Tuesday, July 22, 2025

Latest Posts

ಕೂಡಲ ಸಂಗಮ ಪೀಠದ ಜಯ ಮೃತ್ಯುಂಜಯ ಶ್ರೀಗಳಿಗೆ ವಿಷ ಪ್ರಾಶನ ಪ್ರಯತ್ನ ನಡೆದಿದೆ: ಬೆಲ್ಲದ್ ಹೊಸ ಬಾಂಬ್

- Advertisement -

Political News: ಕೂಡಲ ಸಂಗಮ ಪೀಠದ ಜಯ ಮೃತ್ಯುಂಜಯ ಶ್ರೀಗಳಿಗೆ ವಿಷ ಪ್ರಾಶನ ಪ್ರಯತ್ನ ನಡೆದಿದೆ.. ಶ್ರೀಗಳ ಆಹಾರವನ್ನು ವಿಷ ಮಾಡಿ ಅವರನ್ನು ಮುಗಿಸಬೇಕು ಅಂತ ಯೋಚನೆ ಮಾಡಿದ್ದಾರೆ ಅಂತ,ವಿಧಾನ ಸಭೆ ವಿಪಕ್ಷ ಉಪ ನಾಯಕ ಅರವಿಂದ್ ಬೆಲ್ಲದ ಹೊಸ ಬಾಂಬ್ ಸಿಡಿಸಿದ್ದಾರೆ..

ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಎದುರು ಗಂಭೀರ ಆರೋಪ ಮಾಡಿರುವ ಅವರು,ಶ್ರೀಗಳ ಆರೋಗ್ಯ ಹದಗೆಟ್ಟಿದೆ ಅವರಿಗೆ ಫುಡ್ ಪಾಯಿಸನ್ ಆಗಿದೆ ಅಂತ ಗೊತ್ತಿತ್ತು. ಇದಕ್ಕೆ ಕಾರಣ ಬೇರೆಯಿದೆ. ಮಠದ ಹೊರಗಡೆ ಇಬ್ಬರು ಮುಸ್ಲಿಂ ಸಮಾಜದ ಹುಡುಗರು ಇದ್ದಾರೆ. ಆ ಇಬ್ಬರು ಮಠಕ್ಕೆ ಯಾರು ಬರ್ತಾರೆ ಯಾರು ಹೋಗತ್ತಾರೆ ಅಂತ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ, ವಿಡಿಯೋ ಸಹ ಮಾಡಿಕೊಳ್ಳುತ್ತಿದ್ದಾರೆ ಅಂತ ಭಕ್ತರು ನನಗೆ ಹೇಳಿದ್ದಾರೆ‌.

ಅದೇ ಮುಸ್ಲಿಂ ಯುವಕರು ಅಡುಗೆ ಮನೆಗೆ ಹೋಗಿದ್ದರು. ಈ ಬಗ್ಗೆ ಸ್ಥಳೀಯ ಭಕ್ತರು ಯುವಕರನ್ನು ವಿಚಾರಣೆ ಮಾಡಿದ್ದಾರೆ.ಆ ಯುವಕರು ಅಡುಗೆ ಮನೆಗೆ ಹೋಗಿ ಬಂದ ಕೆಲವೆ ಹೊತ್ತಿನಲ್ಲಿ ಶ್ರೀಗಳ ಆರೋಗ್ಯ ಹದಗೆಟ್ಟಿದೆ ಶ್ರೀಗಳು ಈ ಬಗ್ಗೆ ನನಗೆ ಮುಂದೆ ಹೇಳಿಕೊಂಡಿದ್ದಾರೆ. ನನಗೆ ಮನಸ್ಸಿ ಸರಿಯಾಗುತ್ತಿಲ್ಲ, ನನಗೆ ವಿಷ ಪ್ರಾಶನ ಆಗಿದೆ ಅಂತ ಅನುಮಾನ ವ್ಯಕ್ತಪಡಿಸಿದ್ದಾರೆ. ಊಟದ ಏನೋ ಹೆಚ್ಚು ಕಡಿಮೆ ಹಾಕಲಾಗಿದೆ ಅಂತ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಕೆಟ್ಟ ಕೆಲಸ ಮಾಡುತ್ತಿದ್ದಾರೆ ಸಮಾಜ ನೋಡುತ್ತಿದೆ ಅವರ ಮಾಡಿದ ಕೆಟ್ಟ ಕೆಲಸಕ್ಕೆ ತಕ್ಕ ಶಿಕ್ಷೆ ಸಮಾಜ ನೀಡುತ್ತದೆ ಎಂದು ಅರವಿಂದ್ ಬೆಲ್ಲದ್ ಹೇಳಿದ್ದಾರೆ..

- Advertisement -

Latest Posts

Don't Miss