www.karnatakatv.net ಕರ್ನಾಟಕ: ಕೊರೊನಾ ಮಹಾಮಾರಿಯಿಂದ ಇಲ್ಲಿಯವರೆಗೆ ಮುಚ್ಚಿದ್ದ ಕಾಲೇಜುಗಳನ್ನು ತೆರೆಯಲು ಯೋಜನೆ ನಡೆಸಲಾಗಿದ್ದು ಉಪನ್ಯಾಸಕರಿಗೆ ಕೆಲಸಕ್ಕೆ ಮರಳುವಂತೆ ಸೂಚಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆಯು ಸರ್ಕಾರಿ ಕಛೇರಿಗಳಿಗೆ ಕಾರ್ಯಕ್ಷೇತ್ರಗಳಲ್ಲಿ ಶೇ. 100ರಷ್ಟು ಸಿಬ್ಬಂದಿ ಸಾಮರ್ಥ್ಯವನ್ನು ಉಲ್ಲೇಖಿಸಸಿದ್ದು, ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪದವಿ ಕಾಲೇಜುಗಳ ಎಲ್ಲಾ ಬೋಧನಾ ಮತ್ತು ಬೋಧಕೇತರ ಸಿಬ್ಬಂದಿಯನ್ನು ಕಡ್ಡಾಯವಾಗಿ ಕೆಲಸಕ್ಕೆ ಹಾಜರಾಗುವಂತೆ ಆದೇಶ ಹೊರಡಿಸಲಾಗಿದೆ.




