- Advertisement -
ಕೆಸಿಸಿ 3ನೇ ಸೀಸನ್ ಆರಂಭಿಸಲು ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಎರಡೂ ಸೀಸನ್ ಯಶಸ್ವಿಯಾದ ಬಳಿಕ ಇದೀಗ ಮೂರನೇ ಸೀಸನ್ಗೂ ಶೀಘ್ರವೇ ಚಾಲನೆ ಸಿಗಲಿದೆ.
ಕೆಸಿಸಿಯಲ್ಲಿ ಭಾಗವಹಿಸಲು ನಾವು ಚಿತ್ರರಂಗದ ಎಲ್ಲರಿಗೂ ಆಹ್ವಾನ ನೀಡುತ್ತಿದ್ದೇವೆ. ಕೆಲವರಿಗೆ ಈ ಟೂರ್ನಿಯಲ್ಲಿ ಆಡೋಕೆ ಇಷ್ಟ ಇರಲ್ಲ. ಅಂಥವರು ಬರಲ್ಲ. ಅವರು ಯಾಕೆ ಬಂದಿಲ್ಲ, ಇವರು ಯಾಕೆ ಬಂದಿಲ್ಲ ಅಂತ ಕೇಳಬೇಡಿ. ಚಿತ್ರರಂಗ ನನ್ನ ಸ್ವತ್ತಲ್ಲ. ನಾವು ಎಲ್ಲರಿಗೂ ಆಹ್ವಾನ ನೀಡುತ್ತಿದ್ದೇವೆ.
ಈ ವರ್ಷ ಕೂಡ ಆರು ಅಂತಾರಾಷ್ಟ್ರೀಯ ಆಟಗಾರರು ಇರುತ್ತಾರೆ ಎಂದು ನಟ ಕಿಚ್ಚ ಸುದೀಪ್ ಮಾಹಿತಿ ನೀಡಿದ್ದಾರೆ. ಸಿನಿಮಾ ರಂಗದವರು ಕೂಡ ಇರುತ್ತಾರೆ. ಬೇರೆ ಬೇರೆ ಸಿನಿಮಾ ಇಂಡಸ್ಟ್ರಿಯವರು ಸಹ ಕ್ರಿಕೆಟ್ ಆಡೋಕೆ ಬರಬಹುದು.
- Advertisement -