Thursday, June 19, 2025

Latest Posts

ಮತ್ತೊಂದು ಮಹತ್ತರ ಕಾರ್ಯಕ್ಕೆ ಮುಂದಾದ ಕಿಚ್ಚ ಸು’ದೀಪ’…

- Advertisement -

ಕಿಚ್ಚ ಸುದೀಪ್… ನಟ, ನಿರ್ಮಾಪಕ, ನಿರ್ದೇಶಕ, ಗಾಯಕ..ಕ್ರಿಕೆಟರ್, ನಿರೂಪಕ ಮಾತ್ರವಲ್ಲ ಅವರೊಬ್ಬರ ರಿಯಲ್ ಹೀರೋ.. ಕನ್ನಡ ಚಿತ್ರರಂಗದ ಮಾಣಿಕ್ಯ ಕಿಚ್ಚ ಸುದೀಪ್ ಸಿನಿಮಾ ಹೊರತಾಗಿಯು ಸಮಾಜಸೇವೆಯಲ್ಲಿ ಗುರುತಿಸಿಕೊಂಡಿರುವ ನಟ. ತಮ್ಮದೇ ಕಿಚ್ಚ ಚಾರಿಟೇಬಲ್ ಸೊಸೈಟಿ ಮೂಲಕ ಅದೆಷ್ಟು ಜೀವಗಳಿಗೆ ಬೆಳಕು ನೀಡಿದ ಧ್ರುವತಾರೆ.

ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ನಾಲ್ಕು ವರ್ಷ ಪೂರೈಸಿದ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆವಿಗೆ ಗ್ರಾಮವನ್ನು ದತ್ತು ಪಡೆದು ಮಾದರಿ ಗ್ರಾಮವನ್ನಾಗಿಸಲು ಪಣ ತೊಟ್ಟಿದ್ದಾರೆ. ಈ ಕುರಿತು ಸ್ಥಳೀಯ ಶಾಸಕರು ಹಾಗೂ ಆಡಳಿತ ಮಂಡಳಿಯಿಂದ ಅನುಮತಿ ಸಹ ಪಡೆದುಕೊಳ್ಳಲಾಗಿದೆ.

ಅಂದಹಾಗೇ ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಈ ಹಿಂದೆ ಹಲವು ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸುತ್ತಿದೆ. ಕಿಚ್ಚನ ಈ ಮಹತ್ತರ ಕಾರ್ಯ ಹೀಗೆ ಸಾಗಲಿ ಎನ್ನುತ್ತಿದ್ದಾರೆ ಅಭಿಮಾನಿ ಬಳಗ.

- Advertisement -

Latest Posts

Don't Miss