ಹಾಸನ : ಬೇಲೂರಿನ ಶ್ರೀ ಚನ್ನಕೇಶವ ರಥೋತ್ಸವದ ವೇಳೆ ಕುರಾನ್ ಪಠಣ ಮಾಡದಂತೆ ಪ್ರತಿಭಟನೆ ನಡೆಸಲಾಗಿದೆ. ಬಜರಂಗ ದಳದವರು ಇಂದು ಬೇಲೂರಿನಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ವೇಳೆ ಓರ್ವ ಮುಸ್ಲಿಂ ಯುವಕ ಬೈಕ್ ನಲ್ಲಿ ಬಂದಿದ್ದಾನೆ. ಪ್ರತಿಭಟನೆ ನಡೆಯುತ್ತಿದ್ದಾಗಲೇ, ಕುರಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ.
ಇಂದು ಪ್ರತಿಭಟನೆ ನಡೆಸುತ್ತಿದ್ದ ಹಿಂದೂಗಳು ಮತ್ತಷ್ಟು ಆಕ್ರೋಶಗೊಳ್ಳಲು ಕಾರಣವಾಗಿದೆ. ಹಾಗಾಗಿ ಪ್ರತಿಭಟನಾಕಾರರು ಯುವಕನನ್ನು ಅಟ್ಟಾಡಿಸಿದ್ದಾರೆ. ಈ ವೇಳೆ ಬಜರಂಗದಳ ಹಾಗೂ ಮುಸ್ಲಿಂ ಯುವಕನ ನಡುವೆ ಮಾತಿನ ಚಕಮಕಿ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಘು ಲಾಠಿಚಾರ್ಜ್ ನಡೆಸಿ, ಯುವಕನನ್ನು ವಶಕ್ಕೆ ಪಡೆದಿದ್ದಾರೆ. ರಸ್ತೆ ತಡೆದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ.
‘ಸಿಟಿ ರವಿ,ಅಶ್ವಥ್ ನಾರಾಯಣ್, ರಾಜ್ಯದ ಜನರಿಗೆ ಕೆಟ್ಟ ಹೆಸರು ತರಲು ಹೊರಟಿದ್ರು..’
ಮಹಾದೇವ ಯಾರ ತಪ್ಪಿನಿಂದಾಗಿ ರಿಷಭ ಅವತಾರ ತೆಗೆದುಕೊಳ್ಳಬೇಕಾಯಿತು ಗೊತ್ತಾ..?