ಬೆಂಗಳೂರು: ಐತಿಹಾಸಿಕ ಕಡಲೆಕಾಯಿ ಪರಿಷೆ ನವೆಂಬರ್ 29 ರಿಂದ ಡಿಸೆಂಬರ್ 1ರವರೆಗೆ ನಡೆಯಲಿದ್ದು, ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಕಾರ್ತಿಕ ಮಾಸದ ಕೊನೆ ಸೋಮವಾರದಂದು ನಡೆಯುವ ಕಡಲೆಕಾಯಿ ಪರಿಷೆ ಈ ಬಾರಿ ಮೂರು ದಿನಗಳ ಕಾಲ ನಡೆಯಲಿದೆ.
ಹೀಗಾಗಿ ಬಸವನಗುಡಿ ಸುತ್ತಾಮುತ್ತಾ ಜಾತ್ರೆಯ ವಾತಾವರಣ ನಿರ್ಮಾಣವಾಗಿದೆ. ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇಂದು ಸಾವಿರಾರು ಸಂಖ್ಯೆಯಲ್ಲಿ ಭಕ್ತದಿಗಳು ದೊಡ್ಡ ಗಣೇಶ ಹಾಗೂ ದೊಡ್ಡ ಬಸವಣ್ಣನ ದೇವಸ್ಥಾನದಲ್ಲಿ ಕ್ಯೂ ನಿಂತಿರುವ ದೃಶ್ಯ ಕಂಡು ಬಂದಿದೆ. ಸದ್ಯ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಠಿಣ ಕ್ರಮ ಕೈಗೊಳ್ಳಲಾಗಿದೆ.
ಬಣ್ಣ – ಬಣ್ಣದ ಆಟಿಕೆ, ರುಚಿ ರುಚಿಯಾದ ಬಡವರ ಬಾದಾಮಿ ಕಡಲೆ ಕಾಯಿ, ಲೈಟಿಂಗ್ ನಲ್ಲಿ ಕಂಗೊಳಿಸುವ ಜಾತ್ರೆ ತಿನ್ನಿಸುಗಳು ಹಾಗೂ ಕಲರ್ ಫುಲ್ ದುನಿಯಾ ಅನಾವರಣ. ಬಸವನಗುಡಿ ಸಂಪ್ರದಾಯಿಕ ಕಡಲೆ ಕಾಯಿ ಪರಿಷೆಯ ಪ್ರಯುಕ್ತ ಹಬ್ಬದ ವಾತಾವರಣ ಮನೆ ಮಾಡಿದೆ. ಸಾವಿರಕ್ಕೂ ಹೆಚ್ಚು ಕಡಲೆ ಕಾಯಿ ಮಳಿಗೆಗಳು ಓಪನ್ ಆಗಿದ್ದು. 50 ರೂ.ಗೆ ಸೇರು ಮಾರಾಟವಾಗ್ತಿದೆ. ಕುಟುಂಬ ಸಮೇತರಾಗಿ ಬಂದು ಕೊರೋನಾ ನಿಯಮವನ್ನೇ ಮರೆತಿದ್ದಾರೆ.
ಮುಜರಾಯಿ ಇಲಾಖೆ ಹಾಗೂ ಬಿಬಿಎಂಪಿ ಸಹಯೋಗದೊಂದಿಗೆ ಕಡೆಲಕಾಯಿ ಪರಿಷೆ ಆಯೋಜನೆ ಮಾಡಲಾಗಿದೆ. ಸದ್ಯ ಕೊರೊನಾ ಪ್ರಕರಣ ಕಡಿಮೆ ಇರೋ ಕಾರಣ ಕಡಲೆಕಾಯಿ ಪರಿಷೆ ಆಯೋಜನೆ ಮಾಡಲಾಗಿದ್ದು, ವ್ಯಾಪಾರಿ ಮತ್ತು ಸಾರ್ವಜನಿಕರಿಗೆ ಕೊರೊನಾ ನಿಯಮಗಳನ್ನು ಪಾಲಿಸುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ರಾಜ್ಯದ ವಿವಿಧ ಭಾಗಗಳಿಂದ, ಭಿನ್ನ ತಳಿಗಳ ಕಡಲೆಕಾಯಿ ತಂದು ಮಾರಾಟಕ್ಕೆ ಇರಿಸಲಾಗಿದೆ. ಸಾವಿರಾರು ವ್ಯಾಪಾರಿಗಳು, ರೈತರಿಂದ ಕಡಲೆಕಾಯಿ ಮಾರಾಟದಲ್ಲಿ ತೊಡಗಿಕೊಂಡಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಕಡಲೆಕಾಯಿ ಪರಿಷೆಯಲ್ಲಿ ಬೇಸಿದ ಕಳಲೆಕಾಯಿ, ಹಸಿ ಕಲಡಲೆಕಾಯಿ, ಉರಿ ಕಡಲೆಕಾಯಿ ಸೇರಿದಂತೆ ಹೊಸ ಹೊಸ ಬಗೆಯ ಬಡವರ ಬದಾಮಿ ಸಿಗಲಿದೆ.
ಐತಿಹಾಸಿಕ ಕಡಲೆಕಾಯಿ ಪರಿಷೆ: ಸಂಚಾರ ಮಾರ್ಗ ಬದಲಾವಣೆ
- Advertisement -
- Advertisement -