ಮಂಡ್ಯ: ಡಿ.ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆ

Mandya news:

ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ಸಾಮಾಜಿಕ ಪರಿವರ್ತನೆಯ ಹರಿಕಾರ, ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಡಿ.ದೇವರಾಜ ಅರಸುರವರ ಅಲಂಕೃತ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ಪುಷ್ಪಾರ್ಚನೆ ಮಾಡಿ ಮೆರವಣಿಗೆ ರಥಕ್ಕೆ ಚಾಲನೆ ನೀಡಿದರು.

ಕಳಸ ಹೊತ್ತ ಮಹಿಳೆಯರು, ಪೂಜೆ ಕುಣಿತ, ವೀರಗಾಸೆ ಹಾಗೂ ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ  ಜಿ.ಪಂ.ಸಿಇಒ ಶಾಂತ ಎಲ್. ಹುಲ್ಮನಿ, ಹಿಂದುಳಿದ ಕಲ್ಯಾಣ ಇಲಾಖೆಯ ಅಧಿಕಾರಿ ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಬಿ.ರಂಗೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಎಸ್.ರಾಜಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ತುಮುಕೂರು: ತುಮಕೂರಿನಲ್ಲಿದೆ ‘ಕೈ’ ನಾಯಕರಿಂದ ಉದ್ಘಾಟನೆಗೊಂಡ ಸಾವರ್ಕರ್ ಉದ್ಯಾಣವನ

ಶಿವಮೊಗ್ಗ: ಆಗಸ್ಟ್ 23ರವರೆಗೆ ನಿಷೇಧಾಜ್ಞೆ ವಿಸ್ತರಣೆ

ಯುವ ಕಾಂಗ್ರೆಸ್ ಅಧ್ಯಕ್ಷ ಗೂಂಡಾ ಮಹಮ್ಮದ್ ನಲಪಾಡ್ ಹೇಳಿಕೆ ಕಾಂಗ್ರೆಸ್ ಪಕ್ಷದ ಅಧಿಕೃತ ನಿಲುವೇ? – BJP

About The Author