Friday, November 14, 2025

Latest Posts

ಹುಬ್ಬಳ್ಳಿಯಲ್ಲಿ ಪ್ರೇಮ ಕಲಹ : ಬರ್ತ್‌ಡೇ ಪಾರ್ಟಿಯಲ್ಲಿ ಇಬ್ಬರಿಗೆ ಚಾಕು ಇರಿತ!

- Advertisement -

ಹುಬ್ಬಳ್ಳಿ: ನಗರದ ಗ್ಲೋಬಲ್ ಕಾಲೇಜು ಮುಂಭಾಗದಲ್ಲಿ ನಡೆದ ಚಾಕು ಇರಿತ ಘಟನೆ ನಗರದಲ್ಲಿ ಆತಂಕ ಮೂಡಿಸಿದೆ. ಪ್ರೇಮ ಸಂಬಂಧದ ಕಲಹವೇ ಈ ಹಿಂಸಾಚಾರಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಅಭಿಷೇಕ್ ಬಂಡಿವಂಡರ್ ಮತ್ತು ಮಾರುತಿ ಬಂಡಿವಂಡರ್ ಎಂಬ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಹಿತಿಯ ಪ್ರಕಾರ, ಮಣಿಕಂಠ ಮತ್ತು ಪವನ್ ಎಂಬ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿದ ವಿವಾದವನ್ನು ಬಗೆಹರಿಸಿಕೊಳ್ಳಲು ಮಣಿಕಂಠ ತನ್ನ ಬರ್ತ್‌ಡೇ ಪಾರ್ಟಿಗೆ ಪವನ್‌ರನ್ನು ಆಹ್ವಾನಿಸಿದ್ದ. ಪವನ್ ಜೊತೆ ಅಭಿಷೇಕ್ ಮತ್ತು ಮಾರುತಿ ಕೂಡ ಹೋದಾಗ ಮಾತಿನ ಚಕಮಕಿ ಜಗಳವಾಗಿ, ಮಣಿಕಂಠ ಮತ್ತು ಆತನ ಸ್ನೇಹಿತರು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ರಕ್ತಸಿಕ್ತ ಸ್ಥಿತಿ ಉಂಟಾದ ನಂತರ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

ಈ ಘಟನೆಯ ನಂತರ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಮುಖ ಆರೋಪಿ ಮಣಿಕಂಠ ಸೇರಿದಂತೆ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರೇಮ ಕಲಹದಿಂದ ಆರಂಭವಾದ ಈ ಘಟನೆ ಇದೀಗ ಗಂಭೀರ ಅಪರಾಧವಾಗಿ ಮಾರ್ಪಟ್ಟಿದ್ದು, ಕಾಲೇಜು ವಿದ್ಯಾರ್ಥಿಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪ್ರೀತಿಯ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಇದು ಮತ್ತೊಂದು ದುಃಖದ ಉದಾಹರಣೆಯಾಗಿದೆ.

- Advertisement -

Latest Posts

Don't Miss