ಬೆಂಗಳೂರು : ನಾಳೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿರುವಂತ ಪಿ.ರವಿ ಕುಮಾರ್ ಅವರು ನಿವೃತ್ತಿಯಾಗಲಿದ್ದಾರೆ. ಅವರ ಹುದ್ದೆಗೆ ಐಎಎಸ್ ಅಧಿಕಾರಿ ವಂದಿತಾ ಶರ್ಮಾ ಅವರನ್ನು ನೇಮಿಸಲಾಗಿದೆ. ಈ ಇಬ್ಬರಿಗೂ ಸಿಎಂ ಬಸವರಾಜ ಬೊಮ್ಮಾಯಿ ಇಂದು ಸನ್ಮಾನಿಸಿದರು.
ಇಂದಿನ ರಾಜ್ಯ ಸಚಿವ ಸಂಪುಟ ಸಭೆಗೂ ಮುನ್ನ ಮೇ 31 ರಂದು ನಿವೃತ್ತ ರಾಗಲಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಟ್ಟರು. ನಿಯೋಜಿತ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಸಹ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಸಚಿವ ಸಂಪುಟದ ಸದಸ್ಯರು, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.




