Kolar News: ಕೋಲಾರ: ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ಕೊಡುತ್ತಿಲ್ಲವೆಂದು ಕಾಂಗ್ರೆಸ್ ಆರೋಪಿಸಿದ್ದು, ಕೋಲಾರದಲ್ಲಿಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಕೋಲಾರ ನಗರದ ಗಾಂಧಿವನದ ಬಳಿ ಪ್ರತಿಭಟನೆ ನಡೆದಿದ್ದು, ಕೇಂದ್ರದ ಮಲತಾಯಿ ಧೋರಣೆ ವಿರೋಧಿಸಿ, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯಕ್ಕೆ ಅಕ್ಕಿ ವಿತರಣೆಯಲ್ಲಿ ರಾಜಕೀಯ ಮಾಡುತ್ತಿರುವ ನಿಲುವಿಗೆ ಖಂಡನೆ ಇದೆ. ಕೂಡಲೇ ರಾಜ್ಯಕ್ಕೆ ಅಕ್ಕಿ ನೀಡಬೇಕೆಂದು ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ, ಕೋಲಾರ ಶಾಸಕ ಕೊತ್ತೂರು ಜಿ ಮಂಜುನಾಥ್, ಮಾಲೂರು ಶಾಸಕ ನಂಜೇಗೌಡ, ಎಂಎಲ್ ಸಿ ಅನಿಲ್ ಕುಮಾರ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.
ಜಗದೀಶ್ ಶೆಟ್ಟರ್ಗೆ ಮತ್ತೊಮ್ಮೆ ಮುಖಭಂಗ: ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಿದ ಬಿಜೆಪಿ
ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಶಾಕ್: ಧಾರವಾಡಕ್ಕೆ ಎಂಟ್ರಿ ಕೊಡಲು ಅನುಮತಿ ನಿರಾಕರಿಸಿದ ಕೋರ್ಟ್