Saturday, June 21, 2025

Latest Posts

ಇಂದು ಕುಮಾರಸ್ವಾಮಿ 64ನೇ ವರ್ಷದ ಹುಟ್ಟುಹಬ್ಬ : ರಾಮನಗರದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ

- Advertisement -

ರಾಮನಗರ: ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು 64ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ರಾಮನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆಯನ್ನು ಸಲ್ಲಿಸಲಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ಮುಖಂಡರು, ಕಾರ್ಯಕರ್ತರು, ನಾಯಕರುಗಳು ಶುಭಾಶಯಗಳನ್ನು ಕೋರುತ್ತಿದ್ದಾರೆ. ರಾಜ್ಯಾದ್ಯಂತ ಜೆಡಿಎಸ್ ಪಂಚರತ್ನ ರಥಯಾತ್ರೆ ಯಲ್ಲಿ ಸಂಪೂರ್ಣವಾಗಿ ಕುಮಾರಸ್ವಾಮಿ ಅವರು ತೊಡಗಿಸಿಕೊಂಡಿದ್ದಾರೆ.ಇನ್ನು ರಾಜಕೀಯದಲ್ಲಿ ಸಕ್ರಿಯರಾಗಿರುವ ನಾಯಕರುಗಳು ಟ್ವೀಟ್ ಮೂಲಕ ಶುಭಾಶಯಗಳನ್ನು ತಿಳಿಸುತ್ತಿರುತ್ತಾರೆ. ಆದರೆ ಕುಮಾರರಸ್ವಾಮಿ ಅವರ ಜನ್ಮದಿನಕ್ಕೆ ಇತರೆ ಪಕ್ಷದ ನಾಯಕರುಗಳು, ಹಾಲಿ ಮುಖ್ಯಮಂತ್ರಿಗಳು ಯಾರೂ ಸಹ ಶುಭಾಶಯ ತಿಳಿಸಿಲ್ಲ.ಬಿಎಸ್ ಯಡಿಯೂರಪ್ಪನವರು ಫೋನ್ ಕಾಲ್ ಮಾಡಿ ಶುಭಾಶಯ ತಿಳಿಸಿದ್ದಾರೆ.

ಹಾಸನದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ ಮಾಜಿ ಸಚಿವ ಎ.ಮಂಜು

ಕುಮಾರಸ್ವಾಮಿ ಜನ್ಮದಿನದ ಹಿನ್ನೆಲೆ ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ  ಕಾರ್ಯಕ್ರಮ ಆಯೋಜಿಸಲಾದೆ. ಪಕ್ಷಾತೀತವಾಗಿ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ. ಕಾರ್ಯಕ್ರಮಕ್ಕೆ ಈಗಾಗಲೇ ಸಕಲ ಸಿದ್ಧತೆ ನಡೆಸಲಾಗಿದ್ದು, ತಿರುಪತಿ ಮಾದರಿಯಲ್ಲಿ ದೇವಸ್ಥಾನ ನಿರ್ಮಾಣ ಮಾಡಲಾಗಿದೆ. ಕಾರ್ಯಕ್ರವು ಸಂಜೆ 6 ಗಂಟೆಗೆ ಶುರುವಾಗಲಿದೆ.

ಹಾಸನದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ ಮಾಜಿ ಸಚಿವ ಎ.ಮಂಜು

ಚೀನಾ ಘರ್ಷಣೆ ನಂತರ ಅಗ್ನಿ ವಿ ಪ್ರಯೋಗ ನಡೆಸಿದ ಭಾರತ

- Advertisement -

Latest Posts

Don't Miss