- Advertisement -
national news
ಕಳೆದ ವಾರ ಲಂಡನ್ ನ ಸಂಸತ್ನಲ್ಲಿ ಭಾಷಣ ಮಾಡಿದ ಕಾಂಗ್ರೆಸ್ ನ ಕೇಂದ್ರ ನಾಯಕ ರಾಹುಲ್ ಗಾಂಧಿಯವರು ಭಾರತದ ಬಗ್ಗೆ ಮಾತನಾಡುವಾಗ ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಅದನ್ನು ರಕ್ಷಣೆ ಮಾಡಲು ಬೇರೆ ದೇಶದ ಸಹಾಯ ಬೇಕಾಗಿದೆ ಎಂದು ಹೇಳುವ ಮೂಲಕ ಭಾರತಕ್ಕೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ. ಇಂದು ದೆಹಲಿಯಲ್ಲಿ ನಡೆದ ಲೋಕಸಭಾ ಕಲಾಪದಲ್ಲಿ ಈ ವಿಷಯ ಚರ್ಚೆ ಮಾಡುವ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ಬೇರೆ ದೇಶದಲ್ಲಿ ನಮ್ಮ ದೇಶವನ್ನು ಅವಮಾನ ಮಾಡಿದ್ದಾರೆ.ಅದಕ್ಕಾಗಿ ಅವರು ಕ್ಷಮೆ ಕೇಳಲೇಬೇಕು ಎಂದು ಬಿಜೆಪಿ ನಾಯಕ್ರು ಪಟ್ಟು ಹಿಡಿದಿದ್ದಾರೆ. ನಂತರ ಕೆಲ ಕಾಲ ಕಲಅಪದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ನಂತರ ಕಲಾಪವನ್ನು ಮುಂದೂಡಲಾಯಿತು.
- Advertisement -