮ್ಮ ರಾಜ್ಯ, ನಿಮ್ಮ ನಗರ. ನಿಮ್ಮ ಜನರು. ನೀವು ರಾಜ್ಯವನ್ನು ಮುನ್ನಡೆಸಲು ಆಯ್ಕೆಯಾದವರು, ಕಾರ್ಯಕ್ರಮದಲ್ಲಿ ಅತಿಥಿಯಂತೆ ವರ್ತಿಸುವುದನ್ನು ಮೊದಲು ನಿಲ್ಲಿಸಿ. ಫೋಟೋ-ಶೋ ‌ಗಳಿಗಾಗಿ ನಿಮ್ಮನ್ನು ನೇಮಿಸಲಾಗಿಲ್ಲ. ಜನರ ಜೀವಗಳನ್ನು ರಕ್ಷಿಸಲು ನಿಮ್ಮನ್ನು ನೇಮಿಸಲಾಗಿದೆ. ಆದರೆ ನೀವು ಮಾತ್ರ ಜನರ ಜೀವಗಳನ್ನು ರಕ್ಷಿಸಲು ವಿಫಲರಾಗಿದ್ದಿರಿ ಎಂದು ಎಕ್ಸ್ ಖಾತೆಯಲ್ಲಿ ನಿಖಿಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ..

- Advertisement -

Latest Posts

Don't Miss