Tuesday, October 14, 2025

Latest Posts

ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ!: ಡಿಸಿಎಂ ಡಿ.ಕೆ.ಶಿವಕುಮಾರ್

- Advertisement -

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ರೇಸ್‌ನಲ್ಲಿ ಇದ್ದವರು ಹೌದು. ಆದರೆ ನನಗೆ ಸಿಎಂ ಆಗುವ ಆತುರವೇನಿಲ್ಲ ಎಂದು ಡಿಕೆಶಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ. ಸಾರ್ವಜನಿಕ ಭೇಟಿಯ ಸಂದರ್ಭದಲ್ಲಿ ಕೆಲವರು ಕೇಳಿದ ಪ್ರಶ್ನೆಯನ್ನು ಕೆಲವು ಮಾಧ್ಯಮಗಳು ತಿರುಚಿ ವರದಿ ಮಾಡಿ ವಿವಾದ ಸೃಷ್ಟಿಸುತ್ತಿರುವುದು ಬೇಸರ ತಂದಿದೆ. ನನಗೆ ನನ್ನ ಗುರಿ ಗೊತ್ತಿದೆ, ನನಗೆ ಯಾವ ಆತುರವೂ ಇಲ್ಲ, ಈ ರೀತಿ ಹೇಳುವ ಅವಶ್ಯಕತೆಯೂ ಇಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ನಾನು ಯಾವುದೇ ಹುದ್ದೆಗಾಗಿ ಆತುರದಲ್ಲಿಲ್ಲ. ರಾಜ್ಯದ ಜನರ ಸೇವೆ ಮತ್ತು ಬೆಂಗಳೂರು ನಾಗರಿಕರಿಗೆ ಉತ್ತಮ ಆಡಳಿತ ನೀಡುವುದೇ ನನ್ನ ಉದ್ದೇಶ. ನಾನು ಸಾರ್ವಜನಿಕರ ಸೇವೆಗಾಗಿಯೇ ಹಗಲು-ರಾತ್ರಿ ಶ್ರಮಿಸುತ್ತಿದ್ದೇನೆ. ಸತ್ಯವನ್ನು ತಿರುಚಿ, ದಾರಿ ತಪ್ಪಿಸುವ ವರದಿಗಳಿಂದ ದೂರವಿರುವಂತೆ ಮಾಧ್ಯಮ ಮಿತ್ರರಲ್ಲಿ ನನ್ನ ಮನವಿ ಎಂದು ಡಿಕೆಶಿ ಹೇಳಿದ್ದಾರೆ.

- Advertisement -

Latest Posts

Don't Miss