ಮಂಡ್ಯದ ಬೆಲ್ಲವನ್ನು ಉಡುಗೊರೆಯಾಗಿ ನೀಡಿದ ಸುಮಲತಾ ಅಂಬರೀಶ್ -ಯಾರಿಗೆ ಗೊತ್ತಾ?

politaical news:

ಕಳೆದ ಕೆಲವು ದಿನಗಳ ಹಿಂದೆ ಲೋಕಾರ್ಪಣೆಗೊಂಡ ಬೆಂಗಳೂರು ಮೈಸೂರು ಎಕ್ಸಪ್ರೆಸ್ ಹೈವೆ  ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿರವರ ಅಮೃತ ಹಸ್ತದಿಂದ ಉದ್ಘಾಟನೆಗೊಂಡಿದೆ.ಇದೆ ಸಂದರ್ಭದಲ್ಲಿ ಪ್ರಧಾನಿ ಮೋದಿಯವರಿಗೆ ಹಲವರು ಉಡುಗೋರೆ ನೀಡಿದರು ಅದೇರೀತಿ ಮಂಡ್ಯ ಸಂಸದೆ ಮತ್ತು ನಟಿ ಸುಮಲತಾ ಅಂಬರೀಶ್ ಮಂಡ್ಯದ ಪ್ರಮಖ ಸಿಹಿಯಾದ ಸಾವಯವ ಬೆಲ್ಲವನ್ನು ಉಡುಗೊರೆಯಾಗಿ ನೀಡಿದರು. ನಂತರ ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ವಿವರಣೆ ನೀಡಿದರು ಇದರ ಖುಷಿ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಒಂಡಿದ್ದಾರೆ.

‘ನನ್ನ ಸ್ವಾಭಿಮಾನಿ ಮಂಡ್ಯ ಕ್ಷೇತ್ರದಲ್ಲಿ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯನ್ನು ಲೋಕಾರ್ಪಣೆ ಮಾಡಿದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಮಾನ್ಯ ಶ್ರೀ ನರೇಂದ್ರ ಮೋದಿ ಅವರಿಗೆ, ಮಂಡ್ಯದ ಗುರುತಾಗಿರುವ ‘ಬೆಲ್ಲ’ವನ್ನು ಉಡುಗೊರೆಯಾಗಿ ನೀಡಿದೆ. ಮಾನ್ಯ ಪ್ರಧಾನ ಮಂತ್ರಿಗಳು ಅತ್ಯಂತ ಪ್ರೀತಿ ಮತ್ತು ಗೌರವದಿಂದ ಈ ನೆಲದ ಅಸ್ಮಿತೆಯಾಗಿರುವ ಬೆಲ್ಲದ ಉಡುಗೊರೆಯನ್ನು ಸ್ವೀಕರಿಸಿದ್ದು ಸಂಭ್ರಮ ತಂದಿದೆ’ ಎಂದು ಬರೆದುಕೊಂಡಿದ್ದಾರೆ.

ಉರಿಗೌಡ- ನಂಜೇಗೌಡ ವಿಚಾರದ ಬಗ್ಗೆ ಸುಮಲತಾ ಹೇಳಿದ್ದಿಷ್ಟು..

ಸರ್ಕಾರದ ಸಾಧನೆಯನ್ನು ಮನೆ ಮನೆಗೆ ತಲುಪಿಸಿ – ತಿಪ್ಪರಾಜು ಹವಾಲ್ದಾರ್

ಕೈ ಪಾಳಯದಲ್ಲಿ ಹಾಲಿ ಶಾಸಕರು ಸೇರಿ ಅವರ ಮಕ್ಕಳಿಗೆ ಟಿಕೆಟ್ ಘೋಷಣೆ

About The Author