ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷರಾಗಿ ಹುಣಸೂರು ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಡಿ. ಹರೀಶ್ ಗೌಡ ಹಾಗೂ ಉಪಾಧ್ಯಕ್ಷರಾಗಿ ಬಿ.ಎನ್. ಸದಾನಂದ ಅವಿರೋಧವಾಗಿ ಆಯ್ಕೆಯಾದರು. ಒಕ್ಕೂಟದ ಆಡಳಿತ ಮಂಡಳಿಯ 15 ನಿರ್ದೇಶಕರ ಸ್ಥಾನಗಳಲ್ಲಿ 13 ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ ಎರಡು ಸ್ಥಾನಗಳಿಗೆ ಮತದಾನ ನಡೆಯಿತು.
ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು ಹಾಗೂ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ಗಳ ಕ್ಷೇತ್ರದಿಂದ ಪಿರಿಯಾಪಟ್ಟಣ ತಾಲ್ಲೂಕಿನ ಕೆ. ಕುಮಾರ, ಮೈಸೂರು ತಾಲ್ಲೂಕಿನ ಶಾಸಕ ಜಿ.ಟಿ. ದೇವೇಗೌಡ, ತಿ. ನರಸೀಪುರ ತಾಲ್ಲೂಕಿನ ಮಲ್ಲಣ್ಣ, ನಂಜನಗೂಡು ತಾಲ್ಲೂಕಿನ ಬಿ.ಎನ್. ಸದಾನಂದ, ಸಾಲಿಗ್ರಾಮ ತಾಲ್ಲೂಕಿನ ಎ.ಟಿ. ಸೋಮಶೇಖರ್ ಹಾಗೂ ಹುಣಸೂರು ಪಟ್ಟಣದ ಶಾಸಕ ಜಿ.ಡಿ. ಹರೀಶ್ ಗೌಡ ಆಯ್ಕೆಯಾದರು.
ಹುಣಸೂರು ತಾಲ್ಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ ಕೆ.ಎಸ್. ಕುಮಾರ, ಮೈಸೂರು ತಾಲ್ಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ ಕೆ. ಉಮಾಶಂಕರ್, ಪಟ್ಟಣ ಸಹಕಾರ ಬ್ಯಾಂಕ್ಗಳ ಕ್ಷೇತ್ರದಿಂದ ಕುವೆಂಪುನಗರದ ಆರ್. ಆನಂದ್, ಟಿಎಪಿಸಿಎಂಎಸ್ ಮತ್ತು ಮಾರಾಟ ಸಹಕಾರ ಸಂಘಗಳು ಹಾಗೂ ಬಳಕೆದಾರರ ಸಹಕಾರ ಸಂಘಗಳ ಕ್ಷೇತ್ರದಿಂದ ಕೆ.ಜಿ. ಮಹೇಶ್, ಗೃಹ ನಿರ್ಮಾಣ ಸಹಕಾರ ಸಂಘಗಳ ಕ್ಷೇತ್ರದಿಂದ ಎಚ್.ವಿ. ರಾಜೀವ್, ಮಹಿಳಾ ಸಹಕಾರ ಸಂಘಗಳ ಕ್ಷೇತ್ರದಿಂದ ಎ. ಶಿವಗಾಮಿ ಮತ್ತು ಎಸ್ಸಿ, ಎಸ್ಟಿ ಸಹಕಾರ ಸಂಘಗಳ ಕ್ಷೇತ್ರದಿಂದ ಜಿ.ವಿ. ಗುರುರಾಜು ಅವಿರೋಧವಾಗಿ ಆಯ್ಕೆಯಾದರು.
ವಿವಿಧೋದ್ದೇಶ ಸಹಕಾರ ಸಂಘಗಳು ಹಾಗೂ ಇತರ ಸಹಕಾರ ಸಂಘಗಳ ಕ್ಷೇತ್ರದಲ್ಲಿ ತಿ. ನರಸೀಪುರ ತಾಲ್ಲೂಕಿನ ಸಿದ್ದೇಗೌಡ, ಹಾಗೂ ಮತ್ತೊಂದು ಕ್ಷೇತ್ರದಿಂದ ಎಚ್.ಎಸ್. ಪ್ರಶಾಂತ್ ತಾತಾಚಾರ್ ಮತದಾನದ ಮೂಲಕ ಆಯ್ಕೆಯಾದರು. ಆಯ್ಕೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಜಿ.ಡಿ. ಹರೀಶ್ ಗೌಡ ಅವರು, ಸಹಕಾರ ಕ್ಷೇತ್ರ ಬಲವಾಗಿದ್ದರೆ ರೈತರು ಉಳಿಯುತ್ತಾರೆ. ರೈತರು ಮತ್ತು ಸಹಕಾರಿಗಳ ಹಿತಕ್ಕಾಗಿ ಸೂಕ್ತ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ಜಿ.ಟಿ. ದೇವೇಗೌಡ ಹಾಗೂ ಎಚ್.ವಿ. ರಾಜೀವ್ ಗೈರುಹಾಜರಾಗಿದ್ದರು.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