Thursday, June 19, 2025

Latest Posts

ಜಿಲ್ಲೆಯಲ್ಲಿ ಮಹಾ ಕುಂಭ ಮೇಳದ ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸಿ: ಗೋಪಾಲಯ್ಯ ಕೆ

- Advertisement -

Mandya News:

ಕೆ.ಆರ್ ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13 ರಿಂದ 16 ರವರೆಗೆ ನಡೆಯಲಿರುವ ಕುಂಭ ಮೇಳ ಕಾರ್ಯಕ್ರಮದಲ್ಲಿ  ಕರ್ನಾಟಕದ ಮುಖ್ಯಮಂತ್ರಿಳು‌ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ‌ ಯೋಗಿ ಆದಿತ್ಯನಂದ‌ ಅವರುಗಳು ಭಾಗವಹಿಸಲಿದ್ದಾರೆ. ಕುಂಭ ಮೇಳದ ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸ ಬೇಕು ಎಂದು ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ‌ಸಚಿವ ಗೋಪಾಲಯ್ಯ ಕೆ ಅವರು ತಿಳಿಸಿದರು.ಅವರು ಇಂದು ತ್ರಿವೇಣಿ ಸಂಗಮದಲ್ಲಿ ಮಹಾಕುಂಭ ಮೇಳದ  ಪ್ರಚಾರ ವಾಹನ ಚಾಲನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಈ ಕಾರ್ಯಕ್ರಮಕ್ಕೆ ನಾನಾ ಭಾಗಗಳಿಂದ ಸಾಧು, ಸಂತರು, ಭಾಗವಹಿಸಲಿದ್ದಾರೆ. ಇದಕ್ಕಾಗಿ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಜಿಲ್ಲೆಯ ಸೇವೆ ನನ್ನ ಗುರಿ:  ಡಾ.ನಾರಾಯಣಗೌಡ

ಮಹಾಕುಂಭಮೇಳವನ್ನು ಜಗದ್ಗುರಗಳ ಸೂಚನೆಯಂತೆ ಯಾವ ರೀತಿ ಮಾಡಬೇಕು ಎಂಬುದರ ಕುರಿತು ಇಂದು ಪೂರ್ವಭಾವಿ ಸಭೆ ನಡೆಸಲಾಯಿತು. ಮಹಾಕುಂಭಮೇಳ ನಡೆಯುತ್ತಿರುವುದು ನಮ್ಮೆಲ್ಲರ ಪುಣ್ಯ. 9 ವರ್ಷಗಳ ಹಿಂದೆ ಅದ್ಭುತವಾಗಿ ನಡೆದಿತ್ತು. ಇದೀಗ ಮತ್ತೆ ಜಗದ್ಗುರುಗಳ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಸೋಣ. ಇದು ಕೆಆರ್ ಪೇಟೆಗೆ ಮಾತ್ರವಲ್ಲ, ಸುತ್ತಮುತ್ತಲಿನ ನಾಲ್ಕೈದು ಜಿಲ್ಲೆಗಳಿಗೆ ಹೆಮ್ಮೆಯ ಕಾರ್ಯಕ್ರಮ. ನಾನು ಸೇವಕನಾಗಿ ದುಡಿಯೋಕೆ  ಬಂದಿದ್ದು, ರಾಜಕಾರಣದಿಂದ ಏನನ್ನು ಮಾಡಬೇಕಿಲ್ಲ. ಸೇವಕನಾಗಿ ದುಡಿದು ಕುಂಭಮೇಳವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗೋಣ. ಈ ಕಾರ್ಯಕ್ರಮಕ್ಕೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಗಣ್ಯರು ಬರಲಿದ್ದಾರೆ‌. ಈ ಕಾರ್ಯಕ್ರಮದಲ್ಲಿ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಯಶಸ್ವಿಗೊಳಿಸಬೇಕು ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಹೇಳಿಕೆ

9 ವರ್ಷಗಳ ಹಿಂದೆ ಯಾವುದೇ ಪೂರ್ವ ಸಿದ್ದತೆಗಳಿಲ್ಲದೇ, ದಿಢೀರ್ ಆಗಿ ರೂಪುಗೊಂಡು ಯಶಸ್ವಿಯಾಗಿ ಕುಂಭಮೇಳ ನಡೆದಿತ್ತು. ಆಗ ಸಂಪೂರ್ಣ ಜವಾಬ್ದಾರಿಯನ್ನ ತೆಗೆದುಕೊಂಡಿದ್ದ ನಾರಾಯಣಗೌಡರು ಯಶಸ್ವಿಗೊಳಿಸಿದ್ದರು. ಈಗ ಸಚಿವರಾಗಿ ಮತ್ತೊಮ್ಮೆ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡಿದ್ದು, ಉತ್ತಮವಾಗಿ ರೂಪಿಸುತ್ತಿದ್ದಾರೆ. ಮಹಾಕುಂಭಮೇಳದ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಎಲ್ಲರ ಸುಯೋಗ. ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ‌. ಗಂಗಾರತಿ, ಸ್ನಾನಘಟ್ಟಗಳನ್ನು ನಿರ್ಮಿಸಲಾಗುತ್ತಿದ್ದು, ಸ್ನಾನ ಘಟ್ಟಗಳನ್ನು ಬಳಸುವಾಗ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲರೂ ಇದಕ್ಕೆ ಸಹಕರಿಸಿ ಯಶಸ್ವಿಗೊಳಿಸಬೇಕು ಎಂದು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು ಹೇಳಿದರು.

ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿಯವರ ಹೇಳಿಕೆ

ಕುಂಭಮೇಳ ಆಯೋಜನೆ ಕುರಿತು ಈ ಹಿಂದೆ ವಿಜಯನಗರದ ಮಠದಲ್ಲಿ ಪೂರ್ವಭಾವಿ ಸಭೆ ನಡೆದಿತ್ತು. ಇಂದು ಅದಕ್ಕೆ ಪೂರಕವಾಗಿ ಮತ್ತೊಂದು ಸಭೆ ನಡೆದಿದೆ. ಸರ್ಕಾರ, ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗ್ತಿದೆ. ನದಿ ನೀರಿಗೆ, ಗಾಳಿಗೆ ಯಾವುದೇ ಜಾತಿ ಇಲ್ಲ. ಜಾತಿಬೇಧ, ಪಕ್ಷಬೇಧ ಮರೆತು ಎಲ್ಲರೂ ಒಟ್ಟಾಗಿ ಸೇರಿ ಇದನ್ನು ಯಶಸ್ವಿಗೊಳಿಸಬೇಕು. ಇದು ಜನಮಾನಸಕ್ಕೆ ಮುಟ್ಟುವ ಕಾರ್ಯಕ್ರಮವಾಗಲಿ ಎಂದು ಚುಂಚಶ್ರೀಯವರು ಹೇಳಿದರು.ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ನಂತರದಲ್ಲಿ ಅವರು ಶ್ರೀ ಮಲೆ ಮಹದೇಶ್ವರ ಜ್ಯೋತಿ ಯಾತ್ರೆಗೆ ಕೈಗೊಂಡಂತಹ ಮೂರು ಮಾರ್ಗಗಳ ಬಗ್ಗೆ ವಿವರವಾಗಿ ತಿಳಿಸಿದರು.

ಮಹಾ ಕುಂಭಮೇಳದಲ್ಲಿ ನಡೆಯುವಂತಹ ದೈನಂದಿನ ಧಾರ್ಮಿಕ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಮನೋರಂಜನೆ ಕಾರ್ಯಕ್ರಮಗಳು, ಕಾರ್ಯಕ್ರಮದ ವೇದಿಕೆಯ ನಕ್ಷೆ  ಸೇರಿದಂತೆ ಕುಂಭಮೇಳ ಕಾರ್ಯಕ್ರಮಕ್ಕೆ ಈವರೆಗೆ ಕೈಗೊಂಡಂತಹ ಪೂರ್ವ ಸಿದ್ಧತೆಗಳ ಬಗ್ಗೆ ಸಭೆಗೆ  ಸಂಪೂರ್ಣವಾಗಿ ಮಾಹಿತಿ ನೀಡಿದರು.ಕಾಗಿನೆಲೆ ಶಾಖಾಮಠದ ಶಿವಾನಂದಪುರಿ ಸ್ವಾಮೀಜಿ, ಎಂಎಲ್‌ಸಿ ಕೇಶವ ಪ್ರಸಾದ್, ಮಾಜಿ ಎಂಎಲ್‌ಸಿ ಮಾದೇಗೌಡ, ಎಸ್‌ಪಿ ಯತೀಶ್, ಅಪರ ಜಿಲ್ಲಾಧಿಕಾರಿ ಡಾ: ಎಚ್.ಎಲ್ ನಾಗರಾಜು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕುಂಭಮೇಳ ಪ್ರಚಾರ ವಾಹನಕ್ಕೆ ಚಾಲನೆ

ಕೆ.ಆರ್ ಪೇಟೆ ತಾಲ್ಲೂಕಿನ ಅಂಬಿಗರ ಹಳ್ಳಿಯ ತ್ರಿವೇಣಿ ಸಂಗಮದಲ್ಲಿ ನಡೆಯುವ ಮಹಾಕುಂಭಮೇಳ ಕಾರ್ಯಕ್ರಮದ ಹಿನ್ನಲೆ ಪ್ರಚಾರ ವಾಹನ ಹಾಗೂ ದಾನಿಗಳ ಕೊಡುಗೆ ಸ್ವೀಕಾರ ವಾಹನಕ್ಕೆ ಶ್ರೀಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು, ಸುತ್ತೂರು ಕ್ಷೇತ್ರದ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು,ಕಾಗಿನೆಲೆ ಕನಕಗುರು ಪೀಠದ ಜಗದ್ಗುರು ಶ್ರೀ ಶ್ರೀ ಶ್ರೀ ನಿರಂಜನಾನಂದಪುರಿ ಸ್ವಾಮೀಜಿಗಳು ಹಾಗೂ ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ,

ರೇಷ್ಮೆ,ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ ಅವರುಗಳು ಚಾಲನೆ ನೀಡಿದರು.

ಮಹಾಕುಂಭಮೇಳ ಕಾರ್ಯಕ್ರಮದ ಪ್ರಚಾರ

ವಾಹನ ಹಾಗೂ ದಾನಿಗಳ ಕೊಡುಗೆ ಸ್ವೀಕಾರದ ಮೊದಲನೇ ವಾಹನವು ಸೆಪ್ಟೆಂಬರ್ 27,28,29ರಂದು ನಾಗಮಂಗಲ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮಗಳಲ್ಲಿ ಸಂಚರಿಸುವುದು.ಸೆಪ್ಟೆಂಬರ್ 30 ಹಾಗೂ ಅಕ್ಟೋಬರ್ 01 ಮತ್ತು 02 ರಂದು ಮದ್ದೂರು ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮಗಳಲ್ಲಿ ಸಂಚರಿಸುವುದು.

ಅ.3 ಮತ್ತು 4 ರಂದು ಮಳವಳ್ಳಿ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮಗಳಲ್ಲಿ ಹಾಗೂ ಅ.5 ಮತ್ತು 6 ರಂದು ಮಂಡ್ಯ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮಗಳಲ್ಲಿ ಸಂಚರಿಸುವುದು.

ಅ.7 ಮತ್ತು 8 ರಂದು ಶ್ರೀರಂಗಪಟ್ಟಣ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮಗಳಲ್ಲಿ ಹಾಗೂ ಅ.9 ಮತ್ತು 10 ರಂದು ಪಾಂಡವಪುರ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮಗಳಲ್ಲಿ ದಾನಿಗಳ ಕೊಡುಗೆ ಸ್ವೀಕಾರ ವಾಹನವು ಸಂಚರಿಸುವುದು.

ಮಹಾಕುಂಭಮೇಳ ಕಾರ್ಯಕ್ರಮದ ಎರಡನೇ ಪ್ರಚಾರದ ವಾಹನವು ಸೆಪ್ಟೆಂಬರ್ 27,28,29ರಂದು  ಕೆ.ಆರ್.ಪೇಟೆ ತಾಲ್ಲೂಕಿನ ಕಿಕ್ಕೇರಿ ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿ ಮತ್ತು ಗ್ರಾಮಗಳಲ್ಲಿ ಸಂಚರಿಸುವುದು.ಸೆಪ್ಟೆಂಬರ್ 30, ಹಾಗೂ ಅಕ್ಟೋಬರ್01 ಮತ್ತು 02 ರಂದು ಬೂಕನಕೆರೆ ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮಗಳಲ್ಲಿ ಸಂಚರಿಸುವುದು.

ಅ.3 ಮತ್ತು 4 ರಂದು ಶೀಳನೆರೆ ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮಗಳಲ್ಲಿ ಹಾಗೂ ಅ.5 ಮತ್ತು 6 ರಂದು ಸಂತೇಬಾಚಹಳ್ಳಿ ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮಗಳಲ್ಲಿ ಸಂಚರಿಸುವುದು.

ಅ.7ಮತ್ತು 8 ರಂದು ಅಕ್ಕಿಹೆಬ್ಬಾಳು ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮಗಳಲ್ಲಿ ಹಾಗೂ ಅ.9 ಮತ್ತು 10 ರಂದು ಕಸಬಾ ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮಗಳಲ್ಲಿ ಹಾಗೂ ಕೆ.ಆರ್ ಪೇಟೆ ಪುರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಲ್ಲಿ ದಾನಿಗಳ ಕೊಡುಗೆ ಸ್ವೀಕಾರ ವಾಹನವು ಸಂಚರಿಸುವುದು.

ಕುಂಭಮೇಳ ಪ್ರಚಾರ ವಾಹನ ಚಾಲನೆಯ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಸ್.ಅಶ್ವತಿ, ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಉಪವಿಭಾಗಾಧಿಕಾರಿ ಬಿ.ಸಿ ಶಿವಂದಾಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕೆಪಿಸಿಸಿ ವಕ್ತಾರರಾಗಿ ಎ.ಸಿ.ವಿನಯರಾಜ್ ನೇಮಕ..!

ಸುತ್ತೂರು ಶ್ರೀ, ಚುಂಚಶ್ರೀಗಳ ನೇತೃತ್ವದಲ್ಲಿ ಮಹಾಕುಂಭಮೇಳ ಕುರಿತು ಪೂರ್ವಭಾವಿ ಸಭೆ:

ವೇದಿಕೆ ಮೇಲೆಯೇ ದಂಪತಿಗಳ ಕುರ್ಚಿ ಕಾದಾಟ : ಸಿದ್ದು ಸಲಹೆಯೇನು..?!

 

- Advertisement -

Latest Posts

Don't Miss