- Advertisement -
ಡೆಹ್ರಾಡೂನ್: ಭಾರೀ ಮಳೆಯಿಂದಾಗಿ ನದಿ ನೀರಿನ ರಭಸಕ್ಕೆ ಕಾರೊಂದು ಕೊಚ್ಚಿ ಹೋಗಿದ್ದು, 9 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಾಖಂಡದ ರಾಮನಗರದ ಬಳಿ ಧೇಲಾ ನದಿಯಲ್ಲಿ ನಡೆದಿದೆ.
ಮಳೆ ಆರ್ಭಟಕ್ಕೆ ನದಿಯಲ್ಲಿ ಪ್ರವಾಹ ಹೆಚ್ಚಿದ್ದ ಕಾರಣ ನೀರಿನ ಸೆಳೆತಕ್ಕೆ ಸಿಲುಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಬ್ಬ ಬಾಲಕಿಯನ್ನು ರಕ್ಷಿಸಲಾಗಿದ್ದು, ಐವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: BREAKING NEWS: ಖ್ಯಾತ ತಮಿಳು ನಟ ವಿಕ್ರಮ್ ಗೆ ಲಘು ಹೃದಯಾಘಾತ, ಆಸ್ಪತ್ರೆಗೆ ದಾಖಲು
ಭಾರಿ ಮಳೆಯಿಂದಾಗಿ ಹಲವೆಡೆ ರಸ್ತೆಗಳು, ಹಳ್ಳಗಳು ತುಂಬಿಹರಿಯುತ್ತಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಇದನ್ನೂ ಓದಿ: BREAKING NEWS: ಸ್ಮೃತಿ ಇರಾನಿಗೆ ಅಲ್ಪಸಂಖ್ಯಾತ ವ್ಯವಹಾರಗಳು, ಸಿಂಧಿಯಾಗೆ ಉಕ್ಕು ಖಾತೆ
- Advertisement -