ಡಾ. ರಾಜ್ಕುಮಾರ್ ರವರು ಒಬ್ಬ ಪ್ರಸಿದ್ದ ಚಲನಚಿತ್ರ ನಟರು. ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ಅಷ್ಟೇ ಅಲ್ಲದೆ ನಟಸಾರ್ವಭೌಮ ಎಂದು ಬಿರುದು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ. ಇವರ ಡಾ.ರಾಜ್ಕುಮಾರ್ ಅಕಾಡೆಮಿ ಕೂಡ ಇದೆ. ನಿನ್ನೆ ಅಷ್ಟೇ ಯುಪಿಎಸ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಡಾ.ರಾಜ್ ಕುಮಾರ್ ಅಕಾಡೆಮಿಯಲ್ಲಿಯೂ ಕೂಡ ಕೆಲವು ವಿದ್ಯಾರ್ಥಿಗಳು ಪಾಸ್ ಆಗಿದ್ದರೆ.
ಕೇಂದ್ರ ಲೋಕಸೇವಾ ಆಯೋಗ (UPSC) ದೇಶದ ಅತ್ಯುನ್ನತ ನಾಗರಿಕ ಸೇವೆಗಳ ನೇಮಕಕ್ಕೆ ಪರೀಕ್ಷೆಯನ್ನು ನಡೆಸಿತ್ತು. 2021ನೇ ಸಾಲಿನ ಪರೀಕ್ಷೆಯ ಫಲಿತಾಂಶ ನಿನ್ನೆ ಅಂದರೆ ಮೇ 30 ರಂದು ಪ್ರಕಟವಾಗಿದೆ. ಈ ಪರೀಕ್ಷೆಯಲ್ಲಿ ದೇಶದ ಸುಮಾರು 685 ಮಂದಿ ತೇರ್ಗಡೆಯಾಗಿದ್ದು, ಕರ್ನಾಟಕದಿಂದ 27 ಮಂದಿ ತೇರ್ಗಡೆಯಾಗಿದ್ದಾರೆ. ವಿಶೇಷ ಏನೆಂದರೆ ಡಾ.ರಾಜ್ಕುಮಾರ್ ಸಿವಿಲ್ ಸರ್ವಿಸ್ ಅಕಾಡೆಮಿಯಲ್ಲಿ ತರಬೇತಿ ಪಡೆದ 8 ಮಂದಿ ಕೂಡ ಈ ಸಾಲಿಗೆ ಸೇರಿಕೊಂಡಿದ್ದಾರೆ.
ಹಲವು ವರ್ಷಗಳಿಂದ ಬಡವರು ಹಾಗೂ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ಈ ಅಕಾಡೆಮಿಯಲ್ಲಿ ತರಬೇತಿ ನೀಡಲಾಗುತ್ತಿದೆ. ಈ ಅಕಾಡೆಮಿಯಲ್ಲಿ ಸಿವಿಲ್ ಸರ್ವೀಸ್ ಪರೀಕ್ಷೆಗಳಿಗೆ ಉಚಿತವಾಗಿ ತರಬೇತಿ ನೀಡುತ್ತಿದ್ದು, ಪ್ರತಿ ವರ್ಷ ಈ ಅಕಾಡೆಮಿಯಿಂದ ಹಲವು ಮಂದಿ ವಿದ್ಯಾರ್ಥಿಗಳು ಉತ್ತಮ ರ್ಯಾಂಕ್ ಪಡೆದು ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗುತ್ತಿದ್ದಾರೆ. ಹಾಗೆಯೇ ಈ ಬಾರಿಯೂ ಕೂಡ ಡಾ. ರಾಜ್ಕುಮಾರ್ ಅಕಾಡೆಮಿಯಿಂದ 8 ಮಂದಿ ತೇರ್ಗಡೆಯಾಗಿದ್ದಾರೆ.
ಇನ್ನು ತೇರ್ಗಡೆಯಾದ 8 ಮಂದಿಗಳ ಹೆಸರು ಇಲ್ಲಿದೆ. ಬೇನಕ ಪ್ರಸಾದ್ 92ನೇ ರ್ಯಾಂಕ್, ನಿಖಿಲ್ ಬಿ ಪಾಟೀಲ್ 139ನೇ ರ್ಯಾಂಕ್, ರಾಜೇಶ್ ಪೊನ್ನಪ್ಪ 222ನೇ ರ್ಯಾಂಕ್, ದೀಪಕ್ ಆರ್ ಸೇಟ್ 311ನೇ ರ್ಯಾಂಕ್, ಮೇಘನಾ ಕೆ ಟಿ 425ನೇ ರ್ಯಾಂಕ್, ಪ್ರೀತಿ ಪಂಚಾಲ್ 449ನೇ ರ್ಯಾಂಕ್, ರವಿನಂದನ್ ಬಿಎಂ 455ನೇ ರ್ಯಾಂಕ್, ಮತ್ತು ಪ್ರಶಾಂತ್ ಕುಮಾರ್ ಬಿಓ 641 ನೇ ರ್ಯಾಂಕ್ ಅನ್ನು ಪಡೆದುಕೊಂಡಿದ್ದಾರೆ.
ಈ 8 ಮಂದಿ ಪಾಸ್ ಆದವರಲ್ಲಿ ಮೇಘನಾ ಎಂಬುವವರಿಗೆ ಪೂರ್ಣ ಪ್ರಮಾಣದಲ್ಲಿ ಕಣ್ಣುಕಾಣುವುದಿಲ್ಲ. ಇವರು ಈ ಬಾರಿ 425ನೇ ರ್ಯಾಂಕ್ ಪಡೆದುಕೊಂಡಿದ್ದು, ಈ ಹಿಂದೆ ಕೂಡ ಡಾ.ರಾಜ್ಕುಮಾರ್ ಸಿವಿಲ್ ಸರ್ವೀಸ್ ಅಕಾಡೆಮಿಯಿಂದ ಪರೀಕ್ಷೆ ಬರೆದು 465ನೇ ರ್ಯಾಂಕ್ ಪಡೆದುಕೊಂಡಿದ್ದರು. ಇವರು ಮೂಲತಃ ಮೈಸೂರು ಜಿಲ್ಲೆಯ ಪರಿಯಾಪಟ್ಟಣದವರು. ಈಕೆ ದೃಷ್ಟಿ ಸಮಸ್ಯೆಯ ಹೊರತಾಗಿಯೂ ಯುಪಿಎಸ್ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿರುವುದು ಹೆಮ್ಮೆಯ ವಿಷಯ.
ಪ್ರಕೃತಿ ಪ್ರಭಾಕರ್, ಕರ್ನಾಟಕ ಟಿವಿ, ಸಿನಿಮಾ ಬ್ಯುರೋ