ಉಕ್ರೇನ್ನಲ್ಲಿ (Ukraine) ಮೃತಪಟ್ಟ ಹಾವೇರಿ ಮೂಲದ ನವೀನ್ (Naveen) ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ (CM Bommai) ಭೇಟಿ ನೀಡಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ನಿವಾಸಕ್ಕೆ ಭೇಟಿ ನೀಡಿದ ಸಿಎಂ, ನವೀನ್ ಕುಟುಂಬಸ್ಥರಿಗೆ (Family) ಸಾಂತ್ವನ ಹೇಳಿದ್ದಾರೆ. ಜತೆಗೆ ನವೀನ್ ತಂದೆಗೆ 25 ಲಕ್ಷರೂ. ಪರಿಹಾರ ಚೆಕ್ (25 lakhs. Solution Check) ನೀಡಿದ್ದಾರೆ. ಬಳಿಕ ಸಿಎಂ ಬೊಮ್ಮಾಯಿ(Basavaraj Bommai), ನವೀನ್ಭಾವಚಿತ್ರಕ್ಕೆ ಹೂವು ಹಾಕಿದ್ದಾರೆ. ಈ ವೇಳೆ ಸಿಎಂ ಜೊತೆ ಕೃಷಿ ಸಚಿವ ಬಿ.ಸಿ.ಪಾಟೀಲ, ಸಂಸದ ಶಿವಕುಮಾರ ಉದಾಸಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಜನೆಗೆ ತೆರಳಿದ್ದ ನವೀನಗೆ ಈ ರೀತಿ ಆಗುತ್ತೆ ಅಂತಾ ಯಾರೂ ಊಹಿಸಿರಲಿಲ್ಲ. ಶಬ್ದಗಳಲ್ಲಿ ಹೇಳಲು ಸಾಧ್ಯವಿಲ್ಲ. ನವೀನ್ ಪಾರ್ಥಿವ ಶರೀರ ತಾಯ್ನಾಡಿಗೆ ತರುವ ಪ್ರಯತ್ನವಾಗುತ್ತಿದೆ. ಈ ಬಗ್ಗೆ ವಿದೇಶಾಂಗ ಸಚಿವರ ಜೊತೆಗೆ ಸಂಪರ್ಕದಲ್ಲಿದ್ದೇವೆ.. ಆದಷ್ಟು ಬೇಗ ಪಾರ್ಥಿವ ಶರೀರ ತರಲು ಪ್ರಯತ್ನಿಸುತ್ತೇವೆ ಎಂದು ಚಳಗೇರಿಯಲ್ಲಿ ಹೇಳಿಕೆ ನೀಡಿದ್ದಾರೆ. ಯುದ್ಧ ನಿಂತ ಮೇಲೆ ಪಾರ್ಥೀವ ಶರೀರ ತರುವ ಪ್ರಯತ್ನ ಮಾಡುತ್ತಿರುವುದಾಗಿ ಸಿಎಂ ಹೇಳಿದ್ದಾರೆ. ಅಲ್ಲಿರುವ ಎಲ್ಲ ಮಕ್ಕಳು ವಾಪಸ್ ಬರಬೇಕು. ಶಿಕ್ಷಣಕ್ಕಾಗಿ ಹೊರದೇಶಕ್ಕೆ ಹೋಗುವ ವಾತಾವರಣ ಆಗಬಾರದು. ಒನ್ ನೇಶನ್ ಒನ್ ರಿಸರ್ವೇಶನ್ ಆಗಬೇಕು. ಒನ್ ನೇಶನ್ ಒನ್ ಲಾ ಆಗಬೇಕು. ನಮ್ಮಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ. ಸರಕಾರ ಎಲ್ಲ ರೀತಿಯಿಂದ ಈ ವಿಚಾರಗಳನ್ನು ಗಮನಿಸುತ್ತಿದೆ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ತಿಳಿಸಿದ್ದಾರೆ.