State News: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿರುವ ಸಿದ್ದರಾಮಯ್ಯ, ಇಂದು ತಮ್ಮ 14ನೇ ಬಜೆಟ್ ಮಂಡಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆಗಿಂತ ಮುಂಚಿತವಾಗಿ ಟ್ವೀಟ್ ಒಂದನ್ನು ಮಾಡಿದ್ದಾರೆ. ಟೀಟ್ ನಲ್ಲಿ ತಮ್ಮ ಜನತೆಯನ್ನುದ್ದೇಶಿಸಿ ಮಾತುಗಳನ್ನು ಆಡಿದ್ದಾರೆ.
ನನ್ನ ಪ್ರೀತಿಯ ಕನ್ನಡಿಗ ಬಂಧುಗಳೇ, ಜನತೆಯೇ ನನ್ನ ಪಾಲಿನ ಜನಾರ್ಧನರು. ಇನ್ನು ಕೆಲವೇ ಹೊತ್ತಿನಲ್ಲಿ ನನ್ನ ಹದಿನಾಲ್ಕನೇ ಬಜೆಟ್ ಮಂಡಿಸಲಿದ್ದೇನೆ. ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ. ನನ್ನ ಹಿಂದಿನ ಎಲ್ಲ ಬಜೆಟ್ ಗಳಲ್ಲಿ ‘ಸರ್ವರಿಗೂ ಸಮಪಾಲು, ಸಮಬಾಳು’ ಎಂಬ ಮೂಲಮಂತ್ರದ ‘ಕರ್ನಾಟಕ ಮಾದರಿ’ಯ ಆಡಳಿತವನ್ನು ನೀಡುವ ಪ್ರಯತ್ನ ಮಾಡುತ್ತಾ ಬಂದಿದ್ದೆ. ಪ್ರಸ್ತುತ ಮಂಡಿಸುತ್ತಿರುವ ಆಯವ್ಯಯ ಪತ್ರದಲ್ಲಿ ಈ ಮಾದರಿಯನ್ನು ಇನ್ನಷ್ಟು ಆಳವಾಗಿಸುವ, ವಿಸ್ತಾರವಾಗಿಸುವ ಪ್ರಯತ್ನ ಮಾಡುತ್ತೇನೆ. ರಾಜಕೀಯ ಪ್ರೇರಿತ ಟೀಕೆ-ಟಿಪ್ಪಣಿಗಳಿಗೆ ಕಿವಿಗೊಡಬೇಡಿ. ನುಡಿದಂತೆಯೇ ನಡೆದಿದ್ದೇನೆ, ಮುಂದೆಯೂ ನಡೆಯುತ್ತೇನೆ. ನಿಮ್ಮ ನಂಬಿಕೆ-ವಿಶ್ವಾಸಗಳನ್ನು ಹುಸಿಗೊಳಿಸುವುದಿಲ್ಲ. ಇದು ನಾನು ನೀಡುವ ಅತ್ಯುನ್ನತ ಗ್ಯಾರಂಟಿ.
ನನ್ನ ಪ್ರೀತಿಯ ಕನ್ನಡಿಗ ಬಂಧುಗಳೇ,
ಜನತೆಯೇ ನನ್ನ ಪಾಲಿನ ಜನಾರ್ಧನರು. ಇನ್ನು ಕೆಲವೇ ಹೊತ್ತಿನಲ್ಲಿ ನನ್ನ ಹದಿನಾಲ್ಕನೇ ಬಜೆಟ್ ಮಂಡಿಸಲಿದ್ದೇನೆ. ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ.ನನ್ನ ಹಿಂದಿನ ಎಲ್ಲ ಬಜೆಟ್ ಗಳಲ್ಲಿ ‘ಸರ್ವರಿಗೂ ಸಮಪಾಲು, ಸಮಬಾಳು’ ಎಂಬ ಮೂಲಮಂತ್ರದ ‘ಕರ್ನಾಟಕ ಮಾದರಿ’ಯ ಆಡಳಿತವನ್ನು ನೀಡುವ…
— Siddaramaiah (@siddaramaiah) July 7, 2023
14ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದುಗೆ ಸ್ಪೆಷಲ್ ಗಿಫ್ಟ್..! ಯಾರಿಂದ ಗೊತ್ತಾ..?!