- Advertisement -
www.karnatakatv.net: ರಾಜ್ಯ:ಮೈಸೂರು- ಹೆತ್ತವರನ್ನು ಕಳೆದುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕ ತನ್ನ ಹುಟ್ಟುಹಬ್ಬದಂದೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಇಲ್ಲಿನ ಎನ್.ಆರ್.ಮೊಹಲ್ಲಾ ನಿವಾಸಿ ಕಾರ್ತಿಕ್(30) ಮೃತ ವ್ಯಕ್ತಿ. ಕಾರ್ತಿಕ್ ಮೆಡಿಕಲ್ ರೆಪ್ರೆಸೆಂಟೇಟೀವ್ ಆಗಿದ್ದ. ಈ ಹಿಂದೆಯೂ 2 ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ತಿಳಿದು ಬಂದಿದೆ. ಇದೀಗ ಡೆತ ನೋಟ್ ಬರೆದಿಟ್ಟು ಜಿಲ್ಲೆಯ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -