- Advertisement -
National news:
ಹಿರಿಯ ಕಾಂಗ್ರೆಸ್ ನಾಯಕ ಮತ್ತು ಪಂಜಾಬ್ ಮಾಜಿ ಹಣಕಾಸು ಸಚಿವ ಮನ್ಪ್ರೀತ್ ಸಿಂಗ್ ಬಾದಲ್ ಕಾಂಗ್ರೆಸ್ ಪಕ್ಷವನ್ನು ತೊರೆದ ಕೆಲವೇ ಗಂಟೆಗಳ ನಂತರ ಬಧವಾರ 18 ಜನವರಿಯಂದು ಬಿಜೆಪಿ ಸೇರಿದ್ದಾರೆ.ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ವಿವಿಧ ನಾಯಕರ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾದರು. ರಾಹುಲ್ ಗಾಂಧಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ, ಬಾದಲ್ ತಾನು ಕಾಂಗ್ರೆಸ್ ಪಕ್ಷದಿಂದ ಭ್ರಮನಿರಸನಗೊಂಡಿರುವುದಾಗಿ ಹೇಳಿದ್ದಾರೆ. ಪಕ್ಷದಲ್ಲಿ ಮತ್ತು ಸರ್ಕಾರದಲ್ಲಿ ನಾನು ಹೊಂದಿರುವ ಜವಾಬ್ದಾರಿಗೆ ಪ್ರತಿ ಔನ್ಸ್ ಶಕ್ತಿಯನ್ನು ವಿನಿಯೋಗಿಸಿದ್ದೇನೆ. ನನಗೆ ಈ ಅವಕಾಶಗಳನ್ನು ಒದಗಿಸಿದ್ದಕ್ಕಾಗಿ ಮತ್ತು ಈ ಹಿಂದೆ ನೀವು ನನಗೆ ತೋರಿದ ದಯೆ ಮತ್ತು ಸೌಜನ್ಯಕ್ಕಾಗಿ ನಾನು ನಿಮಗೆ ಧನ್ಯವಾದಗಳು ಎಂದು ಬಾದಲ್ ತಮ್ಮ ರಾಜೀನಾಮೆ ಪತ್ರವನ್ನು ಟ್ವೀಟ್ ಮಾಡಿದ್ದಾರೆ.
- Advertisement -