Dharawad News:
ಮೊಟ್ಟೆ ಮಹಾಯುದ್ಧ ಇದೀಗ ಇಡೀ ರಾಜ್ಯವನ್ನೇ ಸೇಡಿನ ಜ್ವಾಲೆಯಲ್ಲಿ ಬೇಯುವಂತೆ ಮಾಡಿದೆ. ಸಿದ್ದು ವಿರುದ್ಧದ ಪ್ರತಿಭಟನೆಗೆ ಕೈ ನಾಯಕರು ಕಾರ್ಯಕರ್ತರು ಗರಂ ಆಗಿದ್ದಾರೆ.ದಾರವಾಡದಲ್ಲೂ ಕೈಕಿಚ್ಚು ತಾರಕಕ್ಕೇರಿದೆ.
ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯಲ್ಲಿ ವೀರ್ ಸಾವರ್ಕರ್ ಅವರ ಭಾವಚಿತ್ರಕ್ಕೆ ಮೊಟ್ಟೆ ಒಡೆದು, ಕಾಲಿನಲ್ಲಿ ಭಾವಚಿತ್ರ ತುಳಿದು ಅವಮಾನ ಮಾಡಿದ್ದಾರೆ. ನಂತರ ಕೈ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರ ದಹಿಸಿರುವ ಘಟನೆ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರೇ ನಡೆದಿದೆ.
ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕೃತಿ ದಹನದ ವೇಳೆ ಕಾರ್ಯಕರ್ತರು ಏಕಾಏಕಿ ಸಾವರ್ಕರ್ ಭಾವಚಿತ್ರ ತಂದಿದ್ದಾರೆ. ಕಾರ್ಯಕರ್ತರು ಪೂರ್ವ ನಿಯೋಜಿತವಾಗಿ ಐದಾರು ಭಾವಚಿತ್ರ ತಂದಿದ್ದರು. ಪೊಲೀಸ್ ಬಂದೋಬಸ್ತ್ ಮಧ್ಯೆಯೇ ಸಾವರ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಲಾಗಿರುವುದು ದುರಂತ.
“ಈಗಿನ ಕಾಂಗ್ರಸ್ಸಿಗರು ಡೂಬ್ಲಿಕೇಟ್ ಕಾಂಗ್ರೆಸ್ಸಿಗರು” : ಪ್ರಲ್ಹಾದ್ ಜೋಶಿ
“ನಿಮ್ಮ ಕಾರ್ಯಕರ್ತರನ್ನು ನಿಯಂತ್ರಣದಲ್ಲಿಟ್ಟರೆ ಸರಿ…” ಬಿಜೆಪಿಗೆ ಡಿಕೆಶಿ ಎಚ್ಚರಿಕೆ
ನಾವು ಶಶಿಕಲಾ ಜೊಲ್ಲೆಗೆ ಹುಟ್ಟಿದವರಲ್ಲ: ಫೇಸ್ ಬುಕ್ ಲೈವ್ ನಲ್ಲಿ ನಲಪಾಡ್ ವಿವಾದಾತ್ಮಕ ಹೇಳಿಕೆ