Friday, October 18, 2024

Latest Posts

ಬೆಳಗಾವಿ ಹೊರವಲಯದ ರಕ್ಷಣಾ ಇಲಾಖೆಯ 700 ಎಕರೆ ಭೂಮಿಯನ್ನು ಕೈಗಾರಿಕೆಗಳ ಸ್ಥಾಪನೆ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ : ಮುರುಗೇಶ್ ನಿರಾಣಿ

- Advertisement -

ಬೆಳಗಾವಿ: ಬೆಳಗಾವಿಯ ಹೊರವಲಯದಲ್ಲಿರುವ ರಕ್ಷಣಾ ಇಲಾಖೆಗೆ ಸೇರಿದ ಸುಮಾರು 700 ಎಕರೆ ಭೂಮಿಯನ್ನು ಕೈಗಾರಿಕೆಗಳ ಸ್ಥಾಪನೆಗೆ ಒದಗಿಸಿದರೆ,ರಾಜ್ಯ ಸರ್ಕಾರದಿಂದ ಪರ್ಯಾಯವಾಗಿ ಖಾನಾಪುರ ತಾಲೂಕಿನಲ್ಲಿ ಒಂದು ಸಾವಿರ ಎಕರೆ ಭೂಮಿಯನ್ನು ರಕ್ಷಣಾ ಇಲಾಖೆಗೆ ಒದಗಿಸಲಾಗುವುದು ಎಂಬ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಹೇಳಿದರು.

ಇದು ಸೇತುವೆ ಎಂದು ಹೇಳುವುದು ಕಷ್ಟ : ರಾಮಸೇತು ಅಸ್ತಿತ್ವದ ಬಗ್ಗೆ ಸಂಸತ್ತಿನಲ್ಲಿ ಕೇಂದ್ರದ ಪ್ರತಿಕ್ರಿಯೆ

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಬೆಳಗಾವಿ ದಕ್ಷಿಣಕ್ಷೇತ್ರದ ಶಾಸಕ ಅಭಯ್ ಪಾಟೀಲ ಅವರ ಪ್ರಶ್ನೆಗೆ ಸಚಿವ ಮುರುಗೇಶ ನಿರಾಣಿ ಅವರು ಉತ್ತರಿಸಿ, ಇತ್ತೀಚೆಗೆ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಬೆಂಗಳೂರಿನ ಹೋರ ರಾಜ್ಯದ ಎರಡನೇ ಹಂತದ ನಗರಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಉದ್ದಿಮೆದಾರರಿಗೆ ಹೆಚ್ಚು ಪ್ರೋತ್ಸಾಹ,ಸೌಕರ್ಯಗಳನ್ನು ಒದಗಿಸುವುದಾಗಿ ಘೋಷಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಫೌಂಡ್ರಿ,ಮಿಷನ್ ಕಾಂಪೊನೆಂಟ್ಸ್,ಸಿಮೆಂಟ್,ಸಕ್ಕರೆ,ಬೆಲ್ಲ,ಜನರಲ್ ಇಂಜಿನಿಯರಿಂಗ್,ಜವಳಿ ಹಾಗೂ ಕೃಷಿ ಆಧಾರಿತ ಕೈಗಾರಿಕೆಗಳು 52 ಉದ್ಯಮಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.

