BREAKING NEWS: ಬೆಂಗಳೂರು ಮಳೆ ನಿರ್ವಹಣೆಗೆ ಸಚಿವರ ನೇಮಕ: ಯಾವ ವಲಯಕ್ಕೆ ಯಾವ ಸಚಿವರು ಗೊತ್ತಾ..?

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೊನೆಗೂ ಬೆಂಗಳೂರು ಮಳೆ ನಿರ್ವಹಣೆಗೆ ಸಚಿವರನ್ನು ನೇಮಕ ಮಾಡಿದ್ದಾರೆ. ಈ ಮೂಲಕ ನಗರದಲ್ಲಿನ ಮಳೆಯಿಂದ ಉಂಟಾದಂತ ಅವಾಂತರ ನಿರ್ವಹಣೆಗೆ ಮಹತ್ವದ ಕ್ರಮ ಕೈಗೊಂಡಿದ್ದಾರೆ.

ಮಳೆ ಅನಾಹುತ ಮತ್ತು ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ 8 ವಲಯಗಳಿಗೆ ಬೆಂಗಳೂರಿನ ಸಚಿವರ ನೇತೃತ್ವದಲ್ಲಿ ಕಾರ್ಯಪಡೆಗಳನ್ನು ರಚಿಸಲಾಗಿದೆ. ಈ ಕಾರ್ಯಪಡೆಯಲ್ಲಿ ಸಂಬಂಧಪಟ್ಟ ವಲಯಗಳ ಶಾಸಕರು, ಸಂಸದರು ಮತ್ತು ಬಿಬಿಎಂಪಿ ಅಧಿಕಾರಿಗಳು ಸದಸ್ಯರಾಗಿರುತ್ತಾರೆ. ವಲಯಗಳ ಜಂಟಿ ಆಯುಕ್ತರು ಈ ಕಾರ್ಯಪಡೆಯ ಸಂಚಾಲಕರಾಗಿ ಕಾರ್ಯ ನಿರ್ವಹಿಸುತ್ತಾರೆ.

ಹೀಗಿದೆ.. ಸಚಿವರ ಕಾರ್ಯಪಡೆ

  • ಆರ್ ಅಶೋಕ್- ದಕ್ಷಿಣ ವಲಯ
  • ಡಾ.ಅಶ್ವಥ್ ನಾರಾಯಣ್- ಪೂರ್ವ ವಲಯ
  • ವಿ ಸೋಮಣ್ಣ- ಪಶ್ಚಿಮ ವಲಯ
  • ಎಸ್ ಟಿ ಸೋಮಶೇಖರ್ -ಆರ್ ಆರ್ ನಗರ ವಲಯ
  • ಬೈರತಿ ಬಸವರಾಜ್- ಮಹದೇವಪುರ ವಲಯ
  • ಕೆ.ಗೋಪಾಲಯ್ಯ -ಬೊಮ್ಮನಹಳ್ಳಿ ವಲಯ
  • ಮುನಿರತ್ನ -ಯಲಹಂಕ ಮತ್ತು ದಾಸರಹಳ್ಳಿ ವಲಯ

About The Author