Saturday, July 12, 2025

Latest Posts

‘ಅನ್ನರಾಮಯ್ಯ’ ಎಂದು ಹೊಗಳಿಸಿಕೊಳ್ಳುವ ಸಿದ್ದರಾಮಯ್ಯನವರೇ, ಅನ್ನಭಾಗ್ಯಕ್ಕೆ ಏಕೆ ಭಂಗತಂದಿದ್ದೀರಿ?: ವಿಜಯೇಂದ್ರ

- Advertisement -

Political News: ಸಿದ್ದರಾಮಯ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗಾಗಿ ಅಕ್ಕಿ ತರುತ್ತಿದ್ದ ಲಾರಿ ಮಾಲೀಕರಿಗೆ ಇನ್ನೂ ಹಣ ಪಾವತಿಸದ ಕಾರಣ, ಅನ್ನಭಾಗ್ಯ ಯೋಜನೆ ತಡೆ ಹಿಡಿಯಲಾಗಿದೆ. ಈ ಕಾರಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸರ್ಕಾರದ ಖಜಾನೆ ಬರಿದಾಗಿಲ್ಲ ಎಂಬ ಸ್ಪಷ್ಟನೆಯ ನಿಮ್ಮ ಹೇಳಿಕೆಗಳು ಸುಳ್ಳು ಹಾಗೂ ಭಂಡತನದ ಪರಮಾವಧಿ ಎನ್ನುವುದನ್ನು ಅನ್ನಭಾಗ್ಯ ಯೋಜನೆಯ ಸಾರಥಿಗಳಾಗಿ ಕೆಲಸ ಮಾಡುತ್ತಿದ್ದ ಲಾರಿ ಮಾಲೀಕರಿಗೆ ತಿಂಗಳುಗಟ್ಟಲೆ ಬಾಡಿಗೆ ಪಾವತಿಸದೇ (4500 ಲಾರಿಗಳು)ಅವರ ಬದುಕಿನ ಭಾಗ್ಯಕ್ಕೆ ಬರೆ ಎಳೆದಿದ್ದೀರಿ. ಇದರ ಪರಿಣಾಮ ಇಂದಿನಿಂದ ಅನ್ನ ಭಾಗ್ಯವನ್ನು ಅವಲಂಬಿಸಿದ್ದ ಲಕ್ಷಾಂತರ ಬಡ ಕುಟುಂಬಗಳಿಗೆ ‘ಖಾಲಿ ತಟ್ಟೆಯಲ್ಲಿ ಕೈ ತೊಳೆಯುವ ಭಾಗ್ಯ ‘ಕರುಣಿಸುತ್ತಿದ್ದೀರಿ ಎಂದು ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.

ನಿಮ್ಮ ಕಾಂಗ್ರೆಸ್ ಸರ್ಕಾರ ಅನ್ನ ಭಾಗ್ಯದ ಆಹಾರ ಧಾನ್ಯಗಳನ್ನು ಸಾಗಿಸುವ ಲಾರಿಗಳಿಗೆ ಬಾಡಿಗೆ ಕೊಡುವ ಸ್ಥಿತಿಯಲ್ಲೂ ಇಲ್ಲದ ಕೆಟ್ಟ ಪರಿಸ್ಥಿತಿಗೆ ತಲುಪಿದೆ ಎಂದರೆ ಸರ್ಕಾರದ ಆರ್ಥಿಕ ಸ್ಥಿತಿ ದಿವಾಳಿಯತ್ತ ಸಾಗಿರುವುದರ ಸೂಚನೆಯನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತಿದೆ.  ಅನ್ನಭಾಗ್ಯದ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರವೊಂದೇ ಸಾಗಣೆ ವೆಚ್ಚ ಭರಿಸಬೇಕಿಲ್ಲ, ಪ್ರಧಾನಿ ಮಾನ್ಯ ನರೇಂದ್ರ ಮೋದಿಜೀ ಅವರ ನೇತೃತ್ವದ ಕೇಂದ್ರ ಸರ್ಕಾರ ‘ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ನೀಡುತ್ತಿರುವ ಉಚಿತ 5 ಕೆ.ಜಿ ಅಕ್ಕಿಯ ಜೊತೆಗೆ ಆಹಾರ ಧಾನ್ಯ ಸಾಗಣೆಯ ವೆಚ್ಚವನ್ನೂ ಭರಿಸುತ್ತಿದೆ ಆದರೂ ಲಾರಿ ಮಾಲೀಕರಿಗೆ ಬಾಡಿಗೆ ಕೊಡದೆ ಏಕಿಷ್ಟು ಸತಾಯಿಸುತ್ತಿದ್ದೀರಿ..? ಎಂದು ವಿಜಯೇಂದ್ರ ಸಿದ್ದರಾಮಯ್ಯ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.

ನಿಮ್ಮ ಸರ್ಕಾರದ ಭ್ರಷ್ಟ ವ್ಯವಹಾರಗಳಿಗೆ ಆದಾಯ ಮೂಲಗಳನ್ನು ಕಂಡುಹಿಡಿದುಕೊಳ್ಳಲು ಬೆಲೆ ಏರಿಕೆ, ಅವೈಜ್ಞಾನಿಕ ತೆರಿಗೆಗಳನ್ನು ಜನರ ಮೇಲೆ ಹೇರುತ್ತಲೇ ಇದ್ದೀರಿ, ನಿಮ್ಮ ಕಮಿಷನ್ ದಂಧೆಗೆ ಕನಿಷ್ಠ ಅಲ್ಪವಿರಾಮನ್ನಾದರೂ ನೀಡಿ ಜನರನ್ನು ಹಸಿವೆಂಬ ಬಾಧೆ ಬಾದಿಸದಂತೆ ಈ ಕೂಡಲೇ ಲಾರಿ ಮಾಲೀಕರ ಬಾಕಿ ಹಣವನ್ನು ಪಾವತಿಸಿ ಹಸಿದವರ ಆಕ್ರೋಶ ಹಾಗೂ ಲಾರಿಯನ್ನು ನಂಬಿ ಜೀವನ ಮಾಡುತ್ತಿರುವ ಲಾರಿ ಮಾಲೀಕರು ಹಾಗೂ ಚಾಲಕರ ಕುಟುಂಬಗಳ ಶಾಪಕ್ಕೆ ಗುರಿಯಾಗುವುದನ್ನು ತಪ್ಪಿಸಿಕೊಳ್ಳಿ ಎಂದು ವಿಜಯೇಂದ್ರ ಹೇಳಿದ್ದಾರೆ.

- Advertisement -

Latest Posts

Don't Miss