- Advertisement -
www.karnatakatv.net : ‘ಗಡಿಯಲ್ಲಿ ಯಾವುದೇ ರೀತಿಯ ಉಪಟಳ, ದಾಳಿಗಳನ್ನೂ ನಾವು ಸಹಿಸುವುದಿಲ್ಲ. ನೀವು ಪದೇಪದೆ ನಿಯಮ ಉಲ್ಲಂಘನೆ ಮಾಡಿದರೆ, ನಾವು ಇನ್ನಷ್ಟು ಸರ್ಜಿಕಲ್ ಸ್ಟ್ರೈಕ್ ನಡೆಸುತ್ತೇವೆ’ ಎಂದು ಗೃಹಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಪಾಕಿಸ್ತಾನವು ನಿಯಮವನ್ನು ಉಲ್ಲಂಘನೆ ಮಾಡುತ್ತಿದ್ದು, ನೆರೆರಾಷ್ಟ್ರಕ್ಕೆ ನೇರವಾಗಿ ಎಚ್ಚರಿಕೆಯನ್ನು ಕೊಟ್ಟಿದ್ದಾರೆ. ಗೋವಾದ ಧರ್ಬಂದೋರಾದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಸಂಸ್ಥಾಪನಾ ಕಾರ್ಯಕ್ರಮದಲ್ಲಿ ಮಾತನಾಡಿ, ಅತಿಕ್ರಮಣ, ನಿಯಮ ಉಲ್ಲಂಘನೆ ಹಾಗೂ ಕಾಶ್ಮೀರದಲ್ಲಿ ನಾಗರಿಕರ ಹತ್ಯೆಯಂಥ ಕೃತ್ಯಗಳು ಮುಂದುವರಿದರೆ ಇನ್ನೊಮ್ಮೆ ಸರ್ಜಿಕಲ್ ಸ್ಟ್ರೈಕ್ ನಿಶ್ಚಿತ ಎಂದು ಸ್ಪಷ್ಟನೆ ನೀಡಿದ್ದಾರೆ.
- Advertisement -