Saturday, June 21, 2025

Latest Posts

DODDABALLAPUR : ಘಾಟಿ ಸುಬ್ರಹ್ಮಣ್ಯ ದೇವಾಲಯದ ಜಾತ್ರೆ ಇಂದು ನಡೆಯಿತು..!

- Advertisement -

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಾಲಯ(Ghati Subramanya Temple)ದ ಬ್ರಹ್ಮ ರಥೋತ್ಸವ(Brahma Chariot Festival)ವನ್ನು ರದ್ದು ಮಾಡಲಾಗಿದ್ದು, ಈ ಹಿನ್ನೆಲೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ ಎಂದು ಹೇಳಲಾಗಿತ್ತು. ಈ ಕಾರಣದಿಂದ ಘಾಟಿ ಸುಬ್ರಹ್ಮಣ್ಯ ದೇವಾಲಯದ ಜಾತ್ರೆ ಇಂದು ನಡೆದಿದೆ. ದೇವಾಲಯದ ಒಳಾಂಗಣದಲ್ಲಿ ಚಿಕ್ಕ ರಥದಲ್ಲಿ ರಥೋತ್ಸವ ನಡೆಸಲಾಗಿದೆ. ಅತಿ ಹೆಚ್ಚು ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆ ಇದ್ದ ಕಾರಣ ಹೆಚ್ಚಿನ ಪೊಲೀಸ್ ನಿಯೋಜನೆ(Police deployment)ಯನ್ನು ಮಾಡಲಾಗಿದ್ದು, ಒಂದು ಕಿಲೋಮೀಟರ್ ದೂರದಲ್ಲಿಯೇ ಬ್ಯಾರಿಕೇಡ್(Barricade) ಎಳೆದು ಜನರನ್ನು ತಡೆಯಲಾಗಿದೆ. ದೇವಾಲಯದ ಒಳಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು, 600 ವರ್ಷಗಳ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಷಷ್ಠಿಯಂದು ಸಾರ್ವಜನಿಕ ದರ್ಶನಕ್ಕೆ ನಿಷೇದ ಮಾಡಲಾಗಿದ್ದು, ಕೋವಿಡ್ ಮಾರ್ಗಸೂಚಿ(Covid Guideline)ಗಳನ್ನು ಪಾಲನೆ ಮಾಡಿಕೊಂಡು ದೇವಾಲಯದ ಒಳಾಂಗಣದಲ್ಲಿ ರಥೋತ್ಸವವನ್ನು ಮಾಡಲಾಗಿದೆ.

ಅಭಿಜಿತ್, ಕರ್ನಾಟಕ ಟಿವಿ, ದೊಡ್ಡಬಳ್ಳಾಪುರ.

- Advertisement -

Latest Posts

Don't Miss