Saturday, July 12, 2025

Latest Posts

Chamarajanagara: ಕ್ಲಾಸಿನಲ್ಲಿ ಪಾಠ ಕೇಳುವಾಗಲೇ ನಾಲ್ಕನೇ ತರಗತಿ ಬಾಲಕ ಸಾ*ವು

- Advertisement -

Chamarajanagara: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಇಲ್ಲೋರ್ವ ಬಾಲಕ ಶಾಲೆಯಲ್ಲಿ ಪಾಠ ಕೇಳುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.

ಈ ಘಟನೆ ನಡೆದಿರುವುದು ಚಾಮರಾಜನಗರದಲ್ಲಿ. ಗುಂಡ್ಲುಪೇಟೆ ತಾಲೂಕಿನ ಕುರುಬರಗೇರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿಯಲ್ಲಿ ಓದುತ್ತಿದ್ದ 10 ವರ್ಷದ ಮನೋಜ್ ಕುಮಾರ್ ಎಂಬ ಬಾಲಕ ಮೃತ ದುರ್ದೈವಿಯಾಗಿದ್ದಾನೆ. ಈತನಿಗೆ ಈ ಮುಂಚೆಯಿಂದಲೂ ಹೃದಯ ಸಂಬಂಧಿ ಖಾಯಿಲೆ ಇತ್ತು. ಈತನ ಹೃದಯದಲ್ಲಿ ರಂಧ್ರವಿದ್ದು, ಜಯದೇವ, ಅಪೋಲೋ ಆಸ್ಪತ್ರೆಯಲ್ಲಿ ಈತ ಚಿಕಿತ್ಸೆ ಪಡೆದಿದ್ದ.

ಇಂದು ಕ್ಲಾಸಿನಲ್ಲಿ ಅಚಾನಕ್ ಆಗಿ ಕುಸಿದು ಬಿದ್ದಿದ್ದಾನೆ. ಆತನಿಗೆ ಚಿಕಿತ್ಸೆ ನೀಡಲು ಪ್ರಯತ್ನಿಸಿದರೂ ಕೂಡ, ಅದಾಗಲೇ ಆತ ಸಾವನ್ನಪ್ಪಿದ್ದನೆಂದು ತಿಳಿದು ಬಂದಿದೆ.

- Advertisement -

Latest Posts

Don't Miss