Manglore News:
ರಿಕ್ಷಾವೊಂದು ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾನೀರು ಎಂಬಲ್ಲಿ ನಡೆದಿದೆ. ಮೃತರನ್ನು ಸೋಮೇಶ್ವರ ಸೋಮನಾಥ ದೇವಸ್ಥಾನದ ಬಳಿಯ ನಿವಾಸಿ ಆನಂದ್ ಸಫಲ್ಯ(70) ಎಂದು ಗುರುತಿಸಲಾಗಿದೆ. ಆನಂದ್ ಅವರು ಬಾಡಿಗೆಗೆ ತೆರಳಿ ಹಿಂತಿರುಗುತ್ತಿರುವ ವೇಳೆ ಅವಘಡ ನಡೆದಿದೆ. ಪಾನೀರು ಅಸ್ಸಿಸಿ ಶಾಲೆ ಬಳಿ ಆನಂದ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಉರುಳಿ ಕಮರಿಗೆ ಬಿದ್ದಿದೆ. ಮೃತರು ಪತ್ನಿ, ಪುತ್ರ, ಪುತ್ರಿಯನ್ನ ಅಗಲಿದ್ದಾರೆ. ಈ ಸಂಬಂಧ ಮಂಗಳೂರು ದಕ್ಷಿಣ ಸಂಚಾರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
RSS ಖಾಕಿ ಚಡ್ಡಿಗೆ ಬೆಂಕಿಹಚ್ಚಿದ ಫೋಟೋ: ಕಾಂಗ್ರೆಸ್ ವಿರುದ್ಧ ತೇಜಸ್ವಿ ಸೂರ್ಯ ಕಿಡಿ
“ಸಿಟಿ ರವಿಗೆ ಲೂಟಿ ರವಿ ಎಂದಿದ್ದು ಚೇಳು ಕಚ್ಚಿದಂತಾಗಿದೆ “: ದಿನೇಶ್ ಗುಂಡೂರಾವ್




