Thursday, June 19, 2025

Latest Posts

ದೇವರಿಗೆ ಹರಕೆ ತೀರಿಸಿದ ಎಡಿಜಿಪಿ ಅಲೋಕ್ ಕುಮಾರ್..!

- Advertisement -

Mandya News:
ಕಳೆದ ಹತ್ತು ಹನ್ನೊಂದು ದಿನದಿಂದ ರಾಜ್ಯದಲ್ಲಿ ಬಾರಿ ಸದ್ದು ಮಾಡಿದ ಹೆಸರು ಸ್ಯಾಂಟ್ರೋ ರವಿ ರಾಜ್ಯ ರಾಜಕೀಯದಲ್ಲಿ, ಪೊಲೀಸ್ ವಲಯದಲ್ಲಿ ಸಂಚಲನ ಎಬ್ಬಿಸಿದ್ದ. ಮಾಡಬಾರದ ಮಣ್ಣು ತಿನ್ನೋ ಕೆಲಸ ಮಾಡಿ ಪೊಲೀಸರಿಗೂ ಸಿಗದೇ ತಲೆ ತಪ್ಪಿಸಿಕೊಂಡು ಓಡುತ್ತಿದ್ದಾ ಸ್ಯಾಂಟ್ರೋ ಅಂತಿಮವಾಗಿ ಗುಜರಾತ್ನಲ್ಲಿ ಖಾಕಿ ಬಲೆಗೆ ಬಿದ್ದಿದ್ದಾನೆ. ಇನ್ನು ಈ ಸ್ಯಾಂಟ್ರೋ ರವಿ ಬಂಧನಕ್ಕೆ ಎಡಿಜಿಪಿ ಅಲೋಕ್ ಕುಮಾರ್ ದೇವರಿಗೆ ಹರಕೆ ಹೊತ್ತಿದ್ದರಂತೆ. ಇದೀಗ ಸ್ಯಾಂಟ್ರೋ ರವಿ ಬಂಧನವಾಗಿದ್ದರಿಂದ ಹರಕೆ ತೀರಿಸಿದ್ದಾರೆ.
ಹೌದು…ಸ್ಯಾಂಟ್ರೋ ಬಂಧನಕ್ಕೆ ಪೊಲೀಸ್ ಇಲಾಖೆ ಮೇಲೆ ಒತ್ತಡ ಹೆಚ್ಚಾಗಿತ್ತು. ಇದರಿಂದ ಪೊಲೀಸರು ಹಲವು ತಂಡಗಳನ್ನು ಮಾಡಿಕೊಂಡು ಬೇರೆ-ಬೇರೆ ಕಡೆಗಳಲ್ಲಿ ಹುಡುಕಾಟ ನಡೆಸಿದ್ದರು. ಇತ್ತ ಅಲೋಕ್ ಕುಮಾರ್ ಸ್ಯಾಂಟ್ರೋ ರವಿ ಬಂಧನವಾಗಲಿ ಎಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ಗ್ರಾಮದಲ್ಲಿರುವ ನಿಮಿಷಾಂಭ ದೇವಿಗೆ ಹರಕೆ ಹೊತ್ತಿದ್ದರು. ಅದರಂತೆ ಇದೀಗ ಸ್ಯಾಂಟ್ರೋ ಪೊಲೀಸ್ ಬಲೆ ಬಿದ್ದಿದ್ದಾನೆ. ಈ ಹಿನ್ನೆಲೆಯಲ್ಲಿ ಇಂದು ಅಲೋಕ್ ಕುಮಾರ್ ನಿಮಿಷಾಂಬ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಹರಕೆ ತೀರಿಸಿದರು.

“ರಾಜ್ಯಕ್ಕೆ ಮೋದಿ ನೂರು ಬಾರಿ ಬಂದರೂ ಬಿಜೆಪಿ ಗೆಲ್ಲುವುದಿಲ್ಲ “: HDK

ಗುಜರಾತಿನಲ್ಲಿ ಸ್ಯಾಂಟ್ರೊ ರವಿ ಬಂಧನದ ಬಗ್ಗೆ ಅನುಮಾನಗಳಿವೆ: ಹೆಚ್.ಡಿ.ಕುಮಾರಸ್ವಾಮಿ

“ಸಿದ್ದರಾಮಯ್ಯ ಕೋಲಾರದಲ್ಲಿ ಮಾತ್ರ ಸ್ಪರ್ದೆ ಮಾಡುತ್ತಾರೆ”:ಅನಿಲ್ ಕುಮಾರ್

- Advertisement -

Latest Posts

Don't Miss