15ನೇ ರಾಷ್ಟ್ರಪತಿಯಾಗಿ ಇಂದು ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಭಾರತದ ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರು, ಇಂದು 15ನೇ ರಾಷ್ಟ್ರಪತಿಯಾಗಿ ಪ್ರಮಾಣವಚನವನ್ನು ಸ್ವೀಕರಿಸಲಿದ್ದಾರೆ.

ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಬೆಳಿಗ್ಗೆ 10.15ಕ್ಕೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಲಿದ್ದಾರೆ.

ಈ ಸಮಾರಂಭಕ್ಕೂ ಮುನ್ನಾ, ನಿರ್ಗಮಿತ ರಾಷ್ಟ್ರಪತಿ ಮತ್ತು ನೂತನ ರಾಷ್ಟ್ರಪತಿಗಳು ವಿದ್ಯುಕ್ತ ಮೆರವಣಿಗೆಯಲ್ಲಿ ಸಂಸತ್ತಿಗೆ ಆಗಮಿಸಲಿದ್ದಾರೆ. ಸೇನಾ ಸಿಬ್ಬಂದಿ 21 ಬಾರಿ ಕುಶಾಲ ತೋಪು ಹಾರಿಸಿದ ನಂತ್ರ, ನೂತನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದು, ನಂತ್ರ ದೇಶವನ್ನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

About The Author