Thursday, June 19, 2025

Latest Posts

ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಭಗವಂತ ಖೂಬಾ

- Advertisement -

Hubballi News: ಹುಬ್ಬಳ್ಳಿ: ನನ್ನ ಯೋಗ್ಯತೆಗೆ ತಕ್ಕಂತೆ ಪ್ರಧಾನ ಮಂತ್ರಿಗಳು ಮತ್ತು ನನ್ನ ಪಕ್ಷ ನನಗೆ ಸ್ಥಾನಮಾನ ಕೊಟ್ಟಿದೆ . ಲಿಂಗಾಯತರಿಗೆ ಸೂಕ್ತ ಸ್ಥಾನಮಾನ ಕೊಟ್ಟಿಲ್ಲ ಅನ್ನುವುದು ಸರಿಯಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆಗೆ ಕೇಂದ್ರ ಸಚಿವ ಭಗವಂತ ಖೂಬಾ ತಿರುಗೇಟು ನೀಡಿದ್ದಾರೆ.

ನಗರದಲ್ಲಿಂದು ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ನಾನು ಅಪೇಕ್ಷೆ ಪಡಲಾರದೇನೆ ಪಕ್ಷ ಸದಾ ಒಂದಿಲ್ಲೊಂದು ಜವಾಬ್ದಾರಿ ಕೊಟ್ಟಿದೆ . ಲಿಂಗಾಯತರಿಗೆ ಸೂಕ್ತ ಸ್ಥಾನಮಾನ ಕೊಟ್ಟಿಲ್ಲ ಅನ್ನುವುದು ಸರಿಯಲ್ಲ ಎಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ 12 ಜನ ಬಿಜೆಪಿ ಸಂಸದರಿಗೆ ಟಿಕೆಟ್ ಕೈತಪ್ಪಲಿದೆ ಅನ್ನೋ ವಿಚಾರ ಚುನಾವಣಾ ಪ್ರಕ್ರಿಯೆ ಚುನಾವಣೆ ಘೋಷಣೆಯ ನಂತರ ನಡೆಯುತ್ತೆ ಅಲ್ಲಿಯವರೆಗೂ ಇಂತಹ ಸುಳ್ಳು ಸುದ್ದಿಗಳನ್ನು ಬಿತ್ತರಿಸಬಾರದು ಎಂದರು.

12 ಜನರ ಬದಲಾವಣೆ ಆಗುತ್ತೆ ಅನ್ನೋದು ನಿಖರವಾಗಿ ಹೇಳೋಕೆ ಆಗಲ್ಲಾ. ಪಕ್ಷದ ವೇದಿಕೆಯಲ್ಲಿ ಈ ಎಲ್ಲಾ ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತೇವೆ. ಚುನಾವಣೆಯಲ್ಲಿ ಸೋಲಿನ ಕುರಿತು ಅವಲೋಕನವನ್ನು ಮಾಡಿದ್ದೇವೆ ಎಂದರು.

ಇನ್ನು ಕಾಂಗ್ರೆಸ್ ಪಕ್ಷಕ್ಕೆ 135 ಸೀಟ್ ಬರಲು ಜನರಿಗೆ ಮೋಸ ಮಾಡಿ ಟೋಪಿ ಹಾಕಿದ್ದು ಕಾರಣ. ರಾಜ್ಯದ ಆರ್ಥಿಕ ಸ್ಥಿತಿಗತಿಯನ್ನು ಅಧೋಗತಿಗೆ ತರಲು ಹೊರಟಿದ್ದಾರೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಬೇಕು ಅನ್ನುವ ದುರುದ್ದೇಶದಿಂದ ಆಶ್ವಾಸನೆ ನೀಡಿದ್ದಾರೆ.

ಕಾಂಗ್ರೆಸ್‌ನ ಎಟಿಎಂನಂತೆ ರಾಜ್ಯ ಸರ್ಕಾರ ವರ್ತಿಸುತ್ತಿದೆ

ಕಾಂಗ್ರೆಸ್ ದುರುದ್ದೇಶದ ಬಗ್ಗೆ ಜನರು ಈಗಾಗಲೇ ಕಳವಳ ವ್ಯಕ್ತಪಡಿಸುತ್ತಿದ್ದಾರೆ ಇನ್ನೂ ಎರಡು ತಿಂಗಳಲ್ಲಿ ಕಾಂಗ್ರೆಸ್ ನವರ ಬಣ್ಣವನ್ನು ಮತದಾರರು ಬಯಲಿಗೆ ತರುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉದ್ಯಮಿಗಳ ಸಾಲ ಮನ್ನಾ ಮಾಡಿದ್ದೇವೆ ಅನ್ನೋದು ಕಾಂಗ್ರೆಸ್‌ನ ಸುಳ್ಳು ಆರೋಪ ಮಾಡುತ್ತದೆ.

ಉದ್ಯಮಿಗಳ ಸಾಲಮನ್ನಾ ಮಾಡಿರುವ ದಾಖಲೆಗಳಿದ್ರೆ ಕೊಡಿ. ಮೋದಿಯವರು ಪ್ರತಿಯೊಬ್ಬರಿಗೆ ಹದಿನೈದು ಲಕ್ಷ ಕೊಡುತ್ತಾರೆ ಎಂದಿರುವ ವಿಡಿಯೋ ದಾಖಲೆಗಳಿದ್ದರೆ ಕೊಡಿ.  ನಾವು ಸಿದ್ದರಾಮಯ್ಯನವರು ನೀಡಿರುವ ಆಶ್ವಾಸನೆಗಳ ಕುರಿತು ವಿಡಿಯೋ ಕೊಟ್ಟಿದ್ದೇವೆ ಎಂದರು.

ಹುಬ್ಬಳ್ಳಿ ಇಎಸ್ಐ ಆಸ್ಪತ್ರೆಯಲ್ಲಿ ಹಾವುಗಳ ಹಾವಳಿ: ಆತಂಕದಲ್ಲಿಯೇ ಸಿಬ್ಬಂದಿ ಹಾಗೂ ಸಾರ್ವಜನಿಕರು

ಪೌರಕಾರ್ಮಿಕರಿಗೆ ಕಳಪೆ ಆಹಾರ: ನಿರ್ಲಕ್ಷ್ಯವೋ..? ಕಮೀಷನ್ ಕರಾಳ ದಂಧೆಯೋ…?

ಕೈಕೊಟ್ಟ ಮುಂಗಾರು: ಮಳೆಗಾಗಿ ದೇವರ ಮೊರೆಹೋದ ಶಾಸಕ ಕೋನರೆಡ್ಡಿ..

- Advertisement -

Latest Posts

Don't Miss