Political News:
ಬಿಜೆಪಿ ನಾಯಕರ ವಿರುದ್ಧ ಚುನಾವಣಾ ಅಕ್ರಮ ಆರೋಪ ಸಂಬಂಧ ಬೆಂಗಳೂರಿನಲ್ಲಿಂದು ಕಾಂಗ್ರೆಸ್ ನಾಯಕರು ದೂರು ದಾಖಲಿಸಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಇತರ ನಾಯಕರು ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಿಎಂ ಬಸವರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲು, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದಾರೆ.ಇನ್ನು ದೂರು ನೀಡಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಿಜೆಪಿಯ ನಡೆ ಗಮನಿಸುತ್ತೀದಿರಿ. ಸಿಎಂ ಬೊಮ್ಮಾಯಿ & ಅವರ ತಂಡ ಭ್ರಷ್ಟಾಚಾರದ ಪಿತಾಮಹ. ಬಿಜೆಪಿ ನಾಯಕರು ಮತದಾರರಿಗೆ ಆಮಿಷವೊಡ್ಡಲು ಹೊರಟಿದ್ದಾರೆ. ೪೦% ಕಮಿಷನ್ ಮೂಲಕ ಸಾವಿರಾರು ಕೋಟಿ ಸಂಗ್ರಹ ಮಾಡಿದ್ದಾರೆ. ಒಂದು ಮತಕ್ಕೆ 6 ಸಾವಿರ ಕೊಡ್ತೀವಿ ಎಂದು ಜಾರಕಿಹೊಳಿ ಹೇಳಿದ್ದಾರೆ. ಶಾಸಕ ರಮೇಶ್ ಜಾರಕಿಹೊಳಿ ಆಮಿಷದ ವಿಡಿಯೋ ಕೂಡ ಇದೆ. ಈ ಸಂಬಂಧ ದಾಖಲೆ ಸಮೇತ ಪೊಲೀಸರಿಗೆ ದೂರು ನೀಡಿದ್ದೇವೆ. ಐಪಿಸಿ ಸೆಕ್ಷನ್ ೧೭೧(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಪೊಲೀಸರು ಎಫ್ಐಆರ್ ದಾಖಲಿಸಿ ಬಂಧಿಸಬೇಕೆಂದು ಆಗ್ರಹಿಸುತ್ತೇವೆ ಎಂದು ಹೈಗ್ರೌಂಡ್ಸ್ ಠಾಣೆ ಬಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ತಮ್ಮೇಶ್ ಗೌಡರ ನೇತೃತ್ವದಲ್ಲಿ ಅದ್ದೂರಿಯಾದ ಬ್ಯಾಟರಾಯನಪುರ ಶ್ರೀನಿವಾಸ ಕಲ್ಯಾಣೋತ್ಸವ
ಶಾಸಕರಿಂದ ಇಂದಿರಾಗಾಂಧಿ ನರ್ಸಿಂಗ್ ಬಾಲಕಿಯರ ವಿದ್ಯಾರ್ಥಿನಿಲಯ ಉದ್ಘಾಟನೆ
ಮಂಡ್ಯ ನಗರಸಭೆಯಿಂದ ದಾಳಿ: 364 ಕೆ.ಜಿ ಪ್ಲಾಸ್ಟಿಕ್ ವಶ ರೂ 23820/- ದಂಡ