ಬಾವಿಯಲ್ಲಿ ದೊರೆತ ಮಗುವಿಗೆ ಮಿಮ್ಸ್ ನಲ್ಲಿ ಚಿಕಿತ್ಸೆ: ಮಗುವಿನ ಆರೋಗ್ಯದ ಬಗ್ಗೆ ಮಾಹಿತಿ ಪಡೆದ ಗೋಪಾಲಯ್ಯ ಕೆ

Mandya News:

ಪಾಂಡವಪುರ ಚಂದ್ರೆ ಗ್ರಾಮದಲ್ಲಿ  35 ಅಡಿ ಆಳದ ನೀರಿಲ್ಲದ ತೆರದ ಬಾವಿಗೆ ಎಸೆದಿದ್ದು, ನವಜಾತ ಶಿಶುವನ್ನು ಪಾಂಡವಪುರ ತಾಲ್ಲೂಕಿನ ವೈದ್ಯಾಧಿಕಾರಿಗಳ ತಂಡ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ  ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದೆ.ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು ಇಂದು ಮಿಮ್ಸ್ ನ ಐ.ಸಿ.ಯು. ನಲ್ಲಿ ಮಗುವಿನ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡು ಮಗುವಿಗೆ ಉತ್ತಮ ಚಿಕಿತ್ಸೆ ನೀಡುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ಜಿಲ್ಲಾಡಳಿತದ ವತಿಯಿಂದ ಮಗುವಿನ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ ಎಂದರು.ಜಿಲ್ಲಾ ಆರೋಗ್ಯಾಧಿಕಾರಿ ಡಾ: ಧನಂಜಯ್ ಅವರು ಮಗು ಅವಧಿಗೆ ಮುನ್ನವೇ ಜನಿಸಿರುವ ಹಿನ್ನೆಲೆಯಲ್ಲಿ ಮಗುವಿನ ತೂಕ 1.50 ಕೆ.ಜಿ ಮಾತ್ರ ಇದ್ದು, ಮಗುವಿನ ತೂಕ ಹೆಚ್ಚಳವಾಗುವವರೆಗೆ ಒಂದು ವಾರ  ಐ.ಸಿ.ಯು ನಲ್ಲಿ  ಚಿಕಿತ್ಸೆ ಒದಗಿಸಲಾಗುವುದು ಎಂದು ಮಾಹಿತಿ ನೀಡಿದರು.

ಮಂಡ್ಯ: ಸೆ. 30 ಮೈ ಶುಗರ್ ಸಕ್ಕರೆ ಕಾರ್ಖಾನೆ ಸಂಪೂರ್ಣ ಕಾರ್ಯಚರಣೆ: ಗೋಪಾಲಯ್ಯ ಕೆ

ಮಂಡ್ಯ: ಅಶೋಕ್ ಜಯರಾಮ್ ನೇತತ್ವದಲ್ಲಿ ಉಚಿತ ಆರೋಗ್ಯ ,ದಂತ ತಪಾಸಣ ಶಿಬಿರ

ಮಂಡ್ಯ: ಸರ್. ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣ ಅಭಿವೃದ್ದಿ ಕಾಮಗಾರಿಗಳ ಶಂಕು ಸ್ಥಾಪನೆ

About The Author