ಭಾರತದಲ್ಲಿ ಭವಿಷ್ಯದ ಶಿಕ್ಷಣ ವ್ಯವಸ್ಥೆಯನ್ನು ರಚಿಸಲಾಗುತ್ತಿದೆ : ಪ್ರಧಾನಿ ಮೋದಿ

ಹೊನಗಾ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿಗೋಲ್ಡ್ ಗ್ಲಾಸ್‍ ಕಂಪೆನಿಯು ಮೊದಲ ಹಂತದಲ್ಲಿ 2500 ಕೋಟಿ ರೂ.ಗಳನ್ನು ಹೂಡಿಕೆ ಮಾಡಿ,8 ತಿಂಗಳ ಅವಧಿಯಲ್ಲಿ ಘಟಕ ಸ್ಥಾಪನೆ ಮಾಡಿದೆ. ರಷ್ಯಾ ಮೂಲದ ಇಲೆಕ್ಟ್ರಿಕಲ್ ವಾಹನ ಉದ್ಯಮ ಸಂಸ್ಥೆಯೊಂದು ಬೆಂಗಳೂರಿನಲ್ಲಿ ಬೃಹತ್‍ ಘಟಕ ಸ್ಥಾಪಿಸಲು ಇಚ್ಛೆ ವ್ಯಕ್ತಪಡಿಸಿ ಮುಂದೆ ಬಂದಿದೆ.ಎರಡನೇ ಹಂತದ ನಗರಗಳಾಗಿರುವ ಮೈಸೂರು,ಹುಬ್ಬಳ್ಳಿ-ಧಾರವಾಡ,ಬೆಳಗಾವಿ,ಕಲಬುರ್ಗಿಯಂತಹ ನಗರಗಳಲ್ಲಿ ಸ್ಥಾಪಿಸಲು ಅವರಿಗೆ ಸಲಹೆ ನೀಡಲಾಗಿದೆ. ಬೆಳಗಾವಿ ಬಳಿ ಗೋಲ್ಡ್ ಕ್ಲಾಸ್ ಕೆಟಗರಿಯ ವಿಶೇಷ ಕೈಗಾರಿಕಾಭಿವೃದ್ಧಿ ಪ್ರದೇಶ ಸ್ಥಾಪಿಸಿ, ಗಡಿ ಭಾಗದ ಯುವಜನರಿಗೆ ಉದ್ಯೋಗ ಒದಗಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದು ತಿಳಿಸಿದರು.

ವೈದ್ಯಕೀಯ ಆಮ್ಲಜನಕದ ಪೂರೈಕೆಯನ್ನು ಖಚಿತಪಡಿಸಿಕೊಳ್ಳಿ : ರಾಜ್ಯಗಳಿಗೆ ಆರೋಗ್ಯ ಸಚಿವಾಲಯ ಪತ್ರ

ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಎರಡನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ನೀಡುವ ಮಾದರಿಯಲ್ಲಿಯೇ ಗಡಿಭಾಗಗಳಲ್ಲಿ ಕೈಗಾರಿಕೆ ಸ್ಥಾಪಿಸುವವರಿಗೆ ವಿಶೇಷ ಸೌಕರ್ಯಗಳನ್ನು ಸರ್ಕಾರ ನೀಡಬೇಕು ಎಂದು ಸಲಹೆ ನೀಡಿದರು. ಶಾಸಕ ಅನಿಲ ಬೆನಕೆ ಮಾತನಾಡಿ,ಬೆಳಗಾವಿ ಸಮೀಪದ 700 ಎಕರೆ ರಕ್ಷಣಾ ಭೂಮಿಯಲ್ಲಿ ಐಟಿ ಉದ್ಯಮಗಳನ್ನು ಸ್ಥಾಪಿಸಿದರೆ ಈ ಭಾಗದ ಯುವ ಇಂಜಿನಿಯರಿಂಗ್ ಪದವೀಧರರು ಪುಣೆ ಹಾಗೂ ಬೆಂಗಳೂರಿಗೆ ವಲಸೆ ಹೋಗುವುದು ತಪ್ಪುತ್ತದೆ ಎಂದರು.

ವೈದ್ಯಕೀಯ ಆಮ್ಲಜನಕದ ಪೂರೈಕೆಯನ್ನು ಖಚಿತಪಡಿಸಿಕೊಳ್ಳಿ : ರಾಜ್ಯಗಳಿಗೆ ಆರೋಗ್ಯ ಸಚಿವಾಲಯ ಪತ್ರ

ಇದಕ್ಕೆ ಇವ್ರು ದೊಡ್ಮನೆಯವರು ಅನ್ನೋದು..!!

- Advertisement -

Latest Posts

Don't Miss