ಇಂದಿನಿಂದ 3 ದಿನಗಳ ಕಾಲ ಪಾಂಡವಪುರದಲ್ಲಿ ‘ಪುನೀತೋತ್ಸವ’

ಮಂಡ್ಯ: ಜಿಲ್ಲೆಯ ಪಾಂಡವಪುರದಲ್ಲಿ ಇಂದಿನಿಂದ 3 ದಿನ ಪುನೀತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅನೇಕ ಕಲಾವಿದರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಸಿ.ಎಸ್ ಪುಟ್ಟರಾಜು ನೇತೃತ್ವದಲ್ಲಿ ಆಯೋಜಿಸಲಾದ ಕಾರ್ಯಕ್ರಮಕ್ಕೆ ನಟ ನಿಖಿಲ್ ಕುಮಾರಸ್ವಾಮಿ ಅವರು ಚಾಲನೆ ನೀಡಲಿದ್ದಾರೆ.

ಅಯ್ಯಪ್ಪ ಸ್ವಾಮಿ ಮಾಲೆ ಹಾಕುವವರು ಕಪ್ಪು ಬಟ್ಟೆಗಳನ್ನು ಧರಿಸಲು ಕಾರಣವೇನು..?

ಇನ್ನು ಸಂಜೆ ಕಾರ್ಯಕ್ರಮಕ್ಕೆ ಹಲವು ನಟ ನಟಿಯರು ಆಗಮಿಸಲಿದ್ದಾರೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಗಾಯಕ ವಿಜಯ ಪ್ರಕಾಶ್, ಹಾಗೂ ಗಾಯಕಿ ಅನನ್ಯ ಭಟ್ ನೇತೃತ್ವದಲ್ಲಿ ಸಂಗೀತ ಕಾರ್ಯಕ್ರಮ ನಡೆಯಲಿದೆ ಮತ್ತು ಹಾಸ್ಯ ನಟರಿಂದ ಹಾಸ್ಯ ಸಂಜೆ ಕಾರ್ಯಕ್ರಮ ಕೂಡ ನಡೆಯುತ್ತದೆ. ಇನ್ನು ಕಾರ್ಯಕ್ರಮವನ್ನು ಹಬ್ಬದಂತೆ ಆಚರಿಸಲಾಗುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಕಾರ್ಯಕ್ರಮಕ್ಕೆ ಆಗಮಿಸಬೇಕೇಂದು ಶಾಸಕ ಪುಟ್ಟರಾಜು ಅವರು ಪಾಂಡವಪುರದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಸಿಎಂ ವಿರುದ್ಧ ಬೇಸರ ವ್ಯಕ್ತ ಪಡಿಸಿದ ಶಾಸಕ ಕೆ.ಎಸ್. ಲಿಂಗೇಶ್

‘ಜೂ ರೈಡ್’ ಇನ್ಸ್ಟಾಲ್ ಮಾಡಿದರೆ ಮನೆ ಬಾಗಿಲಿಗೆ ಬರಲಿದೆ ಆಟೋ

About The Author