- Advertisement -
Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ನಾಳೆ ಆಗಸ್ಟ್ 19 ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೆಂದ್ರಗಳಿಗೆ, ಪ್ರಾಥಮಿಕ ಶಾಲೆಗಳಿಗೆ, ಪ್ರೌಢಶಾಲೆಗಳಿಗೆ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳಿಗೆ ಒಂದು ದಿನದ ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು ಆದೇಶ ಹೊರಡಿಸಿದ್ದಾರೆ.
ಈ ಆಗಸ್ಟ್ 19 ರ ರಜಾ ದಿನವನ್ನು ಮುಂದಿನ ಸಾರ್ವತ್ರಿಕ ರಜಾ ದಿನಗಳಲ್ಲಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣಿಕೆ ಮಾಡಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಆದೇಶದಲ್ಲಿ ಅವರು ನಿರ್ದೇಶಿಸಿದ್ದಾರೆ.
- Advertisement -