Tuesday, October 14, 2025

Latest Posts

ಸಿದ್ದು ಕುರ್ಚಿಗೆ ಕುತ್ತು ಎಂದ ಸ್ವಾಮೀಜಿ

- Advertisement -

5 ವರ್ಷ ನಾನೇ ಸಿಎಂ ಎಂದು ಹೇಳ್ತಿರೋ ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಕಾದಿದೆಯಂತೆ. ಹೀಗಂತ ಬಾಗಲಕೋಟೆಯ ಅಮರೇಶ್ವರ ಮಠದ ನೀಲಕಂಠೇಶ್ವರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಬಸವ ಸಂಸ್ಕೃತಿ ಅಭಿಯಾನದಲ್ಲಿ ಸಿದ್ದರಾಮಯ್ಯ ಭಾಗಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿದ್ರೆ ಸಿಎಂ ಸ್ಥಾನ ಕಳೆದುಕೊಳ್ಳಲಿದ್ದಾರೆ.
ಕೆಲವು ಸಚಿವರು ಆ ಕಡೆ, ಕೆಲವು ಸಚಿವರು ಈ ಕಡೆ ಇದ್ದಾರೆ. ನವೆಂಬರ್‌ನಲ್ಲಿ ಇದರಿಂದಲೇ ಸಿಎಂ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ ಅಂತಾ ಹೇಳಿದ್ದಾರೆ.

ಸಿಎಂ ಪ್ರತ್ಯೇಕ ಲಿಂಗಾಯತ ಧರ್ಮ ಸಮಾರಂಭಕ್ಕೆ ಹೋಗಿರುವುದು ಒಂದು ಕಡೆ ಸಂತೋಷವಾಗಿದೆ. ಮತ್ತೊಂದು ಕಡೆ ದುಃಖ ಆಗಿದೆ. ಬಸವಣ್ಣನ ಹೆಸರು ನಮ್ಮ ಮೆಟ್ರೋಗೆ ಇಡುವುದು, ಬಸವ ಕಲ್ಯಾಣದಲ್ಲಿ ವಚನ ವಿವಿ ಸ್ಥಾಪನೆ ಸೇರಿ ಕೆಲವು ವಿಷಯ ಸ್ವಾಗತಾರ್ಹವಾಗಿದೆ. ಆದರೆ, ಈ ಹಿಂದೆ ಸಿದ್ದರಾಮಯ್ಯನವರು ಒಂದುಗೂಡಿದ ಧರ್ಮ ಇಬ್ಬಾಗ ಮಾಡಲು ಹೋಗಿ ಕೈ ಸುಟ್ಟುಕೊಂಡಿದ್ದರು. ಈಗ ಜೇನುಗೂಡಿಗೆ ಕೈ ಹಾಕಿ ಜೇನಿನಿಂದ ಕಚ್ಚಿಸಿಕೊಳ್ಳುವುದು ಬೇಡ ಎಂದು ಹೇಳಿದ್ದೆವು. ಆದರೂ ಪ್ರತ್ಯೇಕ ಲಿಂಗಾಯತರ ಸ್ವಾಮೀಜಿಗಳ ಸಭೆಗೆ ಹೋಗಿದ್ದಾರೆ. ಅಲ್ಲಿ ಪ್ರತ್ಯೇಕ ಧರ್ಮದ ಬಗ್ಗೆ ಹೇಳಿಕೆ ನೀಡದೇ ಜಾಣ ನಡೆ ಅನುಸರಿಸಿದ್ದಾರೆ. ಸಿದ್ದರಾಮಯ್ಯನವರು ಇಬ್ಭಾಗ ಮಾಡುವುದು ಬಿಟ್ಟು ಒಂದು ಮಾಡಿದ್ರೆ ಒಳ್ಳೆಯದಾಗುತ್ತದೆ.

ನಾವೆಲ್ಲಾ ಹಿಂದೂ ಧರ್ಮದ ಆಚರಣೆಯಲ್ಲಿ ಇರುವುದರಿಂದ ಒಟ್ಟುಗೂಡಿ ಹೋಗಬೇಕು. ಎರಡೂ ಕಡೆ ಇರುವ ಸಚಿವರೆಲ್ಲಾ ಒಂದೇ ಪಕ್ಷದವರೇ ಇರುವುದರಿಂದ, ನೀವೆಲ್ಲಾ ಒಂದು ಕಡೆ ಕುಳಿತು ನಿರ್ಧಾರ ಮಾಡಿದರೆ ಸಮಾಜಕ್ಕೆ ಹೆಸರು ಬರಲಿದೆ. ನಿಮ್ಮ ಸಚಿವ ಸ್ಥಾನ, ಸಿಎಂ ಸ್ಥಾನ ಉಳಿಬೇಕಾದರೆ ಒಂದುಗೂಡಿಸುವ ಕೆಲಸ ಮಾಡಬೇಕು. ಮುಖ್ಯವಾಗಿ ಸಿದ್ದರಾಮಯ್ಯನವರಿಗೆ ಹೇಳುವುದಾದರೆ ಧರ್ಮ ಒಡೆಯುವುದು ಬಿಟ್ಟು ಎಲ್ಲರನ್ನು ಒಂದುಗೂಡಿಸುವ ಕೆಲಸ ಮಾಡಿದರೆ, ನಿಮ್ಮ ಸ್ಥಾನ ಶಾಶ್ವತವಾಗಿ ಉಳಿಯುತ್ತದೆ ಎಂದಿದ್ದಾರೆ ಎಂದು, ನೀಲಕಂಠೇಶ್ವರ ಸ್ವಾಮೀಜಿ ಸಲಹೆ ಕೊಟ್ಟಿದ್ದಾರೆ.

- Advertisement -

Latest Posts

Don't Miss